AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರಜೆಯಲ್ಲಿ ಮಗ ಅರ್ಧ ದಿನ ತಂದೆ ಜತೆ, ಇನ್ನರ್ಧ ದಿನ ತಾಯಿ ಜತೆ, ಡಿವೋರ್ಸ್​ಗೆ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್​

ಇತ್ತೀಚಿನ ದಿನಗಳಲ್ಲಿ ಡಿವೋರ್ಸ್‌ ಸಾಮಾನ್ಯವಾಗಿಬಿಟ್ಟಿದೆ. ಆದ್ರೆ ಇದು ಮಕ್ಕಳ ಮೇಲೆ ಋಣಾತ್ಮಕವಾಗಿ ಪರಿಣಾಮವನ್ನು ಬೀರುತ್ತದೆ. ಹೌದು ಮಕ್ಕಳು ಒಂದಾ ತಾಯಿ ಪ್ರೀತಿಯಿಂದ ವಂಚಿತರಾಗಬೇಕಾಗುತ್ತದೆ ಅಥವಾ ತಂದೆಯ ಪ್ರೀತಿಯಿಂದ ವಂಚಿತರಾಗಬೇಕಾಗುತ್ತದೆ. ಇಲ್ಲವೇ ಅಪ್ಪ ಅಮ್ಮನ ನಡುವೆಯೇ ಮಕ್ಕಳನ್ನು ನೋಡಿಕೊಳ್ಳುವ ವಿಚಾರವಾಗಿ ಒಂದಷ್ಟು ವ್ಯಾಜ್ಯಗಳು ಏರ್ಪಡುತ್ತವೆ. ಇದೀಗ ಅಂತಹದ್ದೇ ಪ್ರಕರಣವೊಂದರ ವಿಡಿಯೋ ವೈರಲ್‌ ಆಗುತ್ತಿದೆ.

Viral: ರಜೆಯಲ್ಲಿ ಮಗ ಅರ್ಧ ದಿನ ತಂದೆ ಜತೆ, ಇನ್ನರ್ಧ ದಿನ ತಾಯಿ ಜತೆ, ಡಿವೋರ್ಸ್​ಗೆ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್​
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Sep 19, 2024 | 12:44 PM

Share

ದಂಪತಿಗಳು ವಿಚ್ಛೇತದ ಪಡೆದಾಗ ಮಗುವನ್ನು ನೋಡಿಕೊಳ್ಳುವ ವಿಚಾರವಾಗಿ ಗಂಡ ಹೆಂಡತಿಯ ನಡುವೆ ವ್ಯಾಜ್ಯಗಳು ಏರ್ಪಡುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಕೋರ್ಟ್‌ ಆದೇಶದ ಮೇರೆಗೆ ಅಪ್ರಾಪ್ತ ಮಕ್ಕಳು ತಾಯಿಯ ಸುಪರ್ದಿಗೆ ಹೋಗುತ್ತಾರೆ. ಇಂತಹದ್ದೇ ಪ್ರಕರಣವೊಂದು ಇದೀಗ ನಡೆದಿದ್ದು, ವ್ಯಕ್ತಿಯೊಬ್ಬರು ನನ್ನ ಮಗ ನನ್ನ ಜೊತೆಯೇ ಜೊತೆಗೆಯೇ ಇರ್ಬೇಕು ಎಂದು ಕೋರ್ಟ್‌ ಮೆಟ್ಟಿಲೇರಿದ್ದು, ವಾದ ವಿವಾದಗಳನ್ನು ಆಲಿಸಿದ ಕರ್ನಾಟಕ ಹೈಕೋರ್ಟ್‌ ನ್ಯಾಯಾಲಯದ ದ್ವಿಸದಸ್ಯ ಪೀಠದ ನ್ಯಾಯಾಧೀಶರು ರಜಾ ದಿನಗಳಲ್ಲಿ ಮಗು ಅರ್ಧ ದಿವಸ ತಂದೆ ಜೊತೆ ಇರ್ಲಿ ಇನ್ನರ್ಧ ದಿವಸ ತಾಯಿ ಜೊತೆ ಇರ್ಲಿ ಎಂದು ತೀರ್ಪನ್ನು ನೀಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಡಿವೋರ್ಸ್‌ ಬಳಿಕ ಮಗು ತಾಯಿಯ ಜೊತೆ ಇರಬೇಕೆಂಬ ಆದೇಶ ಬಂದ ನಂತರ ಮಗು ನನ್ನ ಜೊತೆಯೇ ಇರಬೇಕೆಂದು ತಂದೆಯೊಬ್ಬರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ವಾದ ವಿವಾದಗಳು ನಡೆದ ಬಳಿಕ ಹೈಕೋರ್ಟ್‌ ದ್ವಿಸದಸ್ಯ ಪೀಠ ನ್ಯಾಯಾಧಿಶರು ಮಗನಿಗೆ ಇನ್ನೂ 14 ವರ್ಷ, ಆತ ನಿಮ್ಮ ಜೊತೆಯೇ ಇದ್ದರೆ ನೀವು ಮುದ್ದು ಮಾಡಿ, ಅದು ಅವನ ಓದಿನ ಮೇಲೆ ಪರಿಣಾಮ ಬೀರಬಹುದು. ಹಾಗಾಗಿ ರಜೆಯ ದಿನಗಳಲ್ಲಿ ಮಗು ಅರ್ಧ ದಿವಸ ತಂದೆಯ ಜೊತೆಗಿರಲಿ ಹಾಗೂ ಅರ್ಧ ದಿನ ತಾಯಿ ಜೊತೆಗೆ ಇರಲಿ, ಒಂದು ಹಬ್ಬವನ್ನು ತಂದೆಯ ಜೊತೆಗೆ ಆಚರಿಸಲಿ ಇನ್ನೊಂದು ಹಬ್ಬವನ್ನು ತಾಯಿಯ ಜೊತೆಯಲ್ಲಿ ಆಚರಣೆ ಮಾಡಲಿ ಎಂಬ ತೀರ್ಪನ್ನು ನೀಡಿದ್ದಾರೆ. ನಾವು ಒತ್ತಾಯ ಮಾಡಿ ಮಗುವನ್ನು ಕಳಿಸಲು ಆಗೊಲ್ಲ, ಹಾಗಾಗಿ ಇನ್ನೂ 4 ವರ್ಷ ಕಾದ್ರೆ ನಿಮ್ಮ ಮಗನಿಗೆ 18 ವರ್ಷ ಆಗುತ್ತೆ, ಅದ್ರ ಬಳಿಕ ಆತ ಯಾರ ಜೊತೆ ಇರಬೇಕೆಂದು ಬಯಸುತ್ತಾನೋ ಅವರ ಜೊತೆಯೇ ಇರಲಿ ಇಲ್ಲವೇ ಮಗುವಿಗಾಗಿ ನೀವಿಬ್ಬರೂ ಗಂಡ ಹೆಂಡ್ತಿ ಹೊಂದಿಕೊಂಡು ಹೋಗಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಾರ್ಗೆಟ್​ ತಲುಪೋ ಭರದಲ್ಲಿ ರಾತ್ರಿ ಹಗಲೆನ್ನದೇ ಕೆಲಸ ಮಾಡಿ ಯುವತಿ ಸಾವು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು Law (ಕಾನೂನು) ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಎರಡೂ ಕಡೆಗಳ ವಾದ ವಿವಾದಗಳನ್ನು ಆಲಿಸಿದ ಬಳಿಕ ಕರ್ನಾಟಕ ಹೈಕೋರ್ಟ್‌ ದ್ವಿಸದಸ್ಯ ಪೀಠದ ನ್ಯಾಯಾಧೀಶರು ರಜಾ ದಿನದಲ್ಲಿ ಮಗು ಅರ್ಧ ದಿನ ತಂದೆಯ ಜೊತೆ ಕಳೆಯಲಿ ಹಾಗೂ ಇನ್ನರ್ಧ ದಿವಸ ತಾಯಿಯ ಜೊತೆ ಇರಲಿ ಎಂಬ ತೀರ್ಪನ್ನು ನೀಡುವ ದೃಶ್ಯವನ್ನು ಕಾಣಬಹುದು. ಇದನ್ನೇಲ್ಲಾ ನೋಡಿದಾಗ ಮಗುವಿಗಾಗಿ, ಮಗುವಿನ ಭವಿಷ್ಯಕ್ಕಾಗಿ ಪತಿ ಪತ್ನಿ ತಮ್ಮ ಮನಸ್ಥಾಪಗಳನ್ನು ಪಕ್ಕಕ್ಕಿಟ್ಟು ಜೊತೆಯಾಗಿ ಬಾಳುವುದೇ ಸೂಕ್ತವೆಂದು ತೋರುತ್ತದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:43 pm, Thu, 19 September 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ