AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನಮ್‌ ಬಾಸ್‌ ರಿಲೀಸೋ.. ದೇವ್ರು ರಿಲೀಸ್‌ ಆಗ್ಬಿರ್ಟ್ರು ಕಣ್ರಲೇ!ವೈರಲ್‌ ಆಗ್ತಿದೆ ದರ್ಶನ್ ಮೀಮ್ಸ್

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಮ್‌ ಬಾಸ್‌ಗೆ ಜಾಮೀನು ಸಿಕ್ಕಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿಗಳು ಫುಲ್‌ ಜೋರಾಗೇ ಹಬ್ಬ ಶುರು ಹಚ್ಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಡಿ ಬಾಸ್‌ ರಿಲೀಸ್‌ಗೆ ಸಂಬಂಧಪಟ್ಟ ಕೆಲವೊಂದು ಮೀಮ್ಸ್‌ಗಳು ಕೂಡಾ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ನಮ್‌ ಬಾಸ್‌ ರಿಲೀಸೋ.. ದೇವ್ರು ರಿಲೀಸ್‌ ಆಗ್ಬಿರ್ಟ್ರು ಕಣ್ರಲೇ!ವೈರಲ್‌ ಆಗ್ತಿದೆ ದರ್ಶನ್ ಮೀಮ್ಸ್
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Oct 30, 2024 | 1:18 PM

Share

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ ಅವರಿಗೆ ಕೊನೆಗೂ 131 ದಿನಗಳ ಬಳಿಕ ಮಧ್ಯಂತರ ಜಾಮೀನು ಸಿಕ್ಕಿದೆ. ದರ್ಶನ್‌ ಅವರಿಗೆ ಬೆನ್ನು ನೋವು ಇದ್ದ ಕಾರಣ ಅವರಿಗೆ ಜಾಮೀನು ನೀಡಬೇಕೆಂದು ದರ್ಶನ್‌ ಪರ ವಕೀಲ ಸಿ.ವಿ ನಾಗೇಶ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಕರ್ನಾಟಕ ಹೈಕೋರ್ಟ್ ನಟ ದರ್ಶನ್‌ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಬೆನ್ನು ನೋವಿನ ಸಮಸ್ಯೆಗೆ ತುರ್ತು ಚಿಕಿತ್ಸೆಯ ಅಗತ್ಯ ಹಿನ್ನೆಲೆ ಆರು ವಾರಗಳ ಅವಧಿ ಅಂದ್ರೆ ಸುಮಾರು 45 ದಿನಗಳ ಕಾಲದ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.‌ ಈ ಸುದ್ದಿ ದರ್ಶನ್‌ ಅಭಿಮಾನಿಗಳಿಗೆ ದೀಪಾವಳಿ ಹಬ್ಬಕ್ಕೆ ಬಂಪರ್‌ ಉಡುಗೊರೆ ಸಿಕ್ಕಂತಾಗಿದೆ. ಸೋಷಿಯಲ್‌ ಮೀಡಿಯಾದಲ್ಲಂತೂ ಈ ದಿನ ಡಿ ಬಾಸ್‌ ಮೀಮ್ಸ್‌ಗಳು ಭಾರೀ ವೈರಲ್‌ ಆಗುತ್ತಿವೆ.

ನಟ ದರ್ಶನ್‌ಗೆ ಜಾಮೀನು ಮಂಜೂರು ಆಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ನಮ್‌ ಬಾಸ್‌ಗೆ ಜಾಮೀನು ಸಿಕ್ಕಾಯ್ತು ಕಣ್ರೋ ಎಂದು ಅಭಿಮಾನಿಗಳು ಫುಲ್‌ ಜೋರಾಗೇ ಹಬ್ಬ ಶುರು ಹಚ್ಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಡಿ ಬಾಸ್‌ ರಿಲೀಸ್‌ಗೆ ಸಂಬಂಧಪಟ್ಟ ಕೆಲವೊಂದು ಮೀಮ್ಸ್‌ಗಳು ಕೂಡಾ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಹೌದು ಡಿ ಬಾಸ್‌ ಫ್ಯಾನ್ ಪೇಜ್‌ಗಳು ದರ್ಶನ್‌ ಅವರ ಸಿನಿಮಾದ ಕೆಲವೊಂದು ಫುಟೇಜ್‌ಗಳನ್ನು ಎಡಿಟ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ನಮ್‌ ಬಾಸ್‌ ಬರ್ತಿದ್ದಾರೆ ಎಂದು ಖುಷಿಯನ್ನು ವ್ಯಕ್ತ ಪಡಿಸುತ್ತಿದ್ದಾರೆ.

ವೈರಲ್​​​ ವೀಡಿಯೋ ಇಲ್ಲಿದೆ ನೋಡಿ:

dboss_darbar ಹೆಸರಿನ ಇನ್‌ಸ್ಟಾಗ್ರಾಮ್‌ ಪೇಜ್‌ ಒಂದರಲ್ಲೂ ಇಂತಹದ್ದೇ ವಿಡಿಯೋವನ್ನು ಹಂಚಿಕೊಂಡಿದ್ದು, “ಮಗ ನಮ್‌ ಬಾಸು ರಿಲೀಸೋ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ದರ್ಶನ್‌ ಅವರು ತಮ್ಮ ಸಿನಿಮಾವೊಂದರಲ್ಲಿ ಜೈಲಿನಿಂದ ರಿಲೀಸ್‌ ಆಗುವಂತಹ ಸೀನ್‌ ಒಂದನ್ನು ಎಡಿಟ್‌ ಮಾಡಿ ಶೇರ್‌ ಮಾಡಲಾಗಿದ್ದು, ನಮ್‌ ಡಿ ಬಾಸ್‌ ಬಂದ್ರು ಹಬ್ಬ ಶುರು ಎನ್ನುತ್ತಾ, ಜಾಮೀನು ಮಂಜೂರು ಬೆನ್ನಲ್ಲೇ ಫುಲ್‌ ಖುಷ್‌ ಆಗಿ ದರ್ಶನ್‌ ಅಭಿಮಾನಿಗಳು ಹಬ್ಬ ಶುರು ಹಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್