AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಇದು ಶವದ ಪಾದವೇ?

Dead man's finger : ಥ್ಯಾಂಕ್ಸ್​ ಬ್ರೋ ಯುಪಿಎಸ್​ಸಿ ಪರೀಕ್ಷೆಯಲ್ಲಿ ಈ ಪ್ರಶ್ನೆ ಕೇಳುವುದು ಗ್ಯಾರಂಟಿ ಎಂದಿದ್ದಾರೆ ಒಬ್ಬರು. ಇನ್ನೊಬ್ಬರು, ಹನುಮಾನ್ ಚಾಲೀಸಾ ಪಠಿಸಿದರೆ ದೆವ್ವ ಹತ್ತಿರ ಬಾರದು ಎಂದಿದ್ದಾರೆ. ನಿಜವಾಗಲೂ ಇದು ಏನು?

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಇದು ಶವದ ಪಾದವೇ?
ಶವದ ಪಾದದಂತೆ ಕಾಣುವ ಕ್ಸೈಲೇರಿಯಾ ಪಾಲಿಮಾರ್ಫಾ ಶಿಲೀಂಧ್ರ
TV9 Web
| Edited By: ಶ್ರೀದೇವಿ ಕಳಸದ|

Updated on:Jan 17, 2023 | 2:29 PM

Share

Viral News : ಈ ಕಟ್ಟಿಗೆಯ ಕೆಳಗೆ ಕಾಣುತ್ತಿರುವ ಪಾದ ಶವದ್ದೇ? ನೋಡಿದ ಯಾರಿಗೂ ಈ ಅನುಮಾನ ಬಾರದೇ ಇರದು. ಈ ತೆಳುಪಾದವನ್ನು ಮತ್ತೆ ನೋಡಿದಾಗ ಇದೊಂದು ಹೆಣ್ಣುಶವದ ಪಾದವಿದ್ದಿರಬೇಕು ಎನ್ನಿಸುತ್ತದೆ. ಮತ್ತೂ ನೋಡಿದಾಗ ನಾಜೂಕಾದ ಉಗುರುಗಳಿಗೆ ನೇಲ್​ಪಾಲಿಶ್ ಹಚ್ಚಿದಂತೆ ಕಂಡು, ಇದು ಪಕ್ಕಾ ಹೆಣ್ಣುಶವದ ಪಾದವೇ ಎಂಬ ತೀರ್ಮಾನಕ್ಕೆ ಬರಬೇಕು ಎನ್ನಿಸುತ್ತದೆ.

ಐಎಫ್‌ಎಸ್ ಅಧಿಕಾರಿ ಸಾಮ್ರಾಟ್ ಗೌಡ ಈ ಫೋಟೋ ಟ್ವೀಟ್ ಮಾಡಿದ್ದಾರೆ. ಇದು ಶವದ ಬೆರಳುಗಳಂತೆ ಕಾಣುವ ಶಿಲೀಂಧ್ರ (Dead man’s finger). ಇದನ್ನು ಕ್ಸೈಲೇರಿಯಾ ಪಾಲಿಮಾರ್ಫಾ (Xylaria polymorpha)  ಎಂದು ಕರೆಯಲಾಗುತ್ತದೆ. ಇದನ್ನು ನೋಡಿದ ನೆಟ್ಟಿಗರು, ಸದ್ಯ! ಇದೊಂದು ಶಿಲೀಂಧ್ರ. ಈಗಲೂ ಈ ಫೋಟೋ ನೋಡಿ ಭಯವಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ : ನಾನೂ ನನ್ನ ಬೆಕ್ಕುಗಳೂ; ಬೆಕ್ಕುಗಳೊಂದಿಗೆ ಬೈಕ್​ಸವಾರಿ ಮಾಡುತ್ತಿರುವ ಬೆಂಗಳೂರಿಗನ ವಿಡಿಯೋ ವೈರಲ್

ಈ ಶಿಲೀಂಧ್ರವು ಬೀಚ್​ವುಡ್​ ಮರಗಳ ಬೊಡ್ಡೆಗಳಡಿ ಬೆಳೆಯುತ್ತದೆ. ವರ್ಷವಿಡೀ ಇದು ಹೀಗೇ ಇರುತ್ತದೆ. ಆದ್ದರಿಂದ ಡೆಡ್​ ಮ್ಯಾನ್ಸ್​ ಫಿಂಗರ್ಸ್​ ಎಂದೇ ಇದನ್ನು ಕರೆಯುತ್ತಾರೆ. ಬ್ರಿಟನ್ ಮತ್ತು ಐರ್ಲೆಂಡ್​ನಲ್ಲಿ ಇದು ಸಾಮಾನ್ಯವಾಗಿ ಬೆಳೆಯುತ್ತದೆ. ಉತ್ತರ ಅಮೆರಿಕಾ, ಯುರೋಪ್​ನ ಅನೇಕ ಪ್ರದೇಶಗಳಲ್ಲಿ ಕೂಡ ಇದು ಬೆಳೆಯುತ್ತದೆ.

ಇದನ್ನೂ ಓದಿ : 1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್

ಪ್ರಕೃತಿಗಿಂತ ಸೃಜನಶೀಲ ಯಾವುದೂ ಇಲ್ಲ ಎಂದಿದ್ದಾರೆ ನೆಟ್ಟಿಗರೊಬ್ಬರು. ದೆವ್ವ ಇದು! ಎಂದು ನಕ್ಕಿದ್ದಾರೆ  ಕೆಲವರು. ಖಂಡಿತ ಈ ಕುರಿತು ಯುಪಿಎಸ್​ಸಿ ಪರೀಕ್ಷೆಯಲ್ಲಿ ಕೇಳುತ್ತಾರೆ, ಮಾಹಿತಿಗಾಗಿ ಥ್ಯಾಂಕ್ಸ್​ ಅಣ್ಣಾ ಎಂದಿದ್ದಾರೆ ಇನ್ನೊಬ್ಬರು. ಹನುಮಾನ್​ ಚಾಲೀಸಾ ಪಠಿಸಿ, ಆಗ ಇದು ನಿಮ್ಮ ಹತ್ತಿರ ಬರಲಾರದು ಎಂದಿದ್ದಾರೆ ಮತ್ತೊಬ್ಬರು.

ಅನೇಕ ನೆಟ್ಟಿಗರು, ಇದು ಕನಸಲ್ಲೂ ಕಾಡುವಂತಿದೆ ಎಂದಿದ್ದಾರೆ. ನೀವೇನಂತೀರಿ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:18 pm, Tue, 17 January 23

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?