AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Story: ಅಳುವುದಕ್ಕೆ ಅನುಮತಿಯಿದೆ, ಆದರೆ ಸದ್ದಿಲ್ಲದೆ ಅಳಬೇಕು, ಹೀಗೊಂದು ಪ್ರಶ್ನೆಪತ್ರಿಕೆಯಲ್ಲಿ ಸಾಮಾನ್ಯ ಸೂಚನೆ 

ಶಾಲಾ ಕಾಲೇಜುಗಳಲ್ಲಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರಶ್ನೆ ಪತ್ರಿಕೆಯ ಮೊದಲ ಪುಟದಲ್ಲಿಯೇ  ಕೆಲವೊಂದು ಅಗತ್ಯ ಮಾರ್ಗದರ್ಶಿಗಳನ್ನು ನೀಡಲಾಗಿರುತ್ತದೆ. ಸಾಮಾನ್ಯವಾಗಿ ಪ್ರತಿಯೊಂದು ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಉತ್ತರಿಸಿ, ಪ್ರಶ್ನೆಪತ್ರಿಕೆಯ ಮೇಲೆ ಪೆನ್ನಿನಿಂದ ಗೀಚಬಾರದು ಇತ್ಯಾದಿ ಅತಿ ಅಗತ್ಯ ಮಾರ್ಗದರ್ಶಿಗಳನ್ನು ನೀಡಿರಲಾಗುತ್ತದೆ.  ಆದರೆ ಇಲ್ಲೊಂದು  ವೈರಲ್ ಆಗಿರುವ ಪ್ರಶ್ನೆ ಪತ್ರಿಕೆಯಲ್ಲಿ ಪರಿಕ್ಷಾ ಕೊಠಡಿಯಲ್ಲಿ ಅಳುವುದಕ್ಕೆ ಅನುಮತಿಯಿದೆ  ಆದರೆ ಸದ್ದಿಲ್ಲದೆ ಅಳಬೇಕು ಎಂಬ ಸೂಚನೆಯನ್ನು ನೀಡಲಾಗಿದೆ. 

Viral Story: ಅಳುವುದಕ್ಕೆ ಅನುಮತಿಯಿದೆ, ಆದರೆ ಸದ್ದಿಲ್ಲದೆ ಅಳಬೇಕು, ಹೀಗೊಂದು ಪ್ರಶ್ನೆಪತ್ರಿಕೆಯಲ್ಲಿ ಸಾಮಾನ್ಯ ಸೂಚನೆ 
ಮಾಲಾಶ್ರೀ ಅಂಚನ್​
| Edited By: |

Updated on: Oct 17, 2023 | 12:43 PM

Share

ಶಾಲಾ ಕಾಲೇಜುಗಳಲ್ಲಿ  ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರಶ್ನೆ ಪತ್ರಿಕೆಯ ಮೊದಲ ಪುಟದಲ್ಲಿಯೇ  ಕೆಲವೊಂದು ಅಗತ್ಯ ಸೂಚನೆಗಳನ್ನು ಅಥವಾ ಮಾರ್ಗದರ್ಶಿಗಳನ್ನು ನೀಡಲಾಗಿರುತ್ತದೆ. ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಉತ್ತರ ಬರೆಯಿರಿ, ಪ್ರಶ್ನೆ ಪತ್ರಿಕೆಯು ಮೂರು ವಿಭಾಗಗಳನ್ನು ಒಳಗೊಂಡಿದೆ,  ಪ್ರತಿ ಪ್ರಶ್ನೆಗೆ ನಮೂದಿಸಲಾದ ಅಂಕಗಳನ್ನು ಪ್ರಶ್ನೆ ಪತ್ರಿಕೆಯ ಕೊನೆಯಲ್ಲಿ ನೀಡಲಾಗಿದೆ. ಪ್ರಶ್ನೆ ಪತ್ರಿಕೆಯ ಮೇಲೆ ಏನನ್ನೂ ಗೀಚಬಾರದು ಹೀಗೆ ಕೆಲವೊಂದು ಅಗತ್ಯ ಮಾರ್ಗದರ್ಶಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಹಾಗೂ ಈ ಮಾರ್ಗದರ್ಶಿಗಳನ್ನು ಪರೀಕ್ಷೇ ಬರೆಯುವಂತಹ ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ.  ಆದರೆ ಇಲ್ಲೊಂದು ಪ್ರಶ್ನೆಪತ್ರಿಕೆಯಲ್ಲಿ ವಿದ್ಯಾರ್ಥಿಗಳಿಗೆ ವಿಚಿತ್ರ ಮಾರ್ಗದರ್ಶಿಯೊಂದನ್ನು ನೀಡಲಾಗಿದೆ.  ಅದೇನೆಂದರೆ ಅಳುವುದಕ್ಕೆ ಅನುಮತಿಯಿದೆ, ಆದರೆ ಸದ್ದಿಲ್ಲದೆ ಅಳಬೇಕು ಎಂಬ ಸೂಚನೆಯನ್ನು ನೀಡಲಾಗಿದೆ. ಈ ಒಂದು ವಿಚಿತ್ರ ಮಾರ್ಗದರ್ಶಿಯನ್ನು ಒಳಗೊಂಡಿರುವ  ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ಕತ್ ವೈರಲ್ ಆಗಿದೆ.

ಹೌದು ಯಾವುದೋ ಒಂದು ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್ ಬ್ಯಾಚ್ ಪ್ರಶ್ನೆ ಪತ್ರಿಕೆಯಲ್ಲಿ ಈ ಮಾರ್ಗದರ್ಶಿಯನ್ನು ನೀಡಲಾಗಿದ್ದು, ಅಳುವುದಕ್ಕೆ ಅನುಮತಿಯಿದೆ, ಆದರೆ ದಯವಿಟ್ಟು ಸದ್ದಿಲ್ಲದೆ ಅಳಬೇಕು, ಹಾಗೂ ಪ್ರಶ್ನೆ ಪತ್ರಿಕೆಯಲ್ಲಿ ಕಣ್ಣೀರು ಒರೆಸಬಾರದೆಂದು” ಸೂಚನೆಯನ್ನು ನೀಡಲಾಗಿದೆ.

ಇದನ್ನೂ ಓದಿ: ಸೆಕೆಂಡಿನಲ್ಲಿ ನಿಮ್ಮ ವಯಸ್ಸನ್ನು ತಿಳಿದುಕೊಳ್ಳಬೇಕೆ, ಈ ಚಾರ್ಟ್​ ನೋಡಿ

ವೈರಲ್​​ ಪ್ರಶ್ನೆ ಪ್ರತಿಕೆ

ಸದ್ಯ ಈ ಪ್ರಶ್ನೆ ಪತ್ರಿಕೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಒಂದು ವಿಚಿತ್ರ ಸೂಚನೆಗಳನ್ನು ಕಂಡು ಜನರು ನಸುನಕ್ಕಿದ್ದಾರೆ. ಇನ್ನೂ ಕೆಲವರು ಬಹುಷಃ ಪರೀಕ್ಷೆ ಬಹಳ ಕಷ್ಟವಿರಬೇಕು ಎಂದು ಹೇಳಿಕೊಂಡಿದ್ದಾರೆ. ಆದರೂ ಪ್ರಶ್ನೆಪತ್ರಿಕೆಯಲ್ಲಿ ಈ ವಿಚಿತ್ರ  ಮಾರ್ಗದರ್ಶಿಯನ್ನು ಯಾಕಾಗಿ ಹಾಕಿದ್ದಾರೆ ಎಂದು ತಿಳಿದುಬಂದಿಲ್ಲ.

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!