AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೂದಲೆಳೆ ಅಂತರದಲ್ಲಿ ಪ್ರಾಣ ಉಳಿಯಿತು; ಸೆಕೆಂಡುಗಳಲ್ಲಿ ಅಪಾಯದಿಂದ ಪಾರಾದ ಮಹಿಳೆ

ಜಿಟಿಜಿಟಿ ಮಳೆಯಲ್ಲಿ ಛತ್ರಿ ಹಿಡಿದು ಮಹಿಳೆಯೋರ್ವಳು ರಸ್ತೆಯಲ್ಲಿ ನಡೆದು ಸಾಗುತ್ತಿರುತ್ತಾಳೆ. ಕುಸಿದು ಬೀಳುತ್ತಿರುವ ಮರದಿಂದ ತಪ್ಪಿಸಿಕೊಂಡು ಅಪಾಯದಿಂದ ಪಾರಾದ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Viral Video: ಕೂದಲೆಳೆ ಅಂತರದಲ್ಲಿ ಪ್ರಾಣ ಉಳಿಯಿತು; ಸೆಕೆಂಡುಗಳಲ್ಲಿ ಅಪಾಯದಿಂದ ಪಾರಾದ ಮಹಿಳೆ
ಕೂದಲೆಳೆ ಅಂತರದಲ್ಲಿ ಪ್ರಾಣ ಉಳಿಯಿತು
shruti hegde
|

Updated on: May 20, 2021 | 1:54 PM

Share

ಭಯಂಕರ ತೌಕ್ತೆ ಚಂಡಮಾರುತದಿಂದ ಅದೆಷ್ಟೋ ಪ್ರದೇಶಗಳು ಹಾನಿಗೊಳಗಾಗಿವೆ. ಆರ್ಭಟದ ಮಳೆ, ಗಾಳಿಗೆ ಅದೆಷ್ಟೋ ಮರಗಳು ಕುಸಿದು ಬಿದ್ದಿವೆ. ಇಂತಹ ಸಮಯದಲ್ಲಿ ಕುಸಿದು ಬೀಳುತ್ತಿರುವ ಮರದಿಂದ ತಪ್ಪಿಸಿಕೊಂಡು ಅಪಾಯದಿಂದ ಪಾರಾದ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ, ನೋಡುತ್ತಿದ್ದಂತೆಯೇ ಒಂದು ಕ್ಷಣ ಬೆಚ್ಚಿಬೀಳಿಸುವಂತಿದೆ.

ವಿಡಿಯೋದಲ್ಲಿ ಗಮನಿಸುವಂತೆ, ಜಿಟಿಜಿಟಿ ಮಳೆಯಲ್ಲಿ ಛತ್ರಿ ಹಿಡಿದು ಮಹಿಳೆಯೋರ್ವಳು ರಸ್ತೆಯಲ್ಲಿ ನಡೆದು ಸಾಗುತ್ತಿರುತ್ತಾಳೆ. ಗಾಳಿ ಬೇರೆ ಜೋರಾಗಿ ಬೀಸುತ್ತಿದೆ. ಇದ್ದಕ್ಕಿದ್ದಂತೆ ಎದುರಿದ್ದ ಮರ ಕುಸಿದು ಬೀಳುತ್ತದೆ. ಸೆಕೆಂಡುಗಳಲ್ಲಿ ಮಹಿಳೆ ಅಪಾಯದಿಂದ ಪಾರಾಗುತ್ತಾಳೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆಯ ರೋಚಕ ದೃಶ್ಯ ಸೆರೆಯಾಗಿದೆ.

ಮರ ಬೀಳುತ್ತಿರುವುದು ಗೋಚರವಾಗುತ್ತಿದ್ದಂತೆಯೇ ತಡಮಾಡದೇ ಆಕೆ ಹಿಂದಕ್ಕೆ ಬಂದು ನಿಲ್ಲುತ್ತಾಳೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ 8 ಸೆಕೆಂಡುಗಳ ಸಿಸಿಟಿವಿ ವಿಡಿಯೋ 30 ಸಾವಿರ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ತೌಕ್ತೆ ಚಂಡಮಾರುತದ ಗಾಳಿಯು ಭಯಂಕರವಾಗಿತ್ತು. ಇದರಿಂದ 2,500ಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಮೇ ತಿಂಗಳಿನಲ್ಲೇ ಅತಿ ಹೆಚ್ಚು ಮಳೆಯಾಗಿದ್ದು, ತೌಕ್ತೆ ಚಂಡಮಾರುತದಿಂದ 24 ಗಂಟೆಗಳಲ್ಲಿ 230 ಮಿಮೀ ಮಳೆಯಾಗಿ ಇತಿಹಾಸ ಸೃಷ್ಟಿಸಿದೆ. ಮೇ 17ರಂದು ರೆಕಾರ್ಡ್​ ಆದ ವಿಡಿಯೋವನ್ನು ಎಎನ್​ಐ ವರದಿ ಮಾಡಿದೆ.

ಮುಂಬೈನಲ್ಲಿ ತಾಕ್ತೆ ಚಂಡಮಾರುತದಿಂದಾಗಿ ಭಾರೀ ಮಳೆಯಾಗಿದ್ದು ಗಂಟೆಗೆ 100 ಕಿಲೋಮೀಟರ್​ಗಿಂತಲೂ ವೇಗದಲ್ಲಿ ಗಾಳಿ ಬೀಸಿದೆ. ಅದೆಷ್ಟೋ ದೈತ್ಯ ಮರಗಳು ನೆಲಕ್ಕುರುಳಿವೆ. ಭೀಕರ ಮಳೆ, ಗಾಳಿಯಿಂದ 11 ಗಂಟೆಗಳ ಕಾಲ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಗಿತಗೊಳಿಸಲಾಗುತ್ತು.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!