AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆ; ಪೋಸ್ಟ್​​ ವೈರಲ್​​

ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ, ಸಾಕಷ್ಟು ಟೀಕೆಗಳ ನಂತರ ತಪ್ಪಿಗೆ ಕಾಲೇಜು ಪ್ರತಿಕ್ರಿಯಿಸಿದೆ. ಹಾಸ್ಟೆಲ್‌ ಆಹಾರದಲ್ಲಿನ ಬೇಜಾವಬ್ದಾರಿತನಕ್ಕೆ, ಮೆಸ್ ಪ್ರೊವೈಡರ್ ಕಂಪನಿಯಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ. ತಪ್ಪಿಗೆ ಪರಿಹಾರವಾಗಿ ಮೆಸ್ ಸೇವಾ ಪೂರೈಕೆದಾರರಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ನಿರ್ಧರಿಸಿರುವುದು ಮತ್ತೊಂದು ಪೋಸ್ಟ್​​​ನಿಂದ ತಿಳಿದುಬಂದಿದೆ.

Viral News: ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆ; ಪೋಸ್ಟ್​​ ವೈರಲ್​​
Dead Frog Found in Hostel's FoodImage Credit source: Twitter
ಅಕ್ಷತಾ ವರ್ಕಾಡಿ
|

Updated on: Sep 24, 2023 | 1:00 PM

Share

ಒಡಿಶಾ: ಭುವನೇಶ್ವರದ ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆಯಾಗಿದ್ದು, ವಿದ್ಯಾರ್ಥಿಗಳು ಫೋಟೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಕಾಲೇಜಿನ ಆಡಳಿತ ಮಂಡಳಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಆಹಾರದಲ್ಲಿ ಸತ್ತ ಕಪ್ಪೆ ಪತ್ತೆಯಾಗಿರುವ ಫೋಟೋವನ್ನು ಹಂಚಿಕೊಳ್ಳುವುದರ ಜೊತೆಗೆ, ಎಂಜಿನಿಯರಿಂಗ್ ಪದವಿ ಪಡೆಯಲು ಪೋಷಕರು ಸುಮಾರು 17.5 ಲಕ್ಷ ರೂಪಾಯಿಗಳನ್ನು ಪಾವತಿಸುತ್ತಾರೆ. ಇಷ್ಟು ದೊಡ್ಡ ಮೊತ್ತದ ಹೊರತಾಗಿಯೂ ಕಾಲೇಜು ಹಾಸ್ಟೆಲ್‌ನಲ್ಲಿ ನೀಡಲಾಗುತ್ತಿರುವ ಆಹಾರದಲ್ಲಿ ಬೇಜಾವಬ್ದಾರಿ ತೋರಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​​​ ಇಲ್ಲಿದೆ ನೋಡಿ:

ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ, ಸಾಕಷ್ಟು ಟೀಕೆಗಳ ನಂತರ ತಪ್ಪಿಗೆ ಕಾಲೇಜು ಪ್ರತಿಕ್ರಿಯಿಸಿದೆ. ಹಾಸ್ಟೆಲ್‌ ಆಹಾರದಲ್ಲಿನ ಬೇಜಾವಬ್ದಾರಿತನಕ್ಕೆ, ಮೆಸ್ ಪ್ರೊವೈಡರ್ ಕಂಪನಿಯಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ. ತಪ್ಪಿಗೆ ಪರಿಹಾರವಾಗಿ ಮೆಸ್ ಸೇವಾ ಪೂರೈಕೆದಾರರಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ನಿರ್ಧರಿಸಿರುವುದು ಮತ್ತೊಂದು ಪೋಸ್ಟ್​​​ನಿಂದ ತಿಳಿದುಬಂದಿದೆ.

ಇದನ್ನೂ ಓದಿ: ಕಂಡೀರಾ ಚೀನಾದ ಈ ಬಾಲಬಾಣಸಿಗನ; ಅಚ್ಚರಿಗೊಂಡ ನೆಟ್ಟಿಗರು

ಕಾಲೇಜು ಪ್ರತಿಕ್ರಿಯಿಸಿದ ಪೋಸ್ಟ್​​​ ಇಲ್ಲಿದೆ:

ಹಾಸ್ಟೆಲ್‌ ಆಹಾರದಲ್ಲಿನ ಬೇಜಾವಬ್ದಾರಿತನಕ್ಕೆ, ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ. ಕ್ಯಾಂಟೀನ್ ಗುತ್ತಿಗೆದಾರ, ಉಸ್ತುವಾರಿ ಎಲ್ಲರ ಮೇಲೆ ಮೊಕದ್ದಮೆ ಹೂಡಬೇಕು, ತಪ್ಪಿಗೆ ಅಮಾನತುಗೊಳಿಸಬೇಕು ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ. ಒಮ್ಮೆ ನಮ್ಮ ಹಾಸ್ಟೆಲ್ ಮೆಸ್‌ನಲ್ಲಿ ಆಹಾರದಲ್ಲಿ ಹಲ್ಲಿ ಸಿಕ್ಕಿತು. ಅದರ ನಂತರ ಇಡೀ ಸೆಮಿಸ್ಟರ್‌ಗೆ ಮೆಸ್‌ನಲ್ಲಿ ತಿನ್ನಲಿಲ್ಲ, ”ಎಂದು ಇನ್ನೊಬ್ಬ ಬಳಕೆದಾರರು ಬರೆದಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್