AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಿನ್ನುವ ತಟ್ಟೆಯಲ್ಲೇ ಹೋಟೆಲ್​​ ವೈಟರ್​ ಮುಖಕ್ಕೆ ಹೊಡೆದ ವ್ಯಕ್ತಿ ; ವಿಡಿಯೋ ವೈರಲ್​​​

ಫುಡ್​​ ಸರ್ವ್​​​​ ಮಾಡುತ್ತಿರುವಾಗಲೇ ಏಕಾಏಕಿ ತಿನ್ನುವ ತಟ್ಟೆಯಲ್ಲೇ ಮಹಿಳಾ​​ ವೈಟರ್ ಮುಖಕ್ಕೆ ಹೊಡೆದಿದ್ದಾನೆ. ಘಟನೆಯ ಹಿಂದಿನ ನಿಖರವಾದ ಕಾರಣ ಏನು ಎಂಬುದು ಇನ್ನು ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ರೆಸ್ಟೋರೆಂಟ್​ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Viral Video: ತಿನ್ನುವ ತಟ್ಟೆಯಲ್ಲೇ ಹೋಟೆಲ್​​ ವೈಟರ್​ ಮುಖಕ್ಕೆ  ಹೊಡೆದ ವ್ಯಕ್ತಿ ; ವಿಡಿಯೋ ವೈರಲ್​​​
ತಟ್ಟೆಯಲ್ಲೇ ಹೋಟೆಲ್​​ ವೈಟರ್​ ಮುಖಕ್ಕೆ ಹೊಡೆದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Aug 22, 2024 | 4:13 PM

Share

ಲಂಡನ್‌: ವ್ಯಕ್ತಿಯೊಬ್ಬ ತಿನ್ನುವ ತಟ್ಟೆಯಲ್ಲೇ ಹೋಟೆಲ್ ಮಹಿಳಾ​​ ವೈಟರ್​ ಮುಖಕ್ಕೆ ಹೊಡೆದ ಘಟನೆ ಲಂಡನ್‌ನಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ರೆಸ್ಟೋರೆಂಟ್​ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ರೆಸ್ಟೋರೆಂಟ್​​ಗೆ ಬಂದಿದ್ದು, ವೈಟರ್ ಫುಡ್​​ ಸರ್ವ್​​​​ ಮಾಡುತ್ತಿರುವಾಗಲೇ ಏಕಾಏಕಿ ತಿನ್ನುವ ತಟ್ಟೆಯಲ್ಲೇ ಆಕೆಯ ಮುಖಕ್ಕೆ ಹೊಡೆದಿದ್ದಾನೆ. ಘಟನೆಯ ಹಿಂದಿನ ನಿಖರವಾದ ಕಾರಣ ಏನು ಎಂಬುದು ಇನ್ನು ತಿಳಿದುಬಂದಿಲ್ಲ.

@BLAIMGame ಎನ್ನುವ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಆಗಸ್ಟ್​​​ 21ರಂದು ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 15.5 ಮಿಲಿಯನ್​​ ಅಂದರೆ ಒಂದು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

ವೈರಲ್​​ ಆಗಿರುವ ವಿಡಿಯೋದಲ್ಲಿ ಮಹಿಳಾ ಉದ್ಯೋಗಿಯ ಮೇಲೆ ತನ್ನ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕೋಪದಿಂದ ಹಲ್ಲೆ ನಡೆಸಿರುವುದು ಸೆರೆಯಾಗಿದೆ. ಈ ಘಟನೆಯು ಲಂಡನ್‌ನ ಸ್ಟ್ರಾಟ್‌ಫೋರ್ಡ್‌ನಲ್ಲಿರುವ ನಂಡೋಸ್ ಹೆಸರಿನ ಜನಪ್ರಿಯ ರೆಸ್ಟೋರೆಂಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಮಹಿಳಾ ಸಿಬ್ಬಂದಿಗೆ ರಕ್ಷಣೆ ಎಲ್ಲಿದೆ? ಆತನಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ