AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸಾಲದ ಸುಳಿಯಲ್ಲಿ ಸಿಲುಕಿ ಮನೆ ಮಾರಲು ಹೋದವನಿಗೆ ಹೊಡೀತು 1 ಕೋಟಿ ರೂ. ಲಾಟರಿ..!

Viral Story In Kannada: ಕಳೆದ ನಾಲ್ಕು ತಿಂಗಳಿನಿಂದ ಅದೃಷ್ಟ ಎಂಬುದು ನನ್ನ ದುಃಖವನ್ನು ಕೊನೆಗೊಳಿಸುತ್ತದೆ ಎಂಬ ನಂಬಿಕೆಯಲ್ಲಿ ನಾನು ಲಾಟರಿ ಟಿಕೇಟ್​​ಗಳನ್ನು ಖರೀದಿಸುತ್ತಿದ್ದೆ.

Viral News: ಸಾಲದ ಸುಳಿಯಲ್ಲಿ ಸಿಲುಕಿ ಮನೆ ಮಾರಲು ಹೋದವನಿಗೆ ಹೊಡೀತು 1 ಕೋಟಿ ರೂ. ಲಾಟರಿ..!
ಮೊಹಮ್ಮದ್ ಬಾವ
TV9 Web
| Updated By: ಝಾಹಿರ್ ಯೂಸುಫ್|

Updated on: Jul 27, 2022 | 12:30 PM

Share

ಅದೃಷ್ಟ ಯಾರನ್ನು ಯಾವಾಗ ಕೈ ಹಿಡಿಯುತ್ತೋ ಆ ದೇವರಿಗೆ ಗೊತ್ತು…ಅದಕ್ಕೆ ಸಾಕ್ಷಿಯಾಗಿ ಈಗ ಮೊಹಮ್ಮದ್ ಬಾವ ನಿಂತಿದ್ದಾರೆ. ಏಕೆಂದರೆ ದಿನಗಳ ಹಿಂದೆಯಷ್ಟೇ ಬಾವ ಬರೋಬ್ಬರಿ 45 ಲಕ್ಷ ರೂ. ಸಾಲಗಾರನಾಗಿದ್ದ. ಇದೀಗ ಕೋಟ್ಯಾಧಿಪತಿಯಾಗಿ ನಿಂತಿದ್ದಾರೆ. ಅದು ಕೂಡ ಅದೃಷ್ಟ ಕೈ ಹಿಡಿಯುವ ಮೂಲಕ ಎಂಬುದು ವಿಶೇಷ. ಕಾಸರಗೋಡಿನ ಮಂಜೇಶ್ವರ ಮೂಲದ ಮೊಹಮ್ಮದ್ ಬಾವ 8 ತಿಂಗಳ ಹಿಂದೆಯಷ್ಟೇ ಹೊಸ ಮನೆ ಮಾಡಿದ್ದರು. ಸಾಲ ಸೂಲ ಮಾಡಿ ಕಟ್ಟಿಸಿದ್ದ ಮನೆಯ ಸಾಲ ತೀರಿಸುವುದೇ ದೊಡ್ಡ ಸವಾಲಾಯಿತು. ಏಕೆಂದರೆ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ ಬಾವ ಅವರ ಲೆಕ್ಕಾಚಾರಗಳು ತಲೆಕೆಳಗಾಗಿದ್ದವು.

ಒಂದೆಡೆ ಹೆಂಡತಿ ಅಮೀನಾ ಮನೆಯ ಕೆಲಸ ಪೂರ್ಣಗೊಳಿಸಲು 10 ಲಕ್ಷ ರೂಪಾಯಿ ಬ್ಯಾಂಕ್ ಸಾಲ ಪಡೆದಿದ್ದರೆ, ಇನ್ನೊಂದೆಡೆ ಬಾವ ಸಂಬಂಧಿಕರಿಂದ ಇನ್ನೂ 20 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಇದರ ನಡುವೆ ಮಗಳ ಮದುವೆಗೂ ಒಂದಷ್ಟು ಸಾಲ ಪಡೆದಿದ್ದರು. ಆದರೆ ಕಳೆದ ನಾಲ್ಕು ತಿಂಗಳಿನಿಂದ ಆದಾಯ ಕಡಿಮೆಯಾಗಿದ್ದ ಕಾರಣ ಸಾಲ ತೀರಿಸಲು ಆಗಿರಲಿಲ್ಲ. ಇತ್ತ ಸಾಲದ ಒತ್ತಡದಿಂದ ಪರದಾಡಿದ್ದ ಬಾವ ಕುಟುಂಬವು ಹೊಸ ಮನೆಯನ್ನೇ ಮಾರುವ ನಿರ್ಧಾರಕ್ಕೆ ಬಂದಿದ್ದರು. ಇನ್ನೇನು ಮನೆ ಮಾರಲು ಗ್ರಾಹಕರನ್ನು ಸಹ ಹುಡುಕಲಾರಂಭಿಸಿದರು.

ಒಟ್ಟು 45 ಲಕ್ಷ ರೂ. ಸಾಲವೊಂದಿದ್ದ ಬಾವ ಮನೆಯನ್ನು ಅಷ್ಟೇ ಮೊತ್ತಕ್ಕೆ ಮಾರಾಟ ಮಾಡಲು ನಿರ್ಧರಿಸಿದ್ದರು. ಇದರ ನಡುವೆ ಬ್ರೋಕರ್ ಒಬ್ಬರು ಪಾರ್ಟಿಯೊಬ್ಬರನ್ನು ಕರೆತಂದಿದ್ದರು. ಅವರು 40 ಲಕ್ಷಕ್ಕೆ ಮನೆ ಖರೀದಿಸಲು ಒಪ್ಪಿಕೊಂಡಿದ್ದರು. ಅದರಂತೆ ಭಾನುವಾರ ಸಂಜೆ 5 ಗಂಟೆಗೆ ಟೋಕನ್ ಅಡ್ವಾನ್ಸ್ ನೀಡುವುದಾಗಿ ತಿಳಿಸಿದ್ದರು.

ಇದನ್ನೂ ಓದಿ
Image
Lady Singham: ಕೊನೆಗೂ ಲೇಡಿ ಸಿಂಗಮ್ ಅರೆಸ್ಟ್​..!
Image
Viral Video: ಒಳಗೆ ಸೇರಿದರೆ ಗುಂಡು…ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ಯುವತಿಯ ರಂಪಾಟ..!
Image
Crime Story: ಪೊಲೀಸ್ ಮಗ, ಎಲ್​ಎಲ್​ಬಿ ಪದವೀಧರ: ಯಾರು ಈ ಡಾನ್ ಲಾರೆನ್ಸ್ ಬಿಷ್ಣೋಯ್?
Image
Crime Story: ಕಿಂಗ್ ಆಫ್ ಕ್ರೈಮ್: ದಾವೂದ್ ಇಬ್ರಾಹಿಂಗೆ ನಡುಕ ಹುಟ್ಟಿಸಿದ್ದ ಸ್ಲಂ ಡಾನ್

ಇದರ ನಡುವೆ ಕೇರಳ ಸರ್ಕಾರ ನಡೆಸುವ ಫಿಫ್ಟಿ ಫಿಫ್ಟಿ ಲಾಟರಿ ಟಿಕೆಟ್​ಗಳನ್ನು ಬಾವ ಖರೀದಿಸಿದ್ದರು.  ಆದರೆ ಟೋಕನ್ ಅಡ್ವಾನ್ ಪಡೆಯಲು ತೆರಳುವ ಗಂಟೆಗಳ ಮುನ್ನ ಬಾವ ಅವರ ಅದೃಷ್ಟವೇ ಬದಲಾಯಿತು. ಅಂದರೆ ಬಾವ ಖರೀದಿಸಿದ ಲಾಟರಿ ಟಿಕೆಟ್​ನ ಫಲಿತಾಂಶ ಭಾನುವಾರ ಸಂಜೆ 3 ಗಂಟೆಗೆ ಹೊರಬಿದ್ದಿದೆ. ಈ ಫಲಿತಾಂಶವನ್ನು ನೋಡಿ ಖುದ್ದು ಮೊಹಮ್ಮದ್ ಬಾವ ಅವರೇ ದಂಗಾಗಿದ್ದರು.

ಏಕೆಂದರೆ ಬಾವ ಖರೀದಿಸಿದ ಲಾಟರಿ ಟಿಕೆಟ್​ಗೆ ಮೊದಲ ಬಹುಮಾನ ಬಂದಿತ್ತು. ಅದು ಕೂಡ ಬರೋಬ್ಬರಿ 1 ಕೋಟಿ ರೂ. ಅಂದರೆ ಸಾಲ ಸುಳಿಯಲ್ಲಿ ಸಿಲುಕಿದ್ದ ಬಾವ ಅವರ ಜೀವನ ಗಂಟೆಗಳ ಅಂತರದಲ್ಲಿ ಸಂಪೂರ್ಣ ಬದಲಾಯಿತು. ಅದರಂತೆ ಇದೀಗ ಎಲ್ಲಾ ತೆರಿಗೆಯ ನಂತರ ಸುಮಾರು 63 ಲಕ್ಷ ರೂ. ಬಹುಮಾನ ಮೊತ್ತವಾಗಿ ಪಡೆದಿದ್ದಾರೆ. ಅಂದರೆ 45 ಲಕ್ಷ ರೂ. ಸಾಲವನ್ನು ಬಾವ ಒಂದೇ ದಿನದಲ್ಲಿ ತೀರಿಸಲಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಅದೃಷ್ಟ ಎಂಬುದು ನನ್ನ ದುಃಖವನ್ನು ಕೊನೆಗೊಳಿಸುತ್ತದೆ ಎಂಬ ನಂಬಿಕೆಯಲ್ಲಿ ನಾನು ಲಾಟರಿ ಟಿಕೇಟ್​​ಗಳನ್ನು ಖರೀದಿಸುತ್ತಿದ್ದೆ. ಇದೀಗ ಕೊನೆಗೂ ನನ್ನ ಅದೃಷ್ಟ ಕೈ ಹಿಡಿದಿದೆ. ಜೊತೆಗೆ ನಾನು ಕಟ್ಟಿಸಿದ ಮನೆಯನ್ನು ಕೂಡ ಉಳಿಸಿಕೊಂಡಿದ್ದೇನೆ ಎಂದು ಬಾವ ಹೇಳಿದ್ದಾರೆ. ಹೌದು, ಅದೃಷ್ಟ ಯಾರನ್ನು ಯಾವಾಗ ಕೈ ಹಿಡಿಯುತ್ತೆ ಎಂದು ಹೇಳಲಾಗುವುದಿಲ್ಲ. ಆದರೆ ಕೆಲ ಅದೃಷ್ಟಗಳು ನಮ್ಮ ಇಡೀ ಜೀವನವನ್ನೇ ಬದಲಿಸುತ್ತೆ ಎಂಬುದಕ್ಕೆ ಈ ಘಟನೆಯೇ ನಿದರ್ಶನ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ