Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ದೇಶದ ಜನರು ಗೋ ಮೂತ್ರದಿಂದ ತಲೆ ಸ್ನಾನ ಮಾಡ್ತಾರೆ; ಇದರ ಹಿಂದಿನ ಕಾರಣ ಏನ್ ಗೊತ್ತಾ?

ದಕ್ಷಿಣ ಸುಡಾನ್ ದೇಶದಲ್ಲಿನ ಮಂಡರಿ ಮತ್ತು ಡಿಂಕಾ ಬುಡಕಟ್ಟು ಜನಾಂಗದವರು ಕೂಡಾ ಗೋವುಗಳಿಗೆ ಪೂಜನೀಯ ಸ್ಥಾನವನ್ನು ನೀಡಿದ್ದು, ಇವರು ಪ್ರತಿದಿನ ಗೋಮೂತ್ರದಲ್ಲಿಯೇ ತಲೆ ಸ್ನಾನ ಮಾಡುತ್ತಾರಂತೆ. ಈ ಕುರಿತ ಇಂಟೆರೆಸ್ಟಿಂಗ್ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Viral Video: ಈ ದೇಶದ ಜನರು ಗೋ ಮೂತ್ರದಿಂದ ತಲೆ  ಸ್ನಾನ ಮಾಡ್ತಾರೆ; ಇದರ ಹಿಂದಿನ ಕಾರಣ ಏನ್ ಗೊತ್ತಾ?
Cow urine bath
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Apr 07, 2024 | 10:46 AM

ಹಿಂದೂ ಧರ್ಮದಲ್ಲಿ ಗೋವಿಗೆ ಪೂಜನೀಯ ಸ್ಥಾನವಿದೆ. ಜೊತೆಗೆ ಗೋಮೂತ್ರ ಹಾಗೂ ಸಗಣಿಯನ್ನು ಕೂಡಾ ಪವಿತ್ರ ಎಂದು ಪರಿಗಣಿಸಲಾಗಿದ್ದು, ಇವುಗಳನ್ನು ಹೋವ ಹವನದಂತಹ ಮಂಗಳ ಕಾರ್ಯಗಳಲ್ಲಿ ಬಳಸಲಾಗುತ್ತದೆ. ಅದೇ ರೀತಿ ದಕ್ಷಿಣ ಸೂಡಾನ್ ದೇಶದ ಬುಡಕಟ್ಟು ಜನಾಂಗದವರು ಗೋವುಗಳಿಗೆ ಪವಿತ್ರ ಸ್ನಾನವನ್ನು ನೀಡಿದ್ದು, ಅವರು ಪ್ರತಿನಿತ್ಯ ಪವಿತ್ರ ಗೋ ಮೂತ್ರದಲ್ಲಿಯೇ ತಲೆ ಸ್ನಾನ ಮಾಡುತ್ತಾರಂತೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಹೌದು ದಕ್ಷಿಣ ಸುಡಾನ್ ನ ಮಂಡರಿ ಮತ್ತು ಡಿಂಕಾ ಬುಡಕಟ್ಟು ಜನಾಂಗದವರು ಇಂದಿಗೂ ಗೋ ಮೂತ್ರದಿಂದಲೇ ತಲೆ ಸ್ನಾನ ಮಾಡ್ತಾರೆ. ಹಸು ಸಾಕಾನೆ ಈ ಬುಡಕಟ್ಟು ಜನಾಂಗದವರ ಮೂಲ ಕಸುಬಾಗಿದ್ದು, ಭಾರತೀಯರಂತೆ ಅವರು ಕೂಡಾ ಗೋವುಗಳಿಗೆ ಪೂಜನೀಯ ಸ್ಥಾನವನ್ನು ನೀಡಿದ್ದಾರೆ. ಹಸುಗಳ ಪವಿತ್ರತೆಯ ಬಗ್ಗೆ ಅವರ ನಂಬಿಕೆ ಎಷ್ಟು ಬಲವಾಗಿದೆಯೆಂದರೆ, ಅವರು ಗೋಮೂತ್ರದಿಂದ ತಲೆ ಸ್ನಾನ ಮಾಡುತ್ತಾರೆ. ಏಕೆಂದರೆ ಗೋ ಮೂತ್ರವು ರೋಗ ನಿವಾರಕ ಮತ್ತು ಆರೋಗ್ಯವರ್ಧಕವಾಗಿದ್ದು, ಇಂತಹ ಪವಿತ್ರ ಗೋಮೂತ್ರದಿಂದ ಸ್ನಾನ ಮಾಡುವುದರಿಂದ ಆರೋಗ್ಯ ವೃದ್ಧಿಸುವುದಲ್ಲದೆ, ಅವುಗಳು ಸೊಳ್ಳೆಗಳ ಕಾಟದಿಂದಲೂ ನಮ್ಮನ್ನು ರಕ್ಷಿಸುತ್ತವೆ ಎಂಬ ಬಲವಾದ ನಂಬಿಕೆಯನ್ನು ಹೊಂದಿದ್ದಾರೆ.

ಇದನ್ನೂ ಓದಿ: Viral Video: ಲಿಫ್ಟ್ ಒಳಗೆ ಸೆಲ್ಫಿ ತೆಗೆಯುವ ಅಭ್ಯಾಸ ನಿಮಗಿದೆಯಾ? ಹಾಗಿದ್ರೆ ಈ ವಿಡಿಯೋ ನೀವು ನೋಡಲೇ ಬೇಕು

ಈ ಕುರಿತ ವಿಡಿಯೋವೊಂದನ್ನು @Rainmaker1973 ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಚಿಕೊಳ್ಳಲಾಗಿದ್ದು, “ಇದು ನೋಡಲು ಸ್ವಲ್ಪ ವಿಲಕ್ಷಣವಾಗಿ ಕಾಣಿಸಬಹುದು, ಆದರೆ ದಕ್ಷಿಣ ಸುಡಾನ್ ನ ಮುಂಡರಿ ಮತ್ತು ಡಿಂಕಾ ಬುಡಕಟ್ಟು ಜನಾಂಗದವರು ಪ್ರತಿನಿತ್ಯ ಗೋಮೂತ್ರದಿಂದಲೇ ಸ್ನಾನ ಮಾಡುತ್ತಾರೆ. ಏಕೆಂದರೆ ಗೋಮೂತ್ರ ನಂಜು ನಿರೋಧಕ ಮಾತ್ರವಲ್ಲದೆ ಅದು ಸೊಳ್ಳೆ ಕಡಿತದಿಂದಲೂ ನಮ್ಮನ್ನು ರಕ್ಷಿಸುತ್ತದೆ ಎಂದು ಅವರು ಭಾವಿಸುತ್ತಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಹಸು ಮೂತ್ರ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಆ ಪವಿತ್ರ ಗೋಮೂತ್ರದಲ್ಲಿಯೇ ಡಿಂಕಾ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬ ತಲೆ ಸ್ನಾನ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್