AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ

ದೇಶದಲ್ಲಿ ಇದೇ ಮೊದಲ ಬಾರಿಗೆ ತಮಿಳುನಾಡಿನ ಜೋಡಿಯೊಂದು ಬ್ಲಾಕ್​ ಚೈನ್​ ಮೂಲಕ ಮದುವೆಯಾಗಿದ್ದಾರೆ. ಮೆಟಾವರ್ಸ್​ನಲ್ಲಿ ಮದುವೆಯಾದ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ
ಬ್ಲಾಕ್​ಚೈನ್ ಮೂಲಕ​ ಮದುವೆಯಾದ ದಂಪತಿ
TV9 Web
| Edited By: |

Updated on: Feb 06, 2022 | 10:34 AM

Share

ದೇಶದಲ್ಲಿ ಇದೇ ಮೊದಲ ಬಾರಿಗೆ ತಮಿಳುನಾಡಿನ ಜೋಡಿಯೊಂದು ಬ್ಲಾಕ್​ ಚೈನ್ (Block Chain)​ ಮೂಲಕ ಮದುವೆಯಾಗಿದ್ದಾರೆ. ಮೆಟಾವರ್ಸ್​ನಲ್ಲಿ ಮದುವೆಯಾದ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಓಪನ್​ ಸೀ (OpenSea) ಪ್ಲಾಟ್​ಫಾರ್ಮ್​ ಮೂಲಕ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದಾರೆ. ಇಬ್ಬರೂ ಮಹಾರಾಷ್ಟ್ರ ಮೂಲದವರಾಗಿದ್ದು ಬ್ಲಾಕ್​ ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ಭಾರತದ ಮೊದಲ ದಂಪತಿ ಎನಿಸಿಕೊಂಡಿದ್ದಾರೆ.

ಶ್ರುತಿ ನಾಯರ್​ ಮತ್ತು ಅನಿಲ್​ ನರಸಿಪುರಮ್​ ಎನ್ನುವ ಜೋಡಿ ಕಳೆದ ನವೆಂಬರ್​ನಲ್ಲಿ  ಕೊರೊನಾ ಕಾರಣದಿಂದ ರಿಜಿಸ್ಟರ್​​ ಮ್ಯಾರೆಜ್​ ಆಗಿದ್ದರು. ಸಂಬಂಧವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಇದೀಗ ಬ್ಲಾಕ್​ ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದಾರೆ. ಈ ಕುರಿತು ಅನಿಲ್​ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, ಮದುವೆಯ ಕತೆಯನ್ನು ಹೇಳಿಕೊಂಡಿದ್ದಾರೆ. ನಾನು ಮತ್ತು ಶೃತಿ ಕೊರೊನಾ ಕಾರಣದಿಂದ ಕಳೆದ ನವೆಂಬರ್​ 15ರಂದು ರಿಜಿಸ್ಟರ್​ ಮ್ಯಾರೆಜ್​ ಆಗಿದ್ದೆವು . ಇದೀಗ ಸಂಬಂಧವನ್ನು  ಗಟ್ಟಿಗೊಳಿಸುವ ಉದ್ದೇಶದಿಂದ ಇದೀಗ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ  ನೋಂದಾಯಿಸಿಕೊಂಡಿದ್ದೇವೆ ಎಂದಿದ್ದಾರೆ.

ಲಿಂಕ್ಡ್​​ ಇನ್​ ವರದಿಯ ಪ್ರಕಾರ ಶೃತಿ ಈ ಬಗ್ಗೆ ಮಾತನಾಡಿ ಏಥೇರಿಯಂ ಸ್ಮಾರ್ಟ್​ ಕಾಂಟ್ರಾಕ್ಟ್​ ಆದ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದೇವೆ. ನಮ್ಮ ಒಪ್ಪಂದವು ಎನ್​ಎಫ್​ಟಿ ಮೂಲಕ ಇರುತ್ತದೆ. ನರಸಿಪುರಮ್​​ ಅವರು ಡಿಸೈನ್​ ಪ್ರೊಪೆಸರ್​ ಆಗಿದ್ದಾರೆ ಎಂದಿದ್ದಾರೆ. ಮುಂದುವರೆದು ಮಾತನಾಡಿ, ನಾವು ಯಾವುದೇ ರೀತಿಯ ದೊಡ್ಡ ಭರವಸೆಯನ್ನು ನೀಡಿಕೊಳ್ಳುವುದಿಲ್ಲ. ಜತೆಯಾಗಿ ಸದಾಕಾಲ ಇರಲು ಬಯಸುತ್ತೇವೆ ಎಂದಿದ್ದಾರೆ. ಇನ್ನು ಮದುವೆ ಸಾಮಾನ್ಯವಾಗಿ ಹಲವು ದಿನಗಳವರೆಗೆ ನಡೆಯುತ್ತದೆ ಆದರೆ ಈ  ತಂತ್ರಜ್ಞಾನದ ಮೂಲಕ ಆದ ಮದುವೆ ಕೇವಲ 15 ನಿಮಿಷಗಳಲ್ಲಿ ಮುಗಿದಿದೆ ಎಂದು ಹಂಚಿಕೊಂಡಿದ್ದಾರೆ. ಸದ್ಯ ಇವರ ಮದುವೆಯ ಸ್ಟೋರಿ ಎಲ್ಲೆಡೆ ವೈರಲ್​ ಆಗಿದೆ.

ಇದನ್ನೂ ಓದಿ:

ಆನೆಗೂ ಜೆಸಿಬಿ ವಾಹನಕ್ಕೂ ಫೈಟ್ ಗೆದ್ದೋರ್ಯಾರು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ (viral video)

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!
ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!
ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು
ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು
ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ
ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ
ಸಂಧ್ಯಾ ಜೊತೆ ಸರಳವಾಗಿ ವಿವಾಹ ಆದ ಉಗ್ರಂ ಮಂಜು; ಇಲ್ಲಿದೆ ವಿಡಿಯೋ
ಸಂಧ್ಯಾ ಜೊತೆ ಸರಳವಾಗಿ ವಿವಾಹ ಆದ ಉಗ್ರಂ ಮಂಜು; ಇಲ್ಲಿದೆ ವಿಡಿಯೋ
ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು
ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು
ರೈಲ್ವೆ ಹಳಿಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ರೈಲು
ರೈಲ್ವೆ ಹಳಿಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ರೈಲು
ಯಾರೇ ಗೆದ್ರು ಖುಷೀನೆ; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ
ಯಾರೇ ಗೆದ್ರು ಖುಷೀನೆ; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ