AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನ್ ಕಾನ್ಸುಲೇಟ್​ ಕಚೇರಿಯೊಳಗೆ ಕ್ರಿಕೆಟ್ ಆಡುತ್ತಿರುವ ಅಧಿಕಾರಿಗಳ ವಿಡಿಯೋ ವೈರಲ್

Cricket : ಜರ್ಮನ್​ ಅಧಿಕಾರಿಗಳು​ ಭಾರತೀಯ ಅಧಿಕಾರಿಗಳಿಂದ ಕ್ರಿಕೆಟ್ ಕಲಿಯುತ್ತಿದ್ಧಾರೆ. ನೆಟ್ಟಿಗರು, ಆಡಿ ಸರ್ ನೀವು ಬಿಡಬೇಡಿ ಎಂದು ಇವರ ಆಟದ ಬಗ್ಗೆ ವಿಮರ್ಶೆ ಮಾಡುತ್ತ ಹುರಿದುಂಬಿಸುತ್ತಿದ್ದಾರೆ.

ಜರ್ಮನ್ ಕಾನ್ಸುಲೇಟ್​ ಕಚೇರಿಯೊಳಗೆ ಕ್ರಿಕೆಟ್ ಆಡುತ್ತಿರುವ ಅಧಿಕಾರಿಗಳ ವಿಡಿಯೋ ವೈರಲ್
ಬೆಂಗಳೂರಿನ ಜರ್ಮನ್​ ಕಾನ್ಸುಲೇಟ್​ ಕಚೇರಿಯೊಳಗೆ ಕ್ರಿಕೆಟ್ ಆಟವಾಡುತ್ತಿರುವ ಅಧಿಕಾರಿಗಳು
TV9 Web
| Edited By: |

Updated on: Nov 24, 2022 | 11:34 AM

Share

Viral Video : ನಿಮಗಿಷ್ಟವಾದ ಆಟ ಯಾವುದು ಎಂದು ಕೇಳಿದರೆ ಬಹುತೇಕ ಭಾರತೀಯರು ಹೇಳುವುದು ಕ್ರಿಕೆಟ್​. ಎಂಥ ಸಂದರ್ಭದಲ್ಲಿಯೂ ಟೀವಿಯಲ್ಲಿ ಈ ಆಟವನ್ನು ವೀಕ್ಷಿಸದೇ ಇರರು. ಹಾಗೆಯೇ ಸಮಯ ಸಿಕ್ಕರೆ ಗಲ್ಲಿಯಲ್ಲಿ ಆಟವಾಡದೇ ಬಿಡರು. ಇದೀಗ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಜರ್ಮನ್​ ಕಾನ್ಸುಲೇಟ್​ ಅಧಿಕಾರಿಯೊಬ್ಬರು;​ ‘ಊಟದ ಬಿಡುವಿನಲ್ಲಿ ನನ್ನ ಭಾರತೀಯ ಸಹೋದ್ಯೋಗಿಗಳು, ಜರ್ಮನ್​ ಸಹೋದ್ಯೋಗಿಗಳಿಗೆ ಕ್ರಿಕೆಟ್ ಆಡುವುದು ಹೇಗೆ ಎಂದು ಕಲಿಸಲು ಯತ್ನಿಸುತ್ತಿದ್ದಾರೆ. ಕಾನ್ಸುಲೇಟ್​ ಅದರ ಪಾಡಿಗೆ ಇನ್ನೂ ಇದೆ’ ಎಂದು ತಮಾಷೆಯ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಬೆಂಗಳೂರಿನ ಕೇರಳ ಮತ್ತು ಕರ್ನಾಟಕದ ಜರ್ಮನ್​ ಕಾನ್ಸುಲೇಟ್ ಅಚಿಮ್​ ಬುರ್ಕಾರ್ಟ್ ತಮ್ಮ ಭಾರತೀಯ ಸಹೋದ್ಯೋಗಳೊಂದಿಗೆ ಕಚೇರಿಯೊಳಗೆ ಕ್ರಿಕೆಟ್​ ಆಟವಾಡಿದ್ದಾರೆ. ಅಚಿಮ್​ ಈ ಆಟವನ್ನು ಉತ್ಸಾಹ ಮತ್ತು ಆನಂದದಿಂದ ಆಡಿದ್ದನ್ನು ಗಮನಿಸಬಹುದಾಗಿದೆ. 32,000ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 1,000ಕ್ಕಿಂತಲೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ಅನೇಕರು ರೀಟ್ವೀಟ್ ಮಾಡಿದ್ದಾರೆ.

ಜರ್ಮನಿಯಲ್ಲಿಯೂ ಕ್ರಿಕೆಟ್​ ಅನ್ನು ಶುರುಮಾಡುವುದು ಒಳ್ಳೆಯದು ಎನ್ನಿಸುತ್ತೆ ಎಂದಿದ್ದಾರೆ ಒಬ್ಬರು. ನೋಡಲು ಇದು ಬಹಳ ಅದ್ಭುತವಾಗಿದೆ ಎಂದಿದ್ದಾರೆ ಇನ್ನೊಬ್ಬರು. ಹೌದು ಇದು ಅದ್ಭುತವಾಗಿದೆ ಇಂಥ ಅಭ್ಯಾಸಗಳು ಇರಲಿ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮಗೆ ಏನನ್ನಿಸಿತು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ