AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು ಇದೆಂತಾ ಅವಸ್ಥೆ ಮಾರ್ರೆ, ಜೋಡಿಯ ನಾಗಿಣಿ ಡಾನ್ಸ್

ಇತ್ತೀಚಿನ ದಿನಗಳಲ್ಲಿ ರೀಲ್ಸ್‌ ಹುಚ್ಚು ಬಹಳನೇ ಹೆಚ್ಚಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗ್ಬೇಕಂತಾ ಕೆಲವೊಬ್ಬರು ವಿತ್ರ ವಿಚಿತ್ರ ಸರ್ಕಸ್‌ ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು, ಗದ್ದೆಯ ಕೆಸರು ನೀರಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Video: ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು ಇದೆಂತಾ ಅವಸ್ಥೆ ಮಾರ್ರೆ, ಜೋಡಿಯ ನಾಗಿಣಿ ಡಾನ್ಸ್
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 29, 2024 | 5:30 PM

Share

ರೀಲ್ಸ್‌ ಕ್ರೇಜ್‌ ಊಹಿಸಲು ಸಾಧ್ಯವಾಗದಷ್ಟು ಹೆಚ್ಚಾಗಿದೆ. ರೀಲ್ಸ್‌ ಮಾಡುವ ಮೂಲಕ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಲು, ರಾತ್ರೋರಾತ್ರಿ ಫೇಮಸ್‌ ಆಗಲು ಬಹುತೇಕರು ಬಯಸುತ್ತಾರೆ. ಮತ್ತು ಲೈಕ್ಸ್‌ ಮತ್ತು ಫಾಲೋವರ್ಸ್‌ ಮೂಲಕ ಖ್ಯಾತಿಯನ್ನು ಹೆಚ್ಚಿಸಿಕೊಳ್ಳಲು ಹವಣಿಸುತ್ತಿರುತ್ತಾರೆ. ಇದಕ್ಕಾಗಿ ಯುವಕ ಯುವತಿಯರು ಚಿತ್ರ ವಿಚಿತ್ರ ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಅದರಲ್ಲಿ ಕೆಲವೊಂದು ವಿಡಿಯೋಗಳು ನಮಗೆ ನಗು ತರಿಸುವಂತಿರುತ್ತವೆ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಫೇಮಸ್‌ ಆಗುವ ಸಲುವಾಗಿ ಗದ್ದೆಯಲ್ಲಿ ಭತ್ತ ನಾಟಿ ಕೆಲಸ ಬಿಟ್ಟು ಗದ್ದೆಯ ಕೆಸರು ನೀರಿನಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ನಗ್ತಿದ್ದಾರೆ.

Vinay VK99351 ಹೆಸರಿನ ಯೂಟ್ಯೂಬ್‌ ಚಾನೆಲ್‌ ಒಂದರಲ್ಲಿ ಈ ರೀಲ್ಸ್‌ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ʼನಾಗಿಣಿ ಡಾನ್ಸ್‌ʼ ಎಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ವಿಡಿಯೋದಲ್ಲಿ ಭತ್ತ ನಾಟಿ ಮಾಡೋದನ್ನು ಬಟ್ಟು ಜೋಡಿಯೊಂದು ಗದ್ದೆಯ ಕೆಸರು ನೀರಿನಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡುತ್ತಿರುವ ಫನ್ನಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಜೋಡಿಯ ವಿಚಿತ್ರ ನಾಗಿಣಿ ಡಾನ್ಸ್‌ ನೋಡಿ ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!