AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನಮ್​​​ ಬಾಸ್‌ ಬಂದಾಯ್ತು ಕಣ್ರೋ; ಹಬ್ಬ ಮಾಡೋಕೆ ರೆಡಿ ಆಗ್ರೋ… ದರ್ಶನ್ ಮೀಮ್ಸ್‌ ವೈರಲ್

ರೇಣುಕಾಸ್ವಾಮಿ ಕೊಲೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ತೂಗುದೀಪ ಅವರಿಗೆ ಕರ್ನಾಟಕ ಹೈಕೋರ್ಟ್‌ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದೀಗ ದರ್ಶನ್‌ ಅಭಿಮಾನಿಗಳಿಗೆ ದೀಪಾವಳಿ ಹಬ್ಬಕ್ಕೆ ಬಂಪರ್‌ ಗಿಫ್ಟ್‌ ಸಿಕ್ಕಂತಾಗಿದ್ದು, ಈ ಸಿಹಿ ಸುದ್ದಿ ಕೇಳಿ ಅಭಿಮಾನಿಗಳ ಸಂತೋಷ ದುಪ್ಪಾಟ್ಟಾಗಿದೆ. ಈ ಕುರಿತ ಮೀಮ್ಸ್‌ಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ನಮ್​​​ ಬಾಸ್‌ ಬಂದಾಯ್ತು ಕಣ್ರೋ; ಹಬ್ಬ ಮಾಡೋಕೆ ರೆಡಿ ಆಗ್ರೋ… ದರ್ಶನ್ ಮೀಮ್ಸ್‌ ವೈರಲ್
ವೈರಲ್ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Oct 30, 2024 | 12:00 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್‌ 11 ರಂದು ಬಂಧನಕ್ಕೊಳಗಾಗಿದ್ದ ನಟ ದರ್ಶನ್‌ ತೂಗುದೀಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈ ಕೋರ್ಟ್‌ ಆರು ವಾರಗಳ ಅವಧಿ ಅಂದ್ರೆ ಸುಮಾರು 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಸುದ್ದಿ ದರ್ಶನ್‌ ಮಾತ್ರವಲ್ಲದೆ ಅವರ ಅಭಿಮಾನಿಗಳಿಗೂ ಕೂಡಾ ದೀಪಾವಳಿ ಹಬ್ಬಕ್ಕೆ ಬಂಪರ್‌ ಗಿಫ್ಟ್‌ ದೊರೆತಂತಾಗಿದೆ. ಅಭಿಮಾನಿಗಳಂತೂ ಡಿ ಬಾಸ್‌ಗೆ ಸಂಬಂಧಪಟ್ಟ ಪವರ್‌ಫುಲ್‌ ಮೀಮ್ಸ್‌, ವಿಡಿಯೋಗಳನ್ನು ಶೇರ್‌ ಮಾಡಿಕೊಳ್ಳುವ ಮೂಲಕ ಹಬ್ಬ ಶುರು ಮಾಡಿಕೊಂಡಿದ್ದಾರೆ. ಇದೀಗ ಇಲ್ಲೊಂದು ವಿಡಿಯೋ ಕೂಡಾ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ನಟ ದರ್ಶನ್‌ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದು, ನಮ್ಮ ಬಾಸ್‌ ಯಾವಾಗ ಜೈಲಿಂದ ಹೊರ ಬರ್ತಾರೆ ಅಂತ ಅಭಿಮಾನಿಗಳೆಲ್ಲರೂ ಕಾತುರದಿಂದ ಕಾಯ್ತ ಇದ್ರು. ಇದೀಗ ಆ ಶುಭ ಗಳಿಗೆ ಕೂಡಿ ಬಂದಿದ್ದು, ನಟ ದರ್ಶನ್‌ ಅವರಿಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಸುದ್ದಿ ತಿಳಿದು ಅಭಿಮಾನಿಗಳು ನಮ್ಮ ಬಾಸ್‌ ಬಂದ್ರು ಕಣ್ರೋ ಎನ್ನುತ್ತಾ ಹಬ್ಬವನ್ನೇ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಶೂಟಿಂಗ್ ಮಾಡುವಂತಿಲ್ಲ, ಪಾಸ್​​ಪೋರ್ಟ್ ಸರೆಂಡರ್​ ಮಾಡಬೇಕು; ದರ್ಶನ್​ಗೆ ಕೋರ್ಟ್ ಹಾಕಿದ ಷರತ್ತುಗಳಿವು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ದರ್ಶನ್‌ ಅವರಿಗೆ ಸಂಬಂಧಿಸಿದ ಮೀಮ್ಸ್‌ ಒಂದನ್ನು dbossganesh_ ಗಣೇಶ್‌ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ವೆಲ್‌ಕಮ್‌ ಬ್ಯಾಕ್‌ ಬಾಸ್;‌ ಹಬ್ಬ ಮಾಡೋಕೆ ರೆಡಿ ಆಗ್ರೋ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ನಮ್ಮ ಬಾಸ್‌ ಬರ್ತಿದ್ದಾರೆ ಕಣ್ರೋ ಎಂದು ಹೇಳುತ್ತಾ ಸಖತ್‌ ಆಗಿ ಎಡಿಟಿಂಗ್‌ ಮಾಡಿರುವಂತಹ ವಿಡಿಯೋವನ್ನು ಶೇರ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ವೆಲ್‌ಕಮ್‌ ಬ್ಯಾಕ್‌ ಡಿ ಬಾಸ್‌ ಎಂದು ಹೇಳುತ್ತಾ ಅಭಿಮಾನಿಗಳು ದೀಪಾವಳಿಯ ಮುಂಚೆಯೇ ಜೋರು ಹಬ್ಬವನ್ನು ಶುರು ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು