Sign In

By signing in or creating an account, you agree with Associated Broadcasting Company's Terms & Conditions and Privacy Policy.

Dakshina Kannada: ಸುಳ್ಯದಲ್ಲಿ ಗುಂಡಿ ತೋಡುವಾಗ ಪತ್ತೆಯಾಯ್ತು ಪುರಾತನ ಕಾಲದ ಗುಹೆ

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ ಪುರಾತನ ಕಾಲದ ಗುಹೆ ಪತ್ತೆಯಾಗಿದೆ. ಇದನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮನಿಸುತ್ತಿದ್ದು, ಪತ್ತೆಯಾದ ಗುಹೆ ಹಾಗೂ ಅವಶೇಷಗಳ ಬಗ್ಗೆ ಪುರಾತತ್ವಶಾಸ್ತ್ರಜ್ಞರು ಅಧ್ಯಯನ ನಡೆಸುತ್ತಿದ್ದಾರೆ.

Dakshina Kannada: ಸುಳ್ಯದಲ್ಲಿ ಗುಂಡಿ ತೋಡುವಾಗ ಪತ್ತೆಯಾಯ್ತು ಪುರಾತನ ಕಾಲದ ಗುಹೆ
ಸುಳ್ಯದಲ್ಲಿ ಪತ್ತೆಯಾದ ಪುರಾತನ ಕಾಲದ ಗುಹೆ ಮತ್ತು ಅವಶೇಷಗಳು
Follow us
TV9 Web
| Updated By: Rakesh Nayak Manchi

Updated on: Aug 28, 2022 | 3:26 PM

ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ರೈತರೊಬ್ಬರು ಮಣ್ಣನ್ನು ಅಗೆಯುತ್ತಿದ್ದಾಗ ಒಂದು ಭೂಭಾಗ ಕುಸಿದುಬಿದ್ದು ಪುರಾತನ ಕಾಲದ ಗುಹೆಯೊಂದು ಪತ್ತೆಯಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮಣ್ಣಿನ ಮಡಕೆಗಳು, ಬಟ್ಟಲುಗಳು ಮತ್ತು ವಿವಿಧ ಆಕಾರಗಳ ಸಣ್ಣ ಪಾತ್ರೆಗಳ ಅವಶೇಷಗಳು ಕಂಡುಬಂದಿವೆ. ಸದ್ಯ ಉಡುಪಿ ಪುರಾತತ್ವಶಾಸ್ತ್ರಜ್ಞರು ಸ್ಥಳಕ್ಕೆ ಭೇಟಿ ನೀಡಿ ಅಧ್ಯಯನದಲ್ಲಿ ತೊಡಗಿಕೊಂಡಿದ್ದಾರೆ.

ಎಡಮಂಗಲ ಗ್ರಾಮದಲ್ಲಿ ರೈತ ಕಲ್ಲೇಂಬಿ ವಿಶ್ವನಾಥ ಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಖರ್ಜೂರ ನೆಡಲು ಗುಂಡಿ ತೋಡಲಾಗುತ್ತಿತ್ತು. ಈ ವೇಳೆ ಭೂಮಿ ಬಾಯ್ತೆರೆದು ದೊಡ್ಡ ಹೊಂಡದಂತಾಗಿದೆ. ಸ್ಥಳೀಯರು ಇದನ್ನು ಇನ್ನಷ್ಟು ಸೂಕ್ಷ್ಮವಾಗಿ ಗಮನಿಸಿದಾಗ ಗುಹೆ ಎಂದು ತಿಳಿದುಬಂದಿದೆ. ಈ ಗುಹೆಯಲ್ಲಿ ಮಣ್ಣಿನ ಮಡಕೆಗಳು, ಬಟ್ಟಲುಗಳು ಮತ್ತು ವಿವಿಧ ಆಕಾರಗಳ ಸಣ್ಣ ಪಾತ್ರೆಗಳ ಅವಶೇಷಗಳು ಕಂಡುಬಂದಿದ್ದು, ಈ ಬಗ್ಗೆ ಪುರಾತತ್ವಶಾಸ್ತ್ರಜ್ಞರಿಗೆ ಮಾಹಿತಿ ತಿಳಿಸಲಾಗಿದೆ.

ಅದರಂತೆ, ಸ್ಥಳಕ್ಕೆ ಭೇಟಿ ಕೊಟ್ಟ ಉಡುಪಿಯ ಶಿರ್ವದ ಎಂಎಸ್‌ಆರ್‌ಎಸ್ ಕಾಲೇಜಿನ ಪುರಾತತ್ವಶಾಸ್ತ್ರಜ್ಞ ಪ್ರೊಫೆಸರ್ ಟಿ ಮುರುಗೇಶಿ ನೇತೃತ್ವದ ತಂಡವು ಉತ್ಖನನಗೊಂಡ ಸ್ಥಳದ ಹಾಗೂ ಪತ್ತೆಯಾದ ಅವಶೇಷಗಳ ಬಗ್ಗೆ ಅಧ್ಯಯನ ನಡೆಸುವಲ್ಲಿ ನಿರತವಾಗಿದೆ. ಸಂಪೂರ್ಣ ವೈಜ್ಞಾನಿಕ ಪರೀಕ್ಷೆಯ ನಂತರವಷ್ಟೇ ಪತ್ತೆಯಾದ ಗುಹೆ ಹಾಗೂ ಅವಶೇಷಗಳ ಬಗ್ಗೆ ಸಂಪೂರ್ಣ ವಿವರಗಳು ತಿಳಿದುಬರಲಿದೆ. ಸದ್ಯ ಪುರಾತನ ಕಾಲದ ಗುಹೆಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಆಗಮಿಸುತ್ತಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ