AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೂದಲೆಳೆ ಅಂತರದಲ್ಲಿ ಪ್ರಾಣ ಉಳಿಯಿತು; ಸೆಕೆಂಡುಗಳಲ್ಲಿ ಅಪಾಯದಿಂದ ಪಾರಾದ ಮಹಿಳೆ

ಜಿಟಿಜಿಟಿ ಮಳೆಯಲ್ಲಿ ಛತ್ರಿ ಹಿಡಿದು ಮಹಿಳೆಯೋರ್ವಳು ರಸ್ತೆಯಲ್ಲಿ ನಡೆದು ಸಾಗುತ್ತಿರುತ್ತಾಳೆ. ಕುಸಿದು ಬೀಳುತ್ತಿರುವ ಮರದಿಂದ ತಪ್ಪಿಸಿಕೊಂಡು ಅಪಾಯದಿಂದ ಪಾರಾದ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Viral Video: ಕೂದಲೆಳೆ ಅಂತರದಲ್ಲಿ ಪ್ರಾಣ ಉಳಿಯಿತು; ಸೆಕೆಂಡುಗಳಲ್ಲಿ ಅಪಾಯದಿಂದ ಪಾರಾದ ಮಹಿಳೆ
ಕೂದಲೆಳೆ ಅಂತರದಲ್ಲಿ ಪ್ರಾಣ ಉಳಿಯಿತು
shruti hegde
|

Updated on: May 20, 2021 | 1:54 PM

Share

ಭಯಂಕರ ತೌಕ್ತೆ ಚಂಡಮಾರುತದಿಂದ ಅದೆಷ್ಟೋ ಪ್ರದೇಶಗಳು ಹಾನಿಗೊಳಗಾಗಿವೆ. ಆರ್ಭಟದ ಮಳೆ, ಗಾಳಿಗೆ ಅದೆಷ್ಟೋ ಮರಗಳು ಕುಸಿದು ಬಿದ್ದಿವೆ. ಇಂತಹ ಸಮಯದಲ್ಲಿ ಕುಸಿದು ಬೀಳುತ್ತಿರುವ ಮರದಿಂದ ತಪ್ಪಿಸಿಕೊಂಡು ಅಪಾಯದಿಂದ ಪಾರಾದ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ, ನೋಡುತ್ತಿದ್ದಂತೆಯೇ ಒಂದು ಕ್ಷಣ ಬೆಚ್ಚಿಬೀಳಿಸುವಂತಿದೆ.

ವಿಡಿಯೋದಲ್ಲಿ ಗಮನಿಸುವಂತೆ, ಜಿಟಿಜಿಟಿ ಮಳೆಯಲ್ಲಿ ಛತ್ರಿ ಹಿಡಿದು ಮಹಿಳೆಯೋರ್ವಳು ರಸ್ತೆಯಲ್ಲಿ ನಡೆದು ಸಾಗುತ್ತಿರುತ್ತಾಳೆ. ಗಾಳಿ ಬೇರೆ ಜೋರಾಗಿ ಬೀಸುತ್ತಿದೆ. ಇದ್ದಕ್ಕಿದ್ದಂತೆ ಎದುರಿದ್ದ ಮರ ಕುಸಿದು ಬೀಳುತ್ತದೆ. ಸೆಕೆಂಡುಗಳಲ್ಲಿ ಮಹಿಳೆ ಅಪಾಯದಿಂದ ಪಾರಾಗುತ್ತಾಳೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆಯ ರೋಚಕ ದೃಶ್ಯ ಸೆರೆಯಾಗಿದೆ.

ಮರ ಬೀಳುತ್ತಿರುವುದು ಗೋಚರವಾಗುತ್ತಿದ್ದಂತೆಯೇ ತಡಮಾಡದೇ ಆಕೆ ಹಿಂದಕ್ಕೆ ಬಂದು ನಿಲ್ಲುತ್ತಾಳೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ 8 ಸೆಕೆಂಡುಗಳ ಸಿಸಿಟಿವಿ ವಿಡಿಯೋ 30 ಸಾವಿರ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ತೌಕ್ತೆ ಚಂಡಮಾರುತದ ಗಾಳಿಯು ಭಯಂಕರವಾಗಿತ್ತು. ಇದರಿಂದ 2,500ಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಮೇ ತಿಂಗಳಿನಲ್ಲೇ ಅತಿ ಹೆಚ್ಚು ಮಳೆಯಾಗಿದ್ದು, ತೌಕ್ತೆ ಚಂಡಮಾರುತದಿಂದ 24 ಗಂಟೆಗಳಲ್ಲಿ 230 ಮಿಮೀ ಮಳೆಯಾಗಿ ಇತಿಹಾಸ ಸೃಷ್ಟಿಸಿದೆ. ಮೇ 17ರಂದು ರೆಕಾರ್ಡ್​ ಆದ ವಿಡಿಯೋವನ್ನು ಎಎನ್​ಐ ವರದಿ ಮಾಡಿದೆ.

ಮುಂಬೈನಲ್ಲಿ ತಾಕ್ತೆ ಚಂಡಮಾರುತದಿಂದಾಗಿ ಭಾರೀ ಮಳೆಯಾಗಿದ್ದು ಗಂಟೆಗೆ 100 ಕಿಲೋಮೀಟರ್​ಗಿಂತಲೂ ವೇಗದಲ್ಲಿ ಗಾಳಿ ಬೀಸಿದೆ. ಅದೆಷ್ಟೋ ದೈತ್ಯ ಮರಗಳು ನೆಲಕ್ಕುರುಳಿವೆ. ಭೀಕರ ಮಳೆ, ಗಾಳಿಯಿಂದ 11 ಗಂಟೆಗಳ ಕಾಲ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಗಿತಗೊಳಿಸಲಾಗುತ್ತು.

Follow Us
shruti hegde
shruti hegde
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್