AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಳೆಯಲ್ಲಿ ಕೊಚ್ಚಿ ಹೋದ ಬೆಳೆ; ಸಂಕಷ್ಟದಲ್ಲೂ ರೈತನ ಮುಖದಲ್ಲಿ ಮಾಸದ ನಗು

ರೈತ ದೇಶದ ಬೆನ್ನೆಲುಬು. ಆತ ಬೆವರು ಸುರಿಸಿ ದುಡಿದರೆ ಮಾತ್ರ ನಾವು ನೆಮ್ಮದಿಯಿಂದ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯ. ಆದರೆ ರೈತನ ಜೀವನದ ಜತೆಗೆ ಮಳೆಯೂ ಆಟವಾಡುತ್ತದೆ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ದೃಶ್ಯ. ಮಳೆ ಬಂದು ತಾನು ಬೆಳೆದ ಬೆಳೆಯೆಲ್ಲಾ ಹಾಳಾಗಿದ್ರೂ ರೈತನ ಮುಖದಲ್ಲಿ ನಗು ಮಾತ್ರ ಮಾಸಿಲ್ಲ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Video: ಮಳೆಯಲ್ಲಿ ಕೊಚ್ಚಿ ಹೋದ ಬೆಳೆ; ಸಂಕಷ್ಟದಲ್ಲೂ ರೈತನ ಮುಖದಲ್ಲಿ ಮಾಸದ ನಗು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Nov 11, 2025 | 11:39 AM

Share

ಭೂಮಿ ತಾಯಿಯನ್ನೇ ನಂಬಿ ಬದುಕುತ್ತಿರುವ ರೈತನ (farmer) ಕೃಷಿ ಕಾಯಕದ ಜತೆಗೆ ಈ ಮಳೆಯೂ ಆಟವಾಡುತ್ತದೆ. ಮಳೆ ಬಾರದೆ ಬರಗಾಲದಿಂದ ಬೆಳೆಯೆಲ್ಲಾ ನಾಶವಾದರೆ, ಇನ್ನು ಕೆಲವೊಮ್ಮೆ ಅತಿಯಾದ ಮಳೆಯಿಂದ ಬೆಳೆಯೆಲ್ಲಾ ಕೊಚ್ಚಿ ಹೋಗುತ್ತದೆ. ಇಂತಹ ದೃಶ್ಯಗಳನ್ನು ನೋಡಿದಾಗ ಎಂತಹವರಿಗಾದ್ರು ಕರುಳು ಚುರ್ ಎನ್ನುತ್ತೆ. ರೈತರ ಕಷ್ಟ ಎಷ್ಟು ಎನ್ನುವ ವಿಡಿಯೋ ವೈರಲ್ ಆಗಿದೆ. ಹೌದು, ಭತ್ತದ ಕಟಾವಿಗೆ ಮಳೆ ಅಡ್ಡಿ ತಂದಿದ್ದು, ಮಳೆಯ ನಡುವೆಯೂ ರೈತರು ತಾನು ಬೆಳೆದ ಬೆಳೆಯನ್ನು ಮನೆಯ ಅಂಗಳಕ್ಕೆ ತಂದು ಇಷ್ಟು ಸಿಕ್ಕಿದ್ದು ಪುಣ್ಯ ಎನ್ನುವಂತೆ ಪೈರಿನಿಂದ ಭತ್ತವನ್ನು ಬೇರ್ಪಡಿಸುವ ದೃಶ್ಯವು ಕರುಳು ಹಿಂಡುವಂತಿದೆ. ಈ ವಿಡಿಯೋ ನೆಟ್ಟಿಗರ ಕಣ್ಣನ್ನು ಒದ್ದೆಯಾಗಿಸಿದೆ.

ಮಳೆ ತಂದ ಸಂಕಷ್ಟ: ರೈತನ ಪಾಡು ಹೇಗಿದೆ ನೋಡಿ

gowrishkothari ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ರೈತನ ಬದುಕಿನ ಸ್ಪಷ್ಟ ಚಿತ್ರಣ ಇಲ್ಲಿದೆ. ಮಳೆಯಿಂದ ಹಾಳಾದ ಬೆಳೆಯನ್ನು ಮನೆಯ ಅಂಗಳಕ್ಕೆ ತರುವುದನ್ನು ಕಾಣಬಹುದು. ಕಷ್ಟ ಪಟ್ಟು ಬೆವರು ಸುರಿಸಿ ಬೆಳೆದ ಬೆಳೆಯೂ ಹಾಳಾಗಿದ್ರೂ ಕೂಡ ಈ ರೈತರ ಮುಖದಲ್ಲಿ ಮಾತ್ರ ನಗು ಮಾಸದಿರುವುದನ್ನು ಕಾಣಬಹುದು. ಮನೆಯ ಅಂಗಳದಲ್ಲಿ ಭತ್ತವನ್ನು ಪೈರಿನಿಂದ ಬೇರ್ಪಡಿಸುತ್ತಿರುವ ಕೆಲಸದಲ್ಲಿ ರೈತರು ತೊಡಗಿಕೊಂಡಿದ್ದಾರೆ. ಆದರೆ, ಜೋರಾಗಿ ಸುರಿಯುತ್ತಿರುವ ಮಳೆಗೆ ಭತ್ತವೆಲ್ಲಾ ಒದ್ದೆಯಾಗಿ ನೀರಲ್ಲಿ ಕೊಚ್ಚಿಕೊಂಡು ಹೋಗುತ್ತಿದೆ.  ಈ ಭತ್ತವನ್ನು ನೀರಿನಿಂದ ಬೇರ್ಪಡಿಸಿ ಬುಟ್ಟಿಯಲ್ಲಿ ತುಂಬಿಸಿರುತ್ತಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

View this post on Instagram

A post shared by Gowri H H (@gowrishkothari)

ಇದನ್ನೂ ಓದಿ:ಕೃಷಿ ಕೆಲಸದಲ್ಲೇ ಈ ಜನರಿಗೆ ಖುಷಿ; ಇದು ಹಳ್ಳಿ ಬದುಕಿನ ಸುಂದರ ದೃಶ್ಯಕಾವ್ಯ

ಈ ವಿಡಿಯೋ ಇಪ್ಪತ್ತೈದು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಕೃಷಿಕರ ಕಷ್ಟ ಅವನಿಗಷ್ಟೇ ಗೊತ್ತು, ಕಷ್ಟ ಏನು ಎಂದು ಗದ್ದೆಯಲಿ ನಿಂತು ನೋಡಬೇಕು ಎಂದು ಹೇಳಿದ್ದಾರೆ. ಜರಡಿ ತರ ಇರೋ ಪ್ಲಾಸ್ಟಿಕ್ ಬುಟ್ಟಿಗೆ ಹಾಕಿ ನೀರು ಬೇಗ ಇಳಿಯುತ್ತೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಭಗವಂತ ರೈತರನ್ನು ಕಾಪಾಡು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು