AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮಗನಿಗೆ ಮನ ಬಂದಂತೆ ಥಳಿಸಿದ ಪತ್ನಿ; ಸಿಸಿಟಿವಿ ದೃಶ್ಯ ಕಂಡು ಪೊಲೀಸರಿಗೆ ದೂರು ನೀಡಿದ ಪತಿ

ಕೆಲಸದಿಂದ ಸಂಜೆ ಮನೆಗೆ ಬಂದ ಪತಿ ಸಿಸಿಟಿವಿ ದೃಶ್ಯ ಕಂಡು ಬೆಚ್ಚಿ ಬಿದ್ದಿದ್ದಾನೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಾಲಕನ ತಂದೆ, ಪತ್ನಿಯ ಕ್ರೂರ ವರ್ತನೆ ವಿರುದ್ಧ ಪೊಲೀಸರಿಗೆ ದೂರು ಕೂಡ ನೀಡಿದ್ದಾನೆ.

Video Viral: ಮಗನಿಗೆ ಮನ ಬಂದಂತೆ ಥಳಿಸಿದ ಪತ್ನಿ; ಸಿಸಿಟಿವಿ ದೃಶ್ಯ ಕಂಡು ಪೊಲೀಸರಿಗೆ ದೂರು ನೀಡಿದ ಪತಿ
ಅಕ್ಷತಾ ವರ್ಕಾಡಿ
|

Updated on: May 28, 2024 | 1:02 PM

Share

ಹರಿಯಾಣ: ಮಹಿಳೆಯೊಬ್ಬರು ತನ್ನ 11 ವರ್ಷದ ಮಗನನ್ನು ಅಮಾನುಷವಾಗಿ ಥಳಿಸಿರುವ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆಲಸದಿಂದ ಸಂಜೆ ಮನೆಗೆ ಬಂದ ಪತಿ ಸಿಸಿಟಿವಿ ದೃಶ್ಯ ಕಂಡು ಬೆಚ್ಚಿ ಬಿದ್ದಿದ್ದಾನೆ. ಇಂತಹ ಅಮಾನುಷ ಕೃತ್ಯಗೈದ ಪತ್ನಿಯ ವಿರುದ್ಧ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾನೆ.  ಮಹಿಳೆ ತನ್ನ ಮಗನಿಗೆ ಥಳಿಸುತ್ತಿರುವುದನ್ನು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆ ತನ್ನ ಮಗುವಿಗೆ ಥಳಿಸುವ ಹಲವು ದೃಶ್ಯಗಳನ್ನು ತೋರಿಸಲಾಗಿದೆ. ಅವಳು ಹುಡುಗನನ್ನು ಒದೆಯುವುದು ಕೂಡ ಕಂಡುಬಂದಿದೆ. ಹಲ್ಲೆಯ ಸಂದರ್ಭದಲ್ಲಿ ಮಗುವಿನ ತಂದೆ ಮಧ್ಯಪ್ರವೇಶಿಸಿ ಮಗುವನ್ನು ತನ್ನ ಕ್ರೂರ ತಾಯಿಯಿಂದ ರಕ್ಷಿಸಿದ ದೃಶ್ಯಾವಳಿಗಳು ಸಹ ಸೆರೆಯಾಗಿದೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಾಲಕನ ತಂದೆ, ಪತ್ನಿಯ ಕ್ರೂರ ವರ್ತನೆ ವಿರುದ್ಧ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ.

ಇದನ್ನೂ ಓದಿ: BMW ಕಾರು ಓಡಿಸಿದ ಅಪ್ರಾಪ್ತ ಮಗ, ಕಾರಿನ ಬಾನೆಟ್ ಮೇಲೆ ಮಲಗಿ ಅಪ್ಪನ ಸವಾರಿ

ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯುಸಿ) ಆದೇಶದ ಮೇರೆಗೆ ಸೂರಜ್‌ಕುಂಡ್ ಪೊಲೀಸ್ ಠಾಣೆಯು ತಾಯಿಯ ವಿರುದ್ಧ ಕ್ರೌರ್ಯ ಪ್ರಕರಣವನ್ನು ದಾಖಲಿಸಿದೆ. ಪ್ರಕರಣ ದಾಖಲಾದ ಬಳಿಕ ಮಹಿಳೆ ತನ್ನ ಮಗನನ್ನು ಕರೆದುಕೊಂಡು ತಾಯಿ ಮನೆಗೆ ಹೋಗಿದ್ದಾಳೆ. ಮಗುವಿನ ಹೇಳಿಕೆಯನ್ನು ಇನ್ನೂ ತೆಗೆದುಕೊಂಡಿಲ್ಲ. ಮಗು ತನ್ನ ಹೇಳಿಕೆಯನ್ನು ನೀಡಿದ ನಂತರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಸೂರಜ್‌ಕುಂಡ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಶಂಶೇರ್ ಸಿಂಗ್ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ