AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈವೆಂಟ್​​ನಲ್ಲಿ ಭಾಗಿಯಾಗಲು ಈ ಚಾಯ್‌ವಾಲಾ ಪಡೆಯುವ ಸಂಭಾವಣೆ ಎಷ್ಟು?

ನಾಗ್ಪುರದ ಪ್ರಸಿದ್ಧ ಚಹಾ ಮಾರಾಟಗಾರ ಡಾಲಿ ಚಾಯ್ವಾಲಾ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರ ಭೇಟಿಯ ನಂತರ ವಿಶ್ವದಾದ್ಯಂತ ಸಖತ್​ ಫೇಮಸ್​​​ ಆಗಿದ್ದಾನೆ. ಇದೀಗ ದೇಶ ವಿದೇಶಗಳಲ್ಲಿ ಒಂದು ಈವೆಂಟ್‌ಗಳಲ್ಲಿ ಭಾಗಿಯಾಗಲು ಡಾಲಿ ಪಡೆಯುವ ಸಂಭಾವಣೆ ಕುರಿತ ವಿಡಿಯೋವೊಂದು ಎಲ್ಲೆಡೆ ವೈರಲ್​ ಆಗುತ್ತಿದೆ.

ಅಕ್ಷತಾ ವರ್ಕಾಡಿ
|

Updated on:Dec 07, 2024 | 12:39 PM

Share

ನಾಗ್ಪುರದ ಪ್ರಸಿದ್ಧ ಚಹಾ ಮಾರಾಟಗಾರ ಡಾಲಿ ಚಾಯ್ವಾಲಾ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಫೇಮಸ್​ ಆಗಿದ್ದು, ಇದೀಗ ಆತ ಒಂದು ಈವೆಂಟ್​​ನಲ್ಲಿ ಭಾಗಿಯಾಗಲು ಪಡೆಯುವ ಸಂಭಾವಣೆ ಕುರಿತ ವಿಡಿಯೋವೊಂದು ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ. ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್‌ ಹೈದರಾಬಾದ್‌ನಲ್ಲಿ ಡಾಲಿಯ ಚಹಾದ ಅಂಗಡಿಗೆ ಭೇಟಿ ನೀಡಿದ ಬಳಿಕ ಈತ ವಿಶ್ವದಾದ್ಯಂತ ಪರಿಚಯವಾದ. ಇದೀಗ ಈತ ದೇಶ ವಿದೇಶದಾದ್ಯಂತ ಈವೆಂಟ್​​​ಗಳಲ್ಲಿ ಭಾಗಿಯಾಗುತ್ತಿದ್ದು, ಒಂದು ಈವೆಂಟ್​ಗೆ ಲಕ್ಷಾಂತರ ಹಣವನ್ನು ಪಡೆಯುತ್ತಿರುವುದಾಗಿ ವರದಿಯಾಗಿದೆ.

ಇತ್ತೀಚಿಗಷ್ಟೇ ಫುಡ್​ ಬ್ಲಾಗರ್ ಒಬ್ಬ brewwithabdu ಎಂಬ ಇನ್ಸ್ಟಾಗ್ರಾಮ್​​ ಖಾತೆಯ ಸಂದರ್ಶನದಲ್ಲಿ ಭಾಗಿಯಾಗಿದ್ದು, ಈ ವೇಳೆ ಡಾಲಿ ಚಾಯ್‌ವಾಲಾ ಪಡೆಯುವ ಸಂಭಾವಣೆಯ ಕುರಿತು ಬಹಿರಂಗಪಡಿಸಿದ್ದಾರೆ. ಈ ಫುಡ್​ ಬ್ಲಾಗರ್ ಕುವೈಟ್​ನ ಒಂದು ಕಾರ್ಯಕ್ರಮಕ್ಕೆ ಡಾಲಿಯನ್ನು ಆಹ್ವಾನಿಸಿದ್ದು, ಈತ ಈವೆಂಟ್​​ನಲ್ಲಿ ಭಾಗಿಯಾಗಲು ಬರೋಬ್ಬರೀ 5ಲಕ್ಷ ರೂ. ನಗದು ಜೊತೆಗೆ ತಂಗಲು 5ಸ್ಟಾರ್​ ಹೊಟೇಲ್​​ ವ್ಯವಸ್ಥೆಗೆ ಬೇಡಿಕೆ ಇಟ್ಟಿರುವುದಾಗಿ ಹೇಳಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಅಲ್ಲಾ..ಹೇಳಬೇಡ,’ಜೈ ಶ್ರೀ ರಾಮ್’ ಹೇಳಬೇಕು ಎಂದು 3 ಮಕ್ಕಳಿಗೆ ಚಪ್ಪಲಿಯಲ್ಲಿ ಹೊಡೆದ ಯುವಕ

ಚಹಾ ಮಾರಾಟಗಾರ ಡಾಲಿ ಇನ್ಸ್ಟಾಗ್ರಾಮ್​​​ನಲ್ಲಿ ಬರೋಬ್ಬರಿ 4.6 ಮಿಲಿಯನ್​​ ಅಂದರೆ 40ಲಕ್ಷಕ್ಕೂ ಅಧಿಕ ಫಾಲೋವರ್ಸ್​ಗಳನ್ನು ಹೊಂದಿದ್ದಾನೆ. ಇದಲ್ಲದೇ ಯೂಟ್ಯೂಬ್​​ನಲ್ಲಿ 20ಲಕ್ಷಕ್ಕೂ ಅಧಿಕ ಸಬ್ಸ್ಕೈಬರ್ ಇದ್ದಾರೆ. ಸೋಶಿಯಲ್​ ಮೀಡಿಯಾಗಳಲ್ಲಿ ಪ್ರತೀ ತಿಂಗಳು ಲಕ್ಷ ಲಕ್ಷ ಸಂಪಾದಿಸುವುದರ ಜೊತೆಗೆ ಈವೆಂಟ್​ಗಳಿಗೂ ಬರೋಬ್ಬರಿ 5ಲಕ್ಷ ಬೇಡಿಕೆ ಇಟ್ಟಿರುವುದು ಬಹಿರಂಗವಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:38 pm, Sat, 7 December 24

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ