AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಮಾತೆ

ಉತ್ತರ ಪ್ರದೇಶದ ಲಕ್ನೋದಲ್ಲಿ ನಗರದ ಮೊದಲ ಸಾವಯವ ರೆಸ್ಟೋರೆಂಟ್​​ಗೆ ಗೌರವಾನ್ವಿತ ಅಥಿತಿಯನ್ನಾಗಿ ಹಸುವನ್ನು ಆಹ್ವಾನಿಸಲಾಯಿತು. ಗೋಮಾತೆಯಿಂದಲೇ ಈ ರೆಸ್ಟೋರೆಂಟ್ ಉದ್ಘಾಟನೆಯನ್ನು ಮಾಡಲಾಯಿತು. ಟ್ವಿಟರ್​​ನಲ್ಲಿ ಈ ವೀಡಿಯೋ ವೈರಲ್ ಆಗಿದೆ.

Viral video: ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಮಾತೆ
ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಬಂದ ವಿಶೇಷ ಅಥಿತಿ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 20, 2023 | 9:42 AM

ಹಿಂದೂ ಧರ್ಮದಲ್ಲಿ ಹಸುವಿಗೆ ಪವಿತ್ರ ಸ್ಥಾನವಿದೆ. ಗೋಮಾತೆ ಎಂಬ ಹೆಸರಿನಲ್ಲಿ ಹಸುವನ್ನು ಪೂಜಿಸಲಾಗುತ್ತದೆ. ಗೃಹ ಪ್ರವೇಶದ ಸಂದರ್ಭದಲ್ಲಿ ಮೊದಲು ಗೋಮಾತೆಯನ್ನೇ ಮನೆಗೆ ಪ್ರವೇಶಿಸಲಾಗುತ್ತದೆ. ಇದೇ ರೀತಿಯಲ್ಲಿ ಉತ್ತರ ಪ್ರದೇಶದ (Uttar Pradesh) ಲಕ್ನೋದಲ್ಲಿ ನಗರದ ಮೊದಲ ಸಾವಯವ ರೆಸ್ಟೋರೆಂಟ್ ಒಂದರ ಉದ್ಘಾಟನೆಯನ್ನು ಪವಿತ್ರ ಗೋಮಾತೆಯ ಕೈಯಿಂದ ಮಾಡಲಾಯಿತು. ಮತ್ತು ಆ ಹಸುವನ್ನೇ ಗೌರವಾನ್ವಿತ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಮಾಜಿ ಡೆಪ್ಯುಟಿ ಎಸ್ಪಿ ಶೈಲೇಂದ್ರ ಸಿಂಗ್ ಒಡೆತನದ ‘ಆರ್ಗ್ಯಾನಿಕ್ ಓಸಿಯನ್’ ಹೆಸರಿನ ರೆಸ್ಟೋರೆಂಟ್ ಇದಾಗಿದ್ದು, ಇದು ಸಾವಯುವ ಕೃಷಿ ಉತ್ಪನ್ನಗಳಿಂದ ತಯಾರಿಸಿದ ಆಹಾರವನ್ನು ಗ್ರಾಹಕರಿಗೆ ಒದಗಿಸುತ್ತದೆ.

ಎಎನ್ಐ ಯುಪಿ ಸುದ್ದಿ ಸಂಸ್ಥೆ ಟ್ವಿಟರ್​​ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಹಸು ಕೆಲವು ಜನರೊಂದಿಗೆ ಸೇರಿ ರೆಸ್ಟೋರೆಂಟ್​​​ನ್ನು ಉದ್ಘಾಟಿಸುತ್ತಿರುವುದನ್ನು ಕಾಣಬಹುದು. ಹಸುವಿಗೆ ಹಳದಿ ವಸ್ತ್ರವೊಂದನ್ನು ಹೊದಿಸಿ ಅಲಂಕರಿಸಲಾಗಿತ್ತು. ಹಸುವಿನ ಸುತ್ತಲೂ ಕೆಲವು ಜನರು ನೆರೆದಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಈ ಸಾವಯವ ರೆಸ್ಟೋರೆಂಟ್ ಲುಲು ಮಾಲ್ ಪಕ್ಕದಲ್ಲಿರುವ ಮಿಲೇನಿಯಮ್​​​ನಲ್ಲಿರುವ ಸುಶಾಂತ್ ಗಾಲ್ಫ್ ಸಿಟಿಯಲ್ಲಿದೆ. ಮತ್ತು ಈ ರೆಸ್ಟೋರೆಂಟ್​​ನಲ್ಲಿ ಸಾವಯವ ಆಹಾರ ಉತ್ಪನ್ನಗಳನ್ನೇ ಗ್ರಾಹಕರಿಗೆ ಉಣಬಡಿಸಲಾಗುತ್ತದೆ.

ಮಾಜಿ ಎಸ್ಪಿ ಮತ್ತು ಆರ್ಗ್ಯಾನಿಕ್ ಓಸಿಯನ್ ರೆಸ್ಟೋರೆಂಟ್ ಮ್ಯಾನೇಜರ್ ಶೈಲೇಂದ್ರ ಸಿಂಗ್ ಅವರು ಭಾರತದ ಆರ್ಥಿಕತೆ ಮತ್ತು ಕೃಷಿಯು ಹಸುಗಳ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಈ ರೆಸ್ಟೋರೆಂಟ್ ಉದ್ಘಾಟನೆಗೆ ಗೌರವಾನ್ವಿತ ಅತಿಥಿಯನ್ನಾಗಿ ಗೋ ಮಾತೆಯನ್ನು ಆಹ್ವಾನಿಸಿದ್ದು ಎಂದು ಹೇಳಿದರು.

ಇದನ್ನೂ ಓದಿ:Viral Video : ಮೇಕ್​​ಅಪ್​​​​ ಮಾಡುವಾಗ ಕೆನ್ನೆ ಬ್ಲಶ್‌ ಮಾಡಲು ಕಷ್ಟ ಪಡುತ್ತೀರಾ?

ಆರೋಗ್ಯಕರ ದೇಹವು ತಮ್ಮ ಮೊದಲ ಆದ್ಯತೆಯಾಗಬೇಕೆಂದು ಜನರು ಭಾವಿಸುತ್ತಾರೆ. ದುರದೃಷ್ಟವಶಾತ್, ರಾಸಾಯನಿಕ ಗೊಬ್ಬರಗಳು ಮತ್ತು ಕೀಟನಾಶಕಗಳನ್ನು ಬಳಸಿದ ಆಹಾರ ಉತ್ಪನ್ನಗಳನ್ನು ಸೇವಿಸುತ್ತಿದ್ದೇವೆ. ಹಾಗಾಗಿ ಈ ಆರ್ಗ್ಯಾನಿಕ್ ರೆಸ್ಟೋರೆಂಟ್ ತನ್ನದೇ ಆದ ಸಾವಯವ ಉತ್ಪಾದನೆ, ನಿಯಂತ್ರಣ ಮತ್ತು ಸಂಸ್ಕರಣೆಗಳನ್ನು ಹೊಂದಿರುವ ಮೊದಲ ರೆಸ್ಟೋರೆಂಟ್ ಎಂದು ನಾನು ಭಾವಿಸುತ್ತೇನೆ. ಗ್ರಾಹಕರು ಆಹಾರವನ್ನು ಸೇವಿಸಿದ ನಂತರ, ಅವರು ಇಲ್ಲಿನ ಆಹಾರದ ವ್ಯತ್ಯಾಸ ಮತ್ತು ಬೇಡಿಕೆಯನ್ನು ಅನುಭವಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

Published On - 5:50 pm, Wed, 19 April 23

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ