AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೀರಿನಲ್ಲಿ ಮುಳುಗಿ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ತಲೆಕೆಳಗಾಗಿ ಮರಕ್ಕೆ ನೇತು ಹಾಕಿದ ಗ್ರಾಮಸ್ಥರು

ಮೃತದೇಹವನ್ನು ತಲೆಕೆಳಗಾಗಿ ಮರಕ್ಕೆ ಕಟ್ಟುಹಾಕಿ ಅಲುಗಾಡಿಸಿದ್ದಾರೆ. 30 ನಿಮಿಷದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Video: ನೀರಿನಲ್ಲಿ ಮುಳುಗಿ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ತಲೆಕೆಳಗಾಗಿ ಮರಕ್ಕೆ ನೇತು ಹಾಕಿದ ಗ್ರಾಮಸ್ಥರು
ನೀರಿನಲ್ಲಿ ಮುಳುಗಿ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ತಲೆಕೆಳಗಾಗಿ ಮರಕ್ಕೆ ನೇತು ಹಾಕಿದ ಗ್ರಾಮಸ್ಥರು
TV9 Web
| Updated By: shruti hegde|

Updated on:Aug 25, 2021 | 12:28 PM

Share

ಮಧ್ಯ ಪ್ರದೇಶ: ಈಜಲು ಹೋಗಿ ನೀರಿನಲ್ಲಿ ಮುಳುಗಿದ ವ್ಯಕ್ತಿಯ ದೇಹದಿಂದ ನೀರು ಹೊರ ತೆಗೆಯಲು ಮೃತದೇಹವನ್ನು ಮರಕ್ಕೆ ತಲೆಕೆಳಗಾಗಿ ನೇತು ಹಾಕಿದ ಘಟನೆ ನಡೆದಿದೆ. ಈ ಕುರಿತಂತೆ ಸ್ಥಳೀಯ ವರದಿಗಳಿಂದ ಮಾಹಿತಿ ತಿಳಿದು ಬಂದಿದೆ. ಗುಣಾ ಜಿಲ್ಲೆಯ ಕುಂಬ್ರಾಜ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಬರುವ ಜೋಗಿಪುರ ಹಳ್ಳಿಯಲ್ಲಿ ಕಳೆದ ಮಂಗಳವಾರ ಘಟನೆ ನಡೆದಿದೆ.

ಮೃತದೇಹವನ್ನು ತಲೆಕೆಳಗಾಗಿ ಮರಕ್ಕೆ ಕಟ್ಟುಹಾಕಿ ಅಲುಗಾಡಿಸಿದ್ದಾರೆ. 30 ನಿಮಿಷದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭನ್ವರ್​ಲಾಲ್​ ಭಂಜರಾ ಎಂಬ ಹೆಸರಿನ ವ್ಯಕ್ತಿ ಈಜಲು ನದಿಗೆ ಹೋಗಿದ್ದಾರೆ. ಆ ಸಮಯದಲ್ಲಿ ನೀರಿನಲ್ಲಿ ಮುಳುಗಿದ್ದಾರೆ. ತಕ್ಷಣ ನೋಡಿದ ಸ್ಥಳೀಯರು ಅವರನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ.

ಅಲ್ಲಿದ್ದ ಕೆಲವರು ದೇಹವನ್ನು ತಲೆಕೆಳಗಾಗಿ ಇರಿಸಬೇಕು ಅದರಿಂದ ನೀರು ಹೊರ ಬರಬಹುದು ಎಂದು ಸಲಹೆ ನೀಡಿದ್ದಾರೆ. ಗ್ರಾಮಸ್ಥರು ಕೆಲಹೊತ್ತು ವ್ಯಕ್ತಿಯ ಮೃತದೇಹವನ್ನು ತಲೆಕೆಳಗಾಗಿ ನೇತು ಹಾಕಿದ್ದಾರೆ.

ನಂತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದೆ. ನೀರಿನಲ್ಲಿ ಮುಳುಗಿದ ವ್ಯಕ್ತಿ ಉಸಿರಾಡುತ್ತಿದ್ದಾರೆ, ದೇಹದಿಂದ ನೀರು ಹೊರಹಾಕಿದರೆ ವ್ಯಕ್ತಿ ಉಳಿಯುತ್ತಾನೆ ಎಂದು ಗ್ರಾಮಸ್ಥರು ಹೇಳಿದರು. ಹಾಗೆ ಮಾಡದಂತೆ ನಾನು ಮನವೊಲಿಸಿದೆ. ಆದರೆ ಯಾರೂ ಕೇಳಲು ತಯಾರಿರಲಿಲ್ಲ. ದೇಹವನ್ನು ಮರದ ಕೊಂಬೆಗೆ ತಲೆಕೆಳಗಾಗಿ ನೇತುಹಾಕಿದ್ದಾರೆ ಎಂದು ಪೊಲೀಸ್ ಹೊರಠಾಣೆ ಉಸ್ತುವಾರಿ ತೋರಣ್ ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿಯವರನ್ನು ಸಂಪರ್ಕಿಸಿದಾಗ ಈ ಘಟನೆಯ ಬಗ್ಗೆ ತಿಳಿದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಭಾಗಿಯಾಗಿದ್ದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಮೆಡಿಕೊಲೆಗಲ್ ಸಂಸ್ಥೆಯ ಮಾಜಿ ನಿರ್ದೇಶಕ ಹೇಳಿದ್ದಾರೆ.

ಇದನ್ನೂ ಓದಿ:

Viral Video: ಬೇರೊಂದು ಯುವತಿ ಜತೆ ತಿರುಗಾಡುತ್ತಿದ್ದ ಗಂಡನನ್ನು ನೋಡಿದ ಹೆಂಡತಿ ಏನು ಮಾಡ್ತಾಳೆ ನೋಡಿ! ವಿಡಿಯೋ ವೈರಲ್​

Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

(Dead body drowned man hanged down For drain out water from lungs in madhya pradesh)

Published On - 12:18 pm, Wed, 25 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!