AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಒಂದು ತಿಂಗಳ ಮಗುವನ್ನು ಓವನ್​​​ನಲ್ಲಿ ಸುಟ್ಟು ಕೊಂದ ತಾಯಿ!

ಪೊಲೀಸರು ತನಿಖೆ ಆರಂಭಿಸಿದಾಗ, ರಾತ್ರಿ ಮಗುವಿಗೆ ಹಾಲುಣಿಸಿದ ನಂತರ ತೊಟ್ಟಿಲಲ್ಲಿ ಮಲಗಿಸುವ ಬದಲು ಓವನ್​​ನಲ್ಲಿ ಮಲಗಿಸಿದ್ದೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಆದರೆ ಈ ಮಹಿಳೆ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾಳೆಯೇ ಅಥವಾ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾಳೆಯೇ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Crime News: ಒಂದು ತಿಂಗಳ ಮಗುವನ್ನು ಓವನ್​​​ನಲ್ಲಿ ಸುಟ್ಟು ಕೊಂದ ತಾಯಿ!
Mother puts newborn baby in ovenImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 11, 2024 | 1:00 PM

Share

ಹೃದಯ ವಿದ್ರಾವಕ ಘಟನೆಯೊಂದು ಅಮೆರಿಕದ ಮಿಸೌರಿಯಲ್ಲಿ ನಡೆದಿದೆ. ತಾಯಿಯೊಬ್ಬಳು ತನ್ನ ಮಗುವನ್ನು ಸುಟ್ಟು ಕೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆದರೆ ತಾನು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿಲ್ಲವೆಂದು ಹೇಳಿದ್ದರೂ ಕೂಡ ಮಹಿಳೆಯ ಮೇಲೆ ಪೊಲೀಸರಿಗೆ ಅನುಮಾನ ಹುಟ್ಟಿಕೊಂಡಿದ್ದು, ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ. ತಾಯಿಯ ಹೇಳಿಕೆಯ ಪ್ರಕಾರ ಮಗುವನ್ನು ತೊಟ್ಟಿಲಲ್ಲಿ ಮಲಗಿಸುವ ಬದಲು ಓವಲ್​​ನಲ್ಲಿಟ್ಟು ಸ್ವಿಚ್ ಹಾಕಿ ಮಲಗಿದ್ದಳು . ಇದರಿಂದ  ಮಗು  ಸುಟ್ಟು ಕರಕಲಾಗಿ ಸಾವನ್ನಪ್ಪಿದೆ. ಇದೀಗ ತಾಯಿ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾಳೆಯೇ ಅಥವಾ ಆಕೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾಳೆಯೇ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾನ್ಸಾಸ್ ನಗರದಲ್ಲಿ ಈ ಘಟನೆ ನಡೆದಿದೆ. ಸುದ್ದಿ ಸಂಸ್ಥೆಯೊಂದರ ಪ್ರಕಾರ, ಮರಿಯಾ ಥಾಮಸ್ ತನ್ನ ನವಜಾತ ಮಗುವನ್ನು ಕೊಂದ ಆರೋಪ ಹೊತ್ತಿದ್ದಾರೆ. ಶುಕ್ರವಾರ, ಕಾನ್ಸಾಸ್ ಸಿಟಿ ಪೊಲೀಸರಿಗೆ ಮರಿಯಾ ಎಂಬ ಮಹಿಳೆ ತನ್ನ ಮಗುವನ್ನು ಒಲೆಯಲ್ಲಿ ಸುಟ್ಟು ಸಾಯಿಸಿದ್ದಳು ಎಂಬ ಮಾಹಿತಿ ಸಿಕ್ಕಿತು. ಪೊಲೀಸರು ತನಿಖೆ ಆರಂಭಿಸಿದಾಗ, ರಾತ್ರಿ ಮಗುವಿಗೆ ಹಾಲುಣಿಸಿದ ನಂತರ ತೊಟ್ಟಿಲಲ್ಲಿ ಮಲಗಿಸುವ ಬದಲು ಓವನ್​​ನಲ್ಲಿ ಮಲಗಿಸಿದ್ದೆ ಎಂದು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಗೆಳೆಯನೊಂದಿಗೆ ಸರಸ ಸಲ್ಲಾಪಕ್ಕೆ ಅಡ್ಡಿಯಾಗಿದ್ದ 5-ವರ್ಷದ ಅಂಗವಿಕಲ ಮಗಳನ್ನು ವಿಚ್ಛೇದಿತ ಮಹಿಳೆ ಕೊಂದೇಬಿಟ್ಟಳು!

ಬೆಳಗ್ಗೆ ಎದ್ದಾಗ ಅಕಸ್ಮಾತ್ ಮಗುವನ್ನು ಒಲೆಯಲ್ಲಿ ಮಲಗಿಸಿರುವುದು ಅರಿವಾಯಿತು. ಓವಮ್​​ ತೆರೆದು ನೋಡಿದಾಗ ಅದರಲ್ಲಿ ಮಗು ಸುಟ್ಟು ಕರಕಲಾಗಿರುವುದು ಕಂಡು ಬಂದಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿತ್ತು. ಉಸಿರುಗಟ್ಟಿಸಿ ಸುಟ್ಟು ಕರಕಲಾದ ಕಾರಣ ಮಗು ಸಾವನ್ನಪ್ಪಿದೆ ಎಂದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.

ಸದ್ಯ ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ. ಅಲ್ಲದೆ, ಆಕೆಯ ಫೋನ್ ವಶಪಡಿಸಿಕೊಂಡು ತನಿಖೆಗೆ ಕಳುಹಿಸಲಾಗಿದೆ. ಈ ಘಟನೆಯ ನಂತರ ಇಡೀ ಕಾನ್ಸಾಸ್ ನಗರದಲ್ಲಿ ಸಂಚಲನ ಮೂಡಿಸಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sun, 11 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ