AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ

ದೇಶದಲ್ಲಿ ಇದೇ ಮೊದಲ ಬಾರಿಗೆ ತಮಿಳುನಾಡಿನ ಜೋಡಿಯೊಂದು ಬ್ಲಾಕ್​ ಚೈನ್​ ಮೂಲಕ ಮದುವೆಯಾಗಿದ್ದಾರೆ. ಮೆಟಾವರ್ಸ್​ನಲ್ಲಿ ಮದುವೆಯಾದ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ
ಬ್ಲಾಕ್​ಚೈನ್ ಮೂಲಕ​ ಮದುವೆಯಾದ ದಂಪತಿ
TV9 Web
| Edited By: |

Updated on: Feb 06, 2022 | 10:34 AM

Share

ದೇಶದಲ್ಲಿ ಇದೇ ಮೊದಲ ಬಾರಿಗೆ ತಮಿಳುನಾಡಿನ ಜೋಡಿಯೊಂದು ಬ್ಲಾಕ್​ ಚೈನ್ (Block Chain)​ ಮೂಲಕ ಮದುವೆಯಾಗಿದ್ದಾರೆ. ಮೆಟಾವರ್ಸ್​ನಲ್ಲಿ ಮದುವೆಯಾದ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಓಪನ್​ ಸೀ (OpenSea) ಪ್ಲಾಟ್​ಫಾರ್ಮ್​ ಮೂಲಕ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದಾರೆ. ಇಬ್ಬರೂ ಮಹಾರಾಷ್ಟ್ರ ಮೂಲದವರಾಗಿದ್ದು ಬ್ಲಾಕ್​ ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ಭಾರತದ ಮೊದಲ ದಂಪತಿ ಎನಿಸಿಕೊಂಡಿದ್ದಾರೆ.

ಶ್ರುತಿ ನಾಯರ್​ ಮತ್ತು ಅನಿಲ್​ ನರಸಿಪುರಮ್​ ಎನ್ನುವ ಜೋಡಿ ಕಳೆದ ನವೆಂಬರ್​ನಲ್ಲಿ  ಕೊರೊನಾ ಕಾರಣದಿಂದ ರಿಜಿಸ್ಟರ್​​ ಮ್ಯಾರೆಜ್​ ಆಗಿದ್ದರು. ಸಂಬಂಧವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಇದೀಗ ಬ್ಲಾಕ್​ ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದಾರೆ. ಈ ಕುರಿತು ಅನಿಲ್​ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, ಮದುವೆಯ ಕತೆಯನ್ನು ಹೇಳಿಕೊಂಡಿದ್ದಾರೆ. ನಾನು ಮತ್ತು ಶೃತಿ ಕೊರೊನಾ ಕಾರಣದಿಂದ ಕಳೆದ ನವೆಂಬರ್​ 15ರಂದು ರಿಜಿಸ್ಟರ್​ ಮ್ಯಾರೆಜ್​ ಆಗಿದ್ದೆವು . ಇದೀಗ ಸಂಬಂಧವನ್ನು  ಗಟ್ಟಿಗೊಳಿಸುವ ಉದ್ದೇಶದಿಂದ ಇದೀಗ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ  ನೋಂದಾಯಿಸಿಕೊಂಡಿದ್ದೇವೆ ಎಂದಿದ್ದಾರೆ.

ಲಿಂಕ್ಡ್​​ ಇನ್​ ವರದಿಯ ಪ್ರಕಾರ ಶೃತಿ ಈ ಬಗ್ಗೆ ಮಾತನಾಡಿ ಏಥೇರಿಯಂ ಸ್ಮಾರ್ಟ್​ ಕಾಂಟ್ರಾಕ್ಟ್​ ಆದ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದೇವೆ. ನಮ್ಮ ಒಪ್ಪಂದವು ಎನ್​ಎಫ್​ಟಿ ಮೂಲಕ ಇರುತ್ತದೆ. ನರಸಿಪುರಮ್​​ ಅವರು ಡಿಸೈನ್​ ಪ್ರೊಪೆಸರ್​ ಆಗಿದ್ದಾರೆ ಎಂದಿದ್ದಾರೆ. ಮುಂದುವರೆದು ಮಾತನಾಡಿ, ನಾವು ಯಾವುದೇ ರೀತಿಯ ದೊಡ್ಡ ಭರವಸೆಯನ್ನು ನೀಡಿಕೊಳ್ಳುವುದಿಲ್ಲ. ಜತೆಯಾಗಿ ಸದಾಕಾಲ ಇರಲು ಬಯಸುತ್ತೇವೆ ಎಂದಿದ್ದಾರೆ. ಇನ್ನು ಮದುವೆ ಸಾಮಾನ್ಯವಾಗಿ ಹಲವು ದಿನಗಳವರೆಗೆ ನಡೆಯುತ್ತದೆ ಆದರೆ ಈ  ತಂತ್ರಜ್ಞಾನದ ಮೂಲಕ ಆದ ಮದುವೆ ಕೇವಲ 15 ನಿಮಿಷಗಳಲ್ಲಿ ಮುಗಿದಿದೆ ಎಂದು ಹಂಚಿಕೊಂಡಿದ್ದಾರೆ. ಸದ್ಯ ಇವರ ಮದುವೆಯ ಸ್ಟೋರಿ ಎಲ್ಲೆಡೆ ವೈರಲ್​ ಆಗಿದೆ.

ಇದನ್ನೂ ಓದಿ:

ಆನೆಗೂ ಜೆಸಿಬಿ ವಾಹನಕ್ಕೂ ಫೈಟ್ ಗೆದ್ದೋರ್ಯಾರು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ (viral video)

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು