AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಿನ್ನುವ ತಟ್ಟೆಯಲ್ಲೇ ಹೋಟೆಲ್​​ ವೈಟರ್​ ಮುಖಕ್ಕೆ ಹೊಡೆದ ವ್ಯಕ್ತಿ ; ವಿಡಿಯೋ ವೈರಲ್​​​

ಫುಡ್​​ ಸರ್ವ್​​​​ ಮಾಡುತ್ತಿರುವಾಗಲೇ ಏಕಾಏಕಿ ತಿನ್ನುವ ತಟ್ಟೆಯಲ್ಲೇ ಮಹಿಳಾ​​ ವೈಟರ್ ಮುಖಕ್ಕೆ ಹೊಡೆದಿದ್ದಾನೆ. ಘಟನೆಯ ಹಿಂದಿನ ನಿಖರವಾದ ಕಾರಣ ಏನು ಎಂಬುದು ಇನ್ನು ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ರೆಸ್ಟೋರೆಂಟ್​ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Viral Video: ತಿನ್ನುವ ತಟ್ಟೆಯಲ್ಲೇ ಹೋಟೆಲ್​​ ವೈಟರ್​ ಮುಖಕ್ಕೆ  ಹೊಡೆದ ವ್ಯಕ್ತಿ ; ವಿಡಿಯೋ ವೈರಲ್​​​
ತಟ್ಟೆಯಲ್ಲೇ ಹೋಟೆಲ್​​ ವೈಟರ್​ ಮುಖಕ್ಕೆ ಹೊಡೆದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Aug 22, 2024 | 4:13 PM

Share

ಲಂಡನ್‌: ವ್ಯಕ್ತಿಯೊಬ್ಬ ತಿನ್ನುವ ತಟ್ಟೆಯಲ್ಲೇ ಹೋಟೆಲ್ ಮಹಿಳಾ​​ ವೈಟರ್​ ಮುಖಕ್ಕೆ ಹೊಡೆದ ಘಟನೆ ಲಂಡನ್‌ನಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ರೆಸ್ಟೋರೆಂಟ್​ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ರೆಸ್ಟೋರೆಂಟ್​​ಗೆ ಬಂದಿದ್ದು, ವೈಟರ್ ಫುಡ್​​ ಸರ್ವ್​​​​ ಮಾಡುತ್ತಿರುವಾಗಲೇ ಏಕಾಏಕಿ ತಿನ್ನುವ ತಟ್ಟೆಯಲ್ಲೇ ಆಕೆಯ ಮುಖಕ್ಕೆ ಹೊಡೆದಿದ್ದಾನೆ. ಘಟನೆಯ ಹಿಂದಿನ ನಿಖರವಾದ ಕಾರಣ ಏನು ಎಂಬುದು ಇನ್ನು ತಿಳಿದುಬಂದಿಲ್ಲ.

@BLAIMGame ಎನ್ನುವ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಆಗಸ್ಟ್​​​ 21ರಂದು ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 15.5 ಮಿಲಿಯನ್​​ ಅಂದರೆ ಒಂದು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

ವೈರಲ್​​ ಆಗಿರುವ ವಿಡಿಯೋದಲ್ಲಿ ಮಹಿಳಾ ಉದ್ಯೋಗಿಯ ಮೇಲೆ ತನ್ನ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕೋಪದಿಂದ ಹಲ್ಲೆ ನಡೆಸಿರುವುದು ಸೆರೆಯಾಗಿದೆ. ಈ ಘಟನೆಯು ಲಂಡನ್‌ನ ಸ್ಟ್ರಾಟ್‌ಫೋರ್ಡ್‌ನಲ್ಲಿರುವ ನಂಡೋಸ್ ಹೆಸರಿನ ಜನಪ್ರಿಯ ರೆಸ್ಟೋರೆಂಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಮಹಿಳಾ ಸಿಬ್ಬಂದಿಗೆ ರಕ್ಷಣೆ ಎಲ್ಲಿದೆ? ಆತನಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು