AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನ್ ಕಾನ್ಸುಲೇಟ್​ ಕಚೇರಿಯೊಳಗೆ ಕ್ರಿಕೆಟ್ ಆಡುತ್ತಿರುವ ಅಧಿಕಾರಿಗಳ ವಿಡಿಯೋ ವೈರಲ್

Cricket : ಜರ್ಮನ್​ ಅಧಿಕಾರಿಗಳು​ ಭಾರತೀಯ ಅಧಿಕಾರಿಗಳಿಂದ ಕ್ರಿಕೆಟ್ ಕಲಿಯುತ್ತಿದ್ಧಾರೆ. ನೆಟ್ಟಿಗರು, ಆಡಿ ಸರ್ ನೀವು ಬಿಡಬೇಡಿ ಎಂದು ಇವರ ಆಟದ ಬಗ್ಗೆ ವಿಮರ್ಶೆ ಮಾಡುತ್ತ ಹುರಿದುಂಬಿಸುತ್ತಿದ್ದಾರೆ.

ಜರ್ಮನ್ ಕಾನ್ಸುಲೇಟ್​ ಕಚೇರಿಯೊಳಗೆ ಕ್ರಿಕೆಟ್ ಆಡುತ್ತಿರುವ ಅಧಿಕಾರಿಗಳ ವಿಡಿಯೋ ವೈರಲ್
ಬೆಂಗಳೂರಿನ ಜರ್ಮನ್​ ಕಾನ್ಸುಲೇಟ್​ ಕಚೇರಿಯೊಳಗೆ ಕ್ರಿಕೆಟ್ ಆಟವಾಡುತ್ತಿರುವ ಅಧಿಕಾರಿಗಳು
TV9 Web
| Edited By: ಶ್ರೀದೇವಿ ಕಳಸದ|

Updated on: Nov 24, 2022 | 11:34 AM

Share

Viral Video : ನಿಮಗಿಷ್ಟವಾದ ಆಟ ಯಾವುದು ಎಂದು ಕೇಳಿದರೆ ಬಹುತೇಕ ಭಾರತೀಯರು ಹೇಳುವುದು ಕ್ರಿಕೆಟ್​. ಎಂಥ ಸಂದರ್ಭದಲ್ಲಿಯೂ ಟೀವಿಯಲ್ಲಿ ಈ ಆಟವನ್ನು ವೀಕ್ಷಿಸದೇ ಇರರು. ಹಾಗೆಯೇ ಸಮಯ ಸಿಕ್ಕರೆ ಗಲ್ಲಿಯಲ್ಲಿ ಆಟವಾಡದೇ ಬಿಡರು. ಇದೀಗ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಜರ್ಮನ್​ ಕಾನ್ಸುಲೇಟ್​ ಅಧಿಕಾರಿಯೊಬ್ಬರು;​ ‘ಊಟದ ಬಿಡುವಿನಲ್ಲಿ ನನ್ನ ಭಾರತೀಯ ಸಹೋದ್ಯೋಗಿಗಳು, ಜರ್ಮನ್​ ಸಹೋದ್ಯೋಗಿಗಳಿಗೆ ಕ್ರಿಕೆಟ್ ಆಡುವುದು ಹೇಗೆ ಎಂದು ಕಲಿಸಲು ಯತ್ನಿಸುತ್ತಿದ್ದಾರೆ. ಕಾನ್ಸುಲೇಟ್​ ಅದರ ಪಾಡಿಗೆ ಇನ್ನೂ ಇದೆ’ ಎಂದು ತಮಾಷೆಯ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಬೆಂಗಳೂರಿನ ಕೇರಳ ಮತ್ತು ಕರ್ನಾಟಕದ ಜರ್ಮನ್​ ಕಾನ್ಸುಲೇಟ್ ಅಚಿಮ್​ ಬುರ್ಕಾರ್ಟ್ ತಮ್ಮ ಭಾರತೀಯ ಸಹೋದ್ಯೋಗಳೊಂದಿಗೆ ಕಚೇರಿಯೊಳಗೆ ಕ್ರಿಕೆಟ್​ ಆಟವಾಡಿದ್ದಾರೆ. ಅಚಿಮ್​ ಈ ಆಟವನ್ನು ಉತ್ಸಾಹ ಮತ್ತು ಆನಂದದಿಂದ ಆಡಿದ್ದನ್ನು ಗಮನಿಸಬಹುದಾಗಿದೆ. 32,000ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 1,000ಕ್ಕಿಂತಲೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ಅನೇಕರು ರೀಟ್ವೀಟ್ ಮಾಡಿದ್ದಾರೆ.

ಜರ್ಮನಿಯಲ್ಲಿಯೂ ಕ್ರಿಕೆಟ್​ ಅನ್ನು ಶುರುಮಾಡುವುದು ಒಳ್ಳೆಯದು ಎನ್ನಿಸುತ್ತೆ ಎಂದಿದ್ದಾರೆ ಒಬ್ಬರು. ನೋಡಲು ಇದು ಬಹಳ ಅದ್ಭುತವಾಗಿದೆ ಎಂದಿದ್ದಾರೆ ಇನ್ನೊಬ್ಬರು. ಹೌದು ಇದು ಅದ್ಭುತವಾಗಿದೆ ಇಂಥ ಅಭ್ಯಾಸಗಳು ಇರಲಿ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮಗೆ ಏನನ್ನಿಸಿತು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ