Crime News: ಒಂದು ತಿಂಗಳ ಮಗುವನ್ನು ಓವನ್​​​ನಲ್ಲಿ ಸುಟ್ಟು ಕೊಂದ ತಾಯಿ!

ಪೊಲೀಸರು ತನಿಖೆ ಆರಂಭಿಸಿದಾಗ, ರಾತ್ರಿ ಮಗುವಿಗೆ ಹಾಲುಣಿಸಿದ ನಂತರ ತೊಟ್ಟಿಲಲ್ಲಿ ಮಲಗಿಸುವ ಬದಲು ಓವನ್​​ನಲ್ಲಿ ಮಲಗಿಸಿದ್ದೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಆದರೆ ಈ ಮಹಿಳೆ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾಳೆಯೇ ಅಥವಾ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾಳೆಯೇ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Crime News: ಒಂದು ತಿಂಗಳ ಮಗುವನ್ನು ಓವನ್​​​ನಲ್ಲಿ ಸುಟ್ಟು ಕೊಂದ ತಾಯಿ!
Mother puts newborn baby in ovenImage Credit source: Pinterest
Follow us
|

Updated on:Feb 11, 2024 | 1:00 PM

ಹೃದಯ ವಿದ್ರಾವಕ ಘಟನೆಯೊಂದು ಅಮೆರಿಕದ ಮಿಸೌರಿಯಲ್ಲಿ ನಡೆದಿದೆ. ತಾಯಿಯೊಬ್ಬಳು ತನ್ನ ಮಗುವನ್ನು ಸುಟ್ಟು ಕೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆದರೆ ತಾನು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿಲ್ಲವೆಂದು ಹೇಳಿದ್ದರೂ ಕೂಡ ಮಹಿಳೆಯ ಮೇಲೆ ಪೊಲೀಸರಿಗೆ ಅನುಮಾನ ಹುಟ್ಟಿಕೊಂಡಿದ್ದು, ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ. ತಾಯಿಯ ಹೇಳಿಕೆಯ ಪ್ರಕಾರ ಮಗುವನ್ನು ತೊಟ್ಟಿಲಲ್ಲಿ ಮಲಗಿಸುವ ಬದಲು ಓವಲ್​​ನಲ್ಲಿಟ್ಟು ಸ್ವಿಚ್ ಹಾಕಿ ಮಲಗಿದ್ದಳು . ಇದರಿಂದ  ಮಗು  ಸುಟ್ಟು ಕರಕಲಾಗಿ ಸಾವನ್ನಪ್ಪಿದೆ. ಇದೀಗ ತಾಯಿ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾಳೆಯೇ ಅಥವಾ ಆಕೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾಳೆಯೇ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾನ್ಸಾಸ್ ನಗರದಲ್ಲಿ ಈ ಘಟನೆ ನಡೆದಿದೆ. ಸುದ್ದಿ ಸಂಸ್ಥೆಯೊಂದರ ಪ್ರಕಾರ, ಮರಿಯಾ ಥಾಮಸ್ ತನ್ನ ನವಜಾತ ಮಗುವನ್ನು ಕೊಂದ ಆರೋಪ ಹೊತ್ತಿದ್ದಾರೆ. ಶುಕ್ರವಾರ, ಕಾನ್ಸಾಸ್ ಸಿಟಿ ಪೊಲೀಸರಿಗೆ ಮರಿಯಾ ಎಂಬ ಮಹಿಳೆ ತನ್ನ ಮಗುವನ್ನು ಒಲೆಯಲ್ಲಿ ಸುಟ್ಟು ಸಾಯಿಸಿದ್ದಳು ಎಂಬ ಮಾಹಿತಿ ಸಿಕ್ಕಿತು. ಪೊಲೀಸರು ತನಿಖೆ ಆರಂಭಿಸಿದಾಗ, ರಾತ್ರಿ ಮಗುವಿಗೆ ಹಾಲುಣಿಸಿದ ನಂತರ ತೊಟ್ಟಿಲಲ್ಲಿ ಮಲಗಿಸುವ ಬದಲು ಓವನ್​​ನಲ್ಲಿ ಮಲಗಿಸಿದ್ದೆ ಎಂದು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಗೆಳೆಯನೊಂದಿಗೆ ಸರಸ ಸಲ್ಲಾಪಕ್ಕೆ ಅಡ್ಡಿಯಾಗಿದ್ದ 5-ವರ್ಷದ ಅಂಗವಿಕಲ ಮಗಳನ್ನು ವಿಚ್ಛೇದಿತ ಮಹಿಳೆ ಕೊಂದೇಬಿಟ್ಟಳು!

ಬೆಳಗ್ಗೆ ಎದ್ದಾಗ ಅಕಸ್ಮಾತ್ ಮಗುವನ್ನು ಒಲೆಯಲ್ಲಿ ಮಲಗಿಸಿರುವುದು ಅರಿವಾಯಿತು. ಓವಮ್​​ ತೆರೆದು ನೋಡಿದಾಗ ಅದರಲ್ಲಿ ಮಗು ಸುಟ್ಟು ಕರಕಲಾಗಿರುವುದು ಕಂಡು ಬಂದಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿತ್ತು. ಉಸಿರುಗಟ್ಟಿಸಿ ಸುಟ್ಟು ಕರಕಲಾದ ಕಾರಣ ಮಗು ಸಾವನ್ನಪ್ಪಿದೆ ಎಂದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.

ಸದ್ಯ ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ. ಅಲ್ಲದೆ, ಆಕೆಯ ಫೋನ್ ವಶಪಡಿಸಿಕೊಂಡು ತನಿಖೆಗೆ ಕಳುಹಿಸಲಾಗಿದೆ. ಈ ಘಟನೆಯ ನಂತರ ಇಡೀ ಕಾನ್ಸಾಸ್ ನಗರದಲ್ಲಿ ಸಂಚಲನ ಮೂಡಿಸಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sun, 11 February 24

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್