AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಊರು ಬದಲಾಯಿಸುವುದು ಸುಲಭದ ಕೆಲಸವಲ್ಲ; ಬೆಂಗಳೂರಿಗೆ ಸ್ಥಳಾಂತರಗೊಳ್ಳುವಾಗ ದಂಪತಿ ಹೀಗೆಂದಿದ್ದೇಕೆ?

ಬದುಕು ಒಂದೇ ರೀತಿ ಇರಲ್ಲ. ಹೊಟ್ಟೆ ತುಂಬಿಸಿಕೊಳ್ಳಲು ಉದ್ಯೋಗಕ್ಕಾಗಿ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗೋದು ಅನಿವಾರ್ಯ. ಆದರೆ ಹೊಸ ಊರು, ಹೊಸ ಜನರಿಗೆ ಹೊಂದಿಕೊಳ್ಳೋದು ಕಷ್ಟ. ಗುರಗಾಂವ್ ಬಿಟ್ಟು ಬೆಂಗಳೂರಿಗೆ ಸ್ಥಳಾಂತರಗೊಳ್ಳುವಾಗ ದಂಪತಿಯ ಭಾವನಾತ್ಮಕ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಊರು ಬದಲಾಯಿಸುವುದು ಸುಲಭದ ಕೆಲಸವಲ್ಲ; ಬೆಂಗಳೂರಿಗೆ ಸ್ಥಳಾಂತರಗೊಳ್ಳುವಾಗ ದಂಪತಿ ಹೀಗೆಂದಿದ್ದೇಕೆ?
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:May 13, 2026 | 5:11 PM

Share

ಉದ್ಯೋಗ ಅರಸಿಕೊಂಡು ಬೆಂಗಳೂರಿಗೆ (Bengaluru) ಬರುವವರು ಅದೆಷ್ಟೋ. ಹೀಗೆ ಬಂದವರಿಗೆ ಈ ನಗರದ ವಾತಾವರಣ ಹೊಸತು. ಹುಟ್ಟಿ ಬೆಳೆದ ಊರು ಅಥವಾ ಇಷ್ಟು ಕಾಲ ಇದ್ದ ಊರನ್ನು ಬಿಟ್ಟು ಬರೋದು ಹೇಳಿದ್ದಷ್ಟು ಸುಲಭವಲ್ಲ, ಖಾಲಿತನ ಕಾಡೋದಿದೆ. ಇದೀಗ ಈ ದಂಪತಿಗೂ ಅದೇ ರೀತಿ ಆಗಿದೆ. ಗುರಗಾಂವ್‌ನಿಂದ (Gurgaon) ಬೆಂಗಳೂರಿಗೆ ಸ್ಥಳಾಂತರಗೊಳ್ಳುವಾಗ ಅನುಭವಿಸಿದ ಭಾವನಾತ್ಮಕ ಹೋರಾಟವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಧೈರ್ಯ ತುಂಬಿದ್ದಾರೆ.

ಶುಭಂ ಎಂಬುವವರು @lifeworklullaby ಹೆಸರಿನ ಇನ್‌ಸ್ಟಾಗ್ರಾಮ್‌ನಲ್ಲಿ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ತಾವು ಅನುಭವಿಸಿದ ಕಷ್ಟವನ್ನು ಹೇಳಿಕೊಂಡಿದ್ದಾರೆ. ಜೀವನವು ತುಂಬಾ ವಿಚಿತ್ರವಾಗಿದೆ, ಅಲ್ಲವೇ? ನಾವು ಗುರಗಾಂವ್‌ನಲ್ಲಿ ಇದ್ದಾಗ ಬೆಂಗಳೂರಿಗೆ ಹೋಗಬೇಕಾಯಿತು. ನಾವು ದೆಹಲಿಯಿಂದ ಗುರಗಾಂವ್‌ಗೆ ಸ್ಥಳಾಂತರಗೊಂಡಾಗ ಇಷ್ಟ ಪಟ್ಟು ಮನೆ ಬಾಡಿಗೆ ಪಡೆದುಕೊಂಡಿದ್ದೆವು. ಆದರೀಗ ಕೇವಲ ಏಳು ತಿಂಗಳ ನಂತರ ನಾವು ಮನೆ ಖಾಲಿ ಮಾಡಬೇಕಾಗಿದೆ. ಹೃದಯವೇ ಭಾರವಾಗಿದೆ ಎಂದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by @lifeworklullaby

ಇದು ಕೇವಲ ಬಾಡಿಗೆ ಅಪಾರ್ಟ್ಮೆಂಟ್ ಆಗಿರಲಿಲ್ಲ. ನಾವು ನಮ್ಮ ಕಂಟೆಂಟ್‌ ಕ್ರಿಯೇಟಿಂಗ್‌ ಜರ್ನಿ ಪ್ರಾರಂಭಿಸಿದ್ದು, ಸ್ವತಂತ್ರವಾಗಿ ಬದುಕಲು ಕಲಿತಿದ್ದು ಮತ್ತು ವೇದಾ ಜೊತೆಗೆ ನಮ್ಮ ವೃತ್ತಿಜೀವನವನ್ನು ಹೇಗೆ ನಿರ್ವಹಿಸುವುದು ಎಂಬುದನ್ನು ಕಲಿತಿದ್ದು ಇಲ್ಲಿಯೇ. ನಾವು ಈಗ ಬೆಂಗಳೂರಿನಲ್ಲಿ ಮತ್ತೆ ಅದೇ ಕೆಲಸವನ್ನು ಮಾಡಬೇಕಾಗಿದೆ. ನನ್ನನ್ನು ನಂಬಿ, ಬೆಂಗಳೂರಿನಲ್ಲಿ ಮನೆ ಹುಡುಕುವುದು ಇನ್ನೊಂದು ರೀತಿಯ ಸಾಹಸ. ಆದರೆ ಅಲ್ಲಿ ಹಲವು ಆಯ್ಕೆಗಳಿವೆ, ಬಾಡಿಗೆ ಮಾತ್ರ ಗಗನಕ್ಕೇರುತ್ತಿದೆ. ನಿಮ್ಮ ಬಜೆಟ್‌ನಲ್ಲಿ ಉತ್ತಮ ಮನೆ ಹುಡುಕುವುದು ಅಸಾಧ್ಯವಾಗುತ್ತದೆ. ಆದರೆ ನಾವು ಆ ಕೆಲಸವನ್ನು ಇಷ್ಟಪಡುತ್ತೇವೆ ಎಂದು ಹೇಳಿದ್ದಾರೆ.

ನಾವು ಮೂವರ್ಸ್ ಮತ್ತು ಪ್ಯಾಕರ್ಸ್ ಸೇವೆಯನ್ನು ಬಳಸಿದ್ದು ಇದೇ ಮೊದಲು. ಅರ್ಧಕ್ಕಿಂತ ಹೆಚ್ಚು ಕೆಲಸವನ್ನು ತಾವೇ ವಹಿಸಿಕೊಂಡರು. ನಾವು ಏನನ್ನೂ ಮಾಡಬೇಕಾಗಿಲ್ಲ. ನಾವು ಅವರಿಗೆ ಮಾರ್ಗದರ್ಶನ ನೀಡಿದ್ದೇವೆ. ಇನ್ನು ಊರನ್ನು ಬದಲಾಯಿಸುವುದು ಸುಲಭದ ಕೆಲಸವಲ್ಲ. ನೀವು ಮಗುವಿನೊಂದಿಗೆ ಎಲ್ಲವನ್ನೂ ಮಾಡಬೇಕಾದಾಗ, ಅದು ಇನ್ನಷ್ಟು ಕಷ್ಟಕರವಾಗಿರುತ್ತದೆ ಎಂದು ವಾಸ್ತವ ಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಬಲು ದುಬಾರಿ; 1.3 ಲಕ್ಷ ರೂ ತಿಂಗಳ ಖರ್ಚು ಎಂದ ದಂಪತಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಮಗುವಿನೊಂದಿಗೆ ಗುರಗಾಂವ್‌ನಿಂದ ಬೆಂಗಳೂರಿಗೆ ಹೋಗುವುದು ಸುಲಭವಲ್ಲ, ನಿಮಗೆ ಶಕ್ತಿ ಸಿಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಬೆಂಗಳೂರು ಹೆಚ್ಚುತ್ತಿರುವ ಬಾಡಿಗೆಯೊಂದಿಗೆ ಮನೆ ಹುಡುಕಾಟವು ನಿಜವಾಗಿಯೂ ಒಂದು ಸವಾಲು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಬೆಂಗಳೂರಿನಲ್ಲಿ ನಿಮ್ಮ ಹೊಸ ಅಧ್ಯಾಯಕ್ಕೆ ಶುಭವಾಗಲಿ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Wed, 13 May 26

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ