AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮುದ್ದು ಕಂದನ ಬಾಯಲ್ಲಿ ಐಗಿರಿ ನಂದಿನಿ ಸ್ತೋತ್ರ, ನೀವು ಮಂತ್ರಮುಗ್ಧರಾಗುವುದು ಖಂಡಿತ

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ವೈರಲ್‌ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಾವಳಿಗಳು ಮಾತ್ರ ನಮ್ಮ ಮನಸ್ಸಿಗೆ ತುಂಬಾನೇ ಹತ್ತಿರವಾಗುತ್ತದೆ. ಸದ್ಯ ಅಂತಹದೇ ಸುಂದರವಾದ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಮೂರುವರೆ ವರ್ಷದ ಪುಟ್ಟ ಕಂದಮ್ಮ ಹಾಡಿದ ಐಗಿರಿ ನಂದಿನಿ ಸ್ತೋತ್ರವನ್ನು ಕೇಳಿ ನೆಟ್ಟಿಗರು ಮನಸೋತಿದ್ದಾರೆ.

Viral Video: ಮುದ್ದು ಕಂದನ ಬಾಯಲ್ಲಿ ಐಗಿರಿ ನಂದಿನಿ ಸ್ತೋತ್ರ, ನೀವು ಮಂತ್ರಮುಗ್ಧರಾಗುವುದು ಖಂಡಿತ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Jun 19, 2024 | 12:51 PM

Share

ಮುದ್ದು ಮಕ್ಕಳ ಮಾತು, ಅವರ ಆಟ-ತುಂಟಾಟಗಳನ್ನು ನೋಡುವುದೇ ಚೆಂದ. ನಮ್ಮ ಮನಸ್ಸಿನ ಎಲ್ಲಾ ನೋವುಗಳನ್ನು ದೂರ ಮಾಡುವ ಶಕ್ತಿ ದೇವರಂತ ಪುಟಾಣಿ ಮಕ್ಕಳಿಗಿದೆ. ಅದರಲ್ಲೂ  ಈ ಮುದ್ದು ಪುಟಾಣಿಗಳ ಬಾಯಲ್ಲಿ ಹಾಡುಗಳನ್ನು ಕೇಳುವುದು ಇನ್ನೂ ಚೆನ್ನ. ಮುದ್ದು ಮಕ್ಕಳು ಗಾಯನ ಕಲೆಗೆ ಸಂಬಂಧಿಸಿದ  ಅನೇಕ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಸದ್ಯ ಅಂತಹದೇ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಪುಟಾಣಿ ಹೆಣ್ಣು ಮಗುವೊಂದು ಭಕ್ತಿಯಿಂದ ಐಗಿರಿ ನಂದಿನಿ ಸ್ತೋತ್ರ  ಹಾಡಿದೆ. ಮಗುವಿನ ಕಂಠಸಿರಿಯಲ್ಲಿ ಮೂಡಿಬಂದ ಈ ಅದ್ಭುತ ಗಾಯನವನ್ನು ಕಂಡು ನೆಟ್ಟಿಗರು ಮಂತ್ರಮುಗ್ಧರಾಗಿದ್ದಾರೆ.

ಸಿಂಗರ್‌ ಸೌರಭ್‌ ದಫ್ತರ್ದಾರ್‌ ಅವರ ಮುದ್ದು ಮಗಳು ಅಂತರಾ ಐಗಿರಿ ನಂದಿನಿ ಸ್ತೋತ್ರವನ್ನು ಹಾಡಿದ್ದು, ಈ ಮುದ್ದಾದ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ವಿಡಿಯೋವನ್ನು ಸೌರಭ್‌ (@saurabhdaftarda) ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್‌ ವಿಡಿಯೋದಲ್ಲಿ ಸಿಂಗರ್‌ ಸಿಂಗರ್‌ ಸೌರಭ್‌ ದಫ್ತರ್ದಾರ್‌ ಅವರ ಮೂರುವರೆ ವರ್ಷದ ಮಗಳು “ಐಗಿರಿ ನಂದಿನಿ ನಂದಿತ ಮೇದಿನಿ ವಿಶ್ವವಿನೋದಿನ ನಂದಿನುತೇ ಗಿರಿವರವಿಂಧ್ಯಶಿರೋಧಿನಿವಾಸಿನಿ ವಿಷ್ಣುವಿಲಾಸಿನಿ ಜಿಷ್ಣುನುತೇ” ದೇವಿ ಶ್ಲೋಕವನ್ನು ಜಪಿಸುತ್ತಿರುವ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ತನ್ನ ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವತಿ ಸಾವು

ಕೆಲ ಸಮಯಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2.5 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಮಗುವಿನ ಕಂಠದಲ್ಲಿ ಮೂಡಿಬಂದ ದೇವಿಯ ಭಜನೆಯನ್ನು ಕೇಳಿ ನೆಟ್ಟಿಗರು ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:54 am, Wed, 19 June 24

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ