AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ

ದೇಶದಲ್ಲಿ ಇದೇ ಮೊದಲ ಬಾರಿಗೆ ತಮಿಳುನಾಡಿನ ಜೋಡಿಯೊಂದು ಬ್ಲಾಕ್​ ಚೈನ್​ ಮೂಲಕ ಮದುವೆಯಾಗಿದ್ದಾರೆ. ಮೆಟಾವರ್ಸ್​ನಲ್ಲಿ ಮದುವೆಯಾದ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ
ಬ್ಲಾಕ್​ಚೈನ್ ಮೂಲಕ​ ಮದುವೆಯಾದ ದಂಪತಿ
TV9 Web
| Edited By: |

Updated on: Feb 06, 2022 | 10:34 AM

Share

ದೇಶದಲ್ಲಿ ಇದೇ ಮೊದಲ ಬಾರಿಗೆ ತಮಿಳುನಾಡಿನ ಜೋಡಿಯೊಂದು ಬ್ಲಾಕ್​ ಚೈನ್ (Block Chain)​ ಮೂಲಕ ಮದುವೆಯಾಗಿದ್ದಾರೆ. ಮೆಟಾವರ್ಸ್​ನಲ್ಲಿ ಮದುವೆಯಾದ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಓಪನ್​ ಸೀ (OpenSea) ಪ್ಲಾಟ್​ಫಾರ್ಮ್​ ಮೂಲಕ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದಾರೆ. ಇಬ್ಬರೂ ಮಹಾರಾಷ್ಟ್ರ ಮೂಲದವರಾಗಿದ್ದು ಬ್ಲಾಕ್​ ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ಭಾರತದ ಮೊದಲ ದಂಪತಿ ಎನಿಸಿಕೊಂಡಿದ್ದಾರೆ.

ಶ್ರುತಿ ನಾಯರ್​ ಮತ್ತು ಅನಿಲ್​ ನರಸಿಪುರಮ್​ ಎನ್ನುವ ಜೋಡಿ ಕಳೆದ ನವೆಂಬರ್​ನಲ್ಲಿ  ಕೊರೊನಾ ಕಾರಣದಿಂದ ರಿಜಿಸ್ಟರ್​​ ಮ್ಯಾರೆಜ್​ ಆಗಿದ್ದರು. ಸಂಬಂಧವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಇದೀಗ ಬ್ಲಾಕ್​ ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದಾರೆ. ಈ ಕುರಿತು ಅನಿಲ್​ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, ಮದುವೆಯ ಕತೆಯನ್ನು ಹೇಳಿಕೊಂಡಿದ್ದಾರೆ. ನಾನು ಮತ್ತು ಶೃತಿ ಕೊರೊನಾ ಕಾರಣದಿಂದ ಕಳೆದ ನವೆಂಬರ್​ 15ರಂದು ರಿಜಿಸ್ಟರ್​ ಮ್ಯಾರೆಜ್​ ಆಗಿದ್ದೆವು . ಇದೀಗ ಸಂಬಂಧವನ್ನು  ಗಟ್ಟಿಗೊಳಿಸುವ ಉದ್ದೇಶದಿಂದ ಇದೀಗ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ  ನೋಂದಾಯಿಸಿಕೊಂಡಿದ್ದೇವೆ ಎಂದಿದ್ದಾರೆ.

ಲಿಂಕ್ಡ್​​ ಇನ್​ ವರದಿಯ ಪ್ರಕಾರ ಶೃತಿ ಈ ಬಗ್ಗೆ ಮಾತನಾಡಿ ಏಥೇರಿಯಂ ಸ್ಮಾರ್ಟ್​ ಕಾಂಟ್ರಾಕ್ಟ್​ ಆದ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದೇವೆ. ನಮ್ಮ ಒಪ್ಪಂದವು ಎನ್​ಎಫ್​ಟಿ ಮೂಲಕ ಇರುತ್ತದೆ. ನರಸಿಪುರಮ್​​ ಅವರು ಡಿಸೈನ್​ ಪ್ರೊಪೆಸರ್​ ಆಗಿದ್ದಾರೆ ಎಂದಿದ್ದಾರೆ. ಮುಂದುವರೆದು ಮಾತನಾಡಿ, ನಾವು ಯಾವುದೇ ರೀತಿಯ ದೊಡ್ಡ ಭರವಸೆಯನ್ನು ನೀಡಿಕೊಳ್ಳುವುದಿಲ್ಲ. ಜತೆಯಾಗಿ ಸದಾಕಾಲ ಇರಲು ಬಯಸುತ್ತೇವೆ ಎಂದಿದ್ದಾರೆ. ಇನ್ನು ಮದುವೆ ಸಾಮಾನ್ಯವಾಗಿ ಹಲವು ದಿನಗಳವರೆಗೆ ನಡೆಯುತ್ತದೆ ಆದರೆ ಈ  ತಂತ್ರಜ್ಞಾನದ ಮೂಲಕ ಆದ ಮದುವೆ ಕೇವಲ 15 ನಿಮಿಷಗಳಲ್ಲಿ ಮುಗಿದಿದೆ ಎಂದು ಹಂಚಿಕೊಂಡಿದ್ದಾರೆ. ಸದ್ಯ ಇವರ ಮದುವೆಯ ಸ್ಟೋರಿ ಎಲ್ಲೆಡೆ ವೈರಲ್​ ಆಗಿದೆ.

ಇದನ್ನೂ ಓದಿ:

ಆನೆಗೂ ಜೆಸಿಬಿ ವಾಹನಕ್ಕೂ ಫೈಟ್ ಗೆದ್ದೋರ್ಯಾರು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ (viral video)

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ