Viral video: ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಮಾತೆ

ಉತ್ತರ ಪ್ರದೇಶದ ಲಕ್ನೋದಲ್ಲಿ ನಗರದ ಮೊದಲ ಸಾವಯವ ರೆಸ್ಟೋರೆಂಟ್​​ಗೆ ಗೌರವಾನ್ವಿತ ಅಥಿತಿಯನ್ನಾಗಿ ಹಸುವನ್ನು ಆಹ್ವಾನಿಸಲಾಯಿತು. ಗೋಮಾತೆಯಿಂದಲೇ ಈ ರೆಸ್ಟೋರೆಂಟ್ ಉದ್ಘಾಟನೆಯನ್ನು ಮಾಡಲಾಯಿತು. ಟ್ವಿಟರ್​​ನಲ್ಲಿ ಈ ವೀಡಿಯೋ ವೈರಲ್ ಆಗಿದೆ.

Viral video: ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಗೋಮಾತೆ
ಸಾವಯವ ರೆಸ್ಟೋರೆಂಟ್ ಉದ್ಘಾಟನೆಗೆ ಬಂದ ವಿಶೇಷ ಅಥಿತಿ
Edited By:

Updated on: Apr 20, 2023 | 9:42 AM

ಹಿಂದೂ ಧರ್ಮದಲ್ಲಿ ಹಸುವಿಗೆ ಪವಿತ್ರ ಸ್ಥಾನವಿದೆ. ಗೋಮಾತೆ ಎಂಬ ಹೆಸರಿನಲ್ಲಿ ಹಸುವನ್ನು ಪೂಜಿಸಲಾಗುತ್ತದೆ. ಗೃಹ ಪ್ರವೇಶದ ಸಂದರ್ಭದಲ್ಲಿ ಮೊದಲು ಗೋಮಾತೆಯನ್ನೇ ಮನೆಗೆ ಪ್ರವೇಶಿಸಲಾಗುತ್ತದೆ. ಇದೇ ರೀತಿಯಲ್ಲಿ ಉತ್ತರ ಪ್ರದೇಶದ (Uttar Pradesh) ಲಕ್ನೋದಲ್ಲಿ ನಗರದ ಮೊದಲ ಸಾವಯವ ರೆಸ್ಟೋರೆಂಟ್ ಒಂದರ ಉದ್ಘಾಟನೆಯನ್ನು ಪವಿತ್ರ ಗೋಮಾತೆಯ ಕೈಯಿಂದ ಮಾಡಲಾಯಿತು. ಮತ್ತು ಆ ಹಸುವನ್ನೇ ಗೌರವಾನ್ವಿತ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಮಾಜಿ ಡೆಪ್ಯುಟಿ ಎಸ್ಪಿ ಶೈಲೇಂದ್ರ ಸಿಂಗ್ ಒಡೆತನದ ‘ಆರ್ಗ್ಯಾನಿಕ್ ಓಸಿಯನ್’ ಹೆಸರಿನ ರೆಸ್ಟೋರೆಂಟ್ ಇದಾಗಿದ್ದು, ಇದು ಸಾವಯುವ ಕೃಷಿ ಉತ್ಪನ್ನಗಳಿಂದ ತಯಾರಿಸಿದ ಆಹಾರವನ್ನು ಗ್ರಾಹಕರಿಗೆ ಒದಗಿಸುತ್ತದೆ.

ಎಎನ್ಐ ಯುಪಿ ಸುದ್ದಿ ಸಂಸ್ಥೆ ಟ್ವಿಟರ್​​ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಹಸು ಕೆಲವು ಜನರೊಂದಿಗೆ ಸೇರಿ ರೆಸ್ಟೋರೆಂಟ್​​​ನ್ನು ಉದ್ಘಾಟಿಸುತ್ತಿರುವುದನ್ನು ಕಾಣಬಹುದು. ಹಸುವಿಗೆ ಹಳದಿ ವಸ್ತ್ರವೊಂದನ್ನು ಹೊದಿಸಿ ಅಲಂಕರಿಸಲಾಗಿತ್ತು. ಹಸುವಿನ ಸುತ್ತಲೂ ಕೆಲವು ಜನರು ನೆರೆದಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಈ ಸಾವಯವ ರೆಸ್ಟೋರೆಂಟ್ ಲುಲು ಮಾಲ್ ಪಕ್ಕದಲ್ಲಿರುವ ಮಿಲೇನಿಯಮ್​​​ನಲ್ಲಿರುವ ಸುಶಾಂತ್ ಗಾಲ್ಫ್ ಸಿಟಿಯಲ್ಲಿದೆ. ಮತ್ತು ಈ ರೆಸ್ಟೋರೆಂಟ್​​ನಲ್ಲಿ ಸಾವಯವ ಆಹಾರ ಉತ್ಪನ್ನಗಳನ್ನೇ ಗ್ರಾಹಕರಿಗೆ ಉಣಬಡಿಸಲಾಗುತ್ತದೆ.

ಮಾಜಿ ಎಸ್ಪಿ ಮತ್ತು ಆರ್ಗ್ಯಾನಿಕ್ ಓಸಿಯನ್ ರೆಸ್ಟೋರೆಂಟ್ ಮ್ಯಾನೇಜರ್ ಶೈಲೇಂದ್ರ ಸಿಂಗ್ ಅವರು ಭಾರತದ ಆರ್ಥಿಕತೆ ಮತ್ತು ಕೃಷಿಯು ಹಸುಗಳ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಈ ರೆಸ್ಟೋರೆಂಟ್ ಉದ್ಘಾಟನೆಗೆ ಗೌರವಾನ್ವಿತ ಅತಿಥಿಯನ್ನಾಗಿ ಗೋ ಮಾತೆಯನ್ನು ಆಹ್ವಾನಿಸಿದ್ದು ಎಂದು ಹೇಳಿದರು.

ಇದನ್ನೂ ಓದಿ:Viral Video : ಮೇಕ್​​ಅಪ್​​​​ ಮಾಡುವಾಗ ಕೆನ್ನೆ ಬ್ಲಶ್‌ ಮಾಡಲು ಕಷ್ಟ ಪಡುತ್ತೀರಾ?

ಆರೋಗ್ಯಕರ ದೇಹವು ತಮ್ಮ ಮೊದಲ ಆದ್ಯತೆಯಾಗಬೇಕೆಂದು ಜನರು ಭಾವಿಸುತ್ತಾರೆ. ದುರದೃಷ್ಟವಶಾತ್, ರಾಸಾಯನಿಕ ಗೊಬ್ಬರಗಳು ಮತ್ತು ಕೀಟನಾಶಕಗಳನ್ನು ಬಳಸಿದ ಆಹಾರ ಉತ್ಪನ್ನಗಳನ್ನು ಸೇವಿಸುತ್ತಿದ್ದೇವೆ. ಹಾಗಾಗಿ ಈ ಆರ್ಗ್ಯಾನಿಕ್ ರೆಸ್ಟೋರೆಂಟ್ ತನ್ನದೇ ಆದ ಸಾವಯವ ಉತ್ಪಾದನೆ, ನಿಯಂತ್ರಣ ಮತ್ತು ಸಂಸ್ಕರಣೆಗಳನ್ನು ಹೊಂದಿರುವ ಮೊದಲ ರೆಸ್ಟೋರೆಂಟ್ ಎಂದು ನಾನು ಭಾವಿಸುತ್ತೇನೆ. ಗ್ರಾಹಕರು ಆಹಾರವನ್ನು ಸೇವಿಸಿದ ನಂತರ, ಅವರು ಇಲ್ಲಿನ ಆಹಾರದ ವ್ಯತ್ಯಾಸ ಮತ್ತು ಬೇಡಿಕೆಯನ್ನು ಅನುಭವಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

Published On - 5:50 pm, Wed, 19 April 23

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us