AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆ; ಪೋಸ್ಟ್​​ ವೈರಲ್​​

ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ, ಸಾಕಷ್ಟು ಟೀಕೆಗಳ ನಂತರ ತಪ್ಪಿಗೆ ಕಾಲೇಜು ಪ್ರತಿಕ್ರಿಯಿಸಿದೆ. ಹಾಸ್ಟೆಲ್‌ ಆಹಾರದಲ್ಲಿನ ಬೇಜಾವಬ್ದಾರಿತನಕ್ಕೆ, ಮೆಸ್ ಪ್ರೊವೈಡರ್ ಕಂಪನಿಯಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ. ತಪ್ಪಿಗೆ ಪರಿಹಾರವಾಗಿ ಮೆಸ್ ಸೇವಾ ಪೂರೈಕೆದಾರರಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ನಿರ್ಧರಿಸಿರುವುದು ಮತ್ತೊಂದು ಪೋಸ್ಟ್​​​ನಿಂದ ತಿಳಿದುಬಂದಿದೆ.

Viral News: ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆ; ಪೋಸ್ಟ್​​ ವೈರಲ್​​
Dead Frog Found in Hostel's FoodImage Credit source: Twitter
ಅಕ್ಷತಾ ವರ್ಕಾಡಿ
|

Updated on: Sep 24, 2023 | 1:00 PM

Share

ಒಡಿಶಾ: ಭುವನೇಶ್ವರದ ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆಯಾಗಿದ್ದು, ವಿದ್ಯಾರ್ಥಿಗಳು ಫೋಟೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಕಾಲೇಜಿನ ಆಡಳಿತ ಮಂಡಳಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಆಹಾರದಲ್ಲಿ ಸತ್ತ ಕಪ್ಪೆ ಪತ್ತೆಯಾಗಿರುವ ಫೋಟೋವನ್ನು ಹಂಚಿಕೊಳ್ಳುವುದರ ಜೊತೆಗೆ, ಎಂಜಿನಿಯರಿಂಗ್ ಪದವಿ ಪಡೆಯಲು ಪೋಷಕರು ಸುಮಾರು 17.5 ಲಕ್ಷ ರೂಪಾಯಿಗಳನ್ನು ಪಾವತಿಸುತ್ತಾರೆ. ಇಷ್ಟು ದೊಡ್ಡ ಮೊತ್ತದ ಹೊರತಾಗಿಯೂ ಕಾಲೇಜು ಹಾಸ್ಟೆಲ್‌ನಲ್ಲಿ ನೀಡಲಾಗುತ್ತಿರುವ ಆಹಾರದಲ್ಲಿ ಬೇಜಾವಬ್ದಾರಿ ತೋರಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​​​ ಇಲ್ಲಿದೆ ನೋಡಿ:

ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ, ಸಾಕಷ್ಟು ಟೀಕೆಗಳ ನಂತರ ತಪ್ಪಿಗೆ ಕಾಲೇಜು ಪ್ರತಿಕ್ರಿಯಿಸಿದೆ. ಹಾಸ್ಟೆಲ್‌ ಆಹಾರದಲ್ಲಿನ ಬೇಜಾವಬ್ದಾರಿತನಕ್ಕೆ, ಮೆಸ್ ಪ್ರೊವೈಡರ್ ಕಂಪನಿಯಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ. ತಪ್ಪಿಗೆ ಪರಿಹಾರವಾಗಿ ಮೆಸ್ ಸೇವಾ ಪೂರೈಕೆದಾರರಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ನಿರ್ಧರಿಸಿರುವುದು ಮತ್ತೊಂದು ಪೋಸ್ಟ್​​​ನಿಂದ ತಿಳಿದುಬಂದಿದೆ.

ಇದನ್ನೂ ಓದಿ: ಕಂಡೀರಾ ಚೀನಾದ ಈ ಬಾಲಬಾಣಸಿಗನ; ಅಚ್ಚರಿಗೊಂಡ ನೆಟ್ಟಿಗರು

ಕಾಲೇಜು ಪ್ರತಿಕ್ರಿಯಿಸಿದ ಪೋಸ್ಟ್​​​ ಇಲ್ಲಿದೆ:

ಹಾಸ್ಟೆಲ್‌ ಆಹಾರದಲ್ಲಿನ ಬೇಜಾವಬ್ದಾರಿತನಕ್ಕೆ, ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ. ಕ್ಯಾಂಟೀನ್ ಗುತ್ತಿಗೆದಾರ, ಉಸ್ತುವಾರಿ ಎಲ್ಲರ ಮೇಲೆ ಮೊಕದ್ದಮೆ ಹೂಡಬೇಕು, ತಪ್ಪಿಗೆ ಅಮಾನತುಗೊಳಿಸಬೇಕು ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ. ಒಮ್ಮೆ ನಮ್ಮ ಹಾಸ್ಟೆಲ್ ಮೆಸ್‌ನಲ್ಲಿ ಆಹಾರದಲ್ಲಿ ಹಲ್ಲಿ ಸಿಕ್ಕಿತು. ಅದರ ನಂತರ ಇಡೀ ಸೆಮಿಸ್ಟರ್‌ಗೆ ಮೆಸ್‌ನಲ್ಲಿ ತಿನ್ನಲಿಲ್ಲ, ”ಎಂದು ಇನ್ನೊಬ್ಬ ಬಳಕೆದಾರರು ಬರೆದಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ