AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಐದು ವರ್ಷಗಳ ಬಳಿಕ ಕೆನಾಡದಿಂದ ಭಾರತಕ್ಕೆ ಮರಳುವ ನಿರ್ಧಾರ; ಅಸಲಿ ಕಾರಣ ಬಿಚ್ಚಿಟ್ಟ ಅನಿವಾಸಿ ಭಾರತೀಯ

ಓದು ಮುಗಿಯುತ್ತಿದ್ದಂತೆ ಉದ್ಯೋಗಕ್ಕಾಗಿ ಹೆಚ್ಚಿನವರು ವಿದೇಶಕ್ಕೆ ತೆರಳುತ್ತಾರೆ. ಆದರೆ ಕೆನಡಾದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಐದು ವರ್ಷಗಳ ಬಳಿಕ ಭಾರತಕ್ಕೆ ಮರಳುವ ನಿರ್ಧಾರ ಮಾಡಿದ್ದಾರೆ. ತಮ್ಮ ಈ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗ ಪಡಿಸಿದ್ದು, ಈ ಪೋಸ್ಟ್ ಸದ್ಯ ವೈರಲ್ ಆಗುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಐದು ವರ್ಷಗಳ ಬಳಿಕ ಕೆನಾಡದಿಂದ ಭಾರತಕ್ಕೆ ಮರಳುವ ನಿರ್ಧಾರ; ಅಸಲಿ ಕಾರಣ ಬಿಚ್ಚಿಟ್ಟ ಅನಿವಾಸಿ ಭಾರತೀಯ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Dec 04, 2025 | 3:25 PM

Share

ಹೆಚ್ಚಿನವರು ವಿದೇಶಿ ಜೀವನವನ್ನು (foreign life) ಇಷ್ಟ ಪಡ್ತಾರೆ. ಹೀಗಾಗಿ ಓದು ಮುಗಿಯುತ್ತಿದ್ದಂತೆ ವಿದೇಶಕ್ಕೆ ಹಾರುತ್ತಾರೆ. ವಿದೇಶದಲ್ಲಿ ಉದ್ಯೋಗ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಅಂದುಕೊಳ್ತಾರೆ. ಆದರೆ ಅಲ್ಲಿಂದವರಿಗೆ ಮಾತ್ರ ಅಲ್ಲಿನ ಕಷ್ಟ ಗೊತ್ತಿರುತ್ತದೆ. ಕೆನಾಡದಲ್ಲಿ (Canada) ನೆಲೆಸಿರುವ ಅನಿವಾಸಿ ಭಾರತಿಯರೊಬ್ಬರು ಇಲ್ಲಿ ಬದುಕೋಕೆ ಆಗಲ್ಲ, ಹೀಗಾಗಿ ತಮ್ಮ ಐದು ವರ್ಷಗಳ ವಿದೇಶಿ ಜೀವನಕ್ಕೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ. ಹೌದು, ಸಾಮಾಜಿಕ ಪ್ರತ್ಯೇಕತೆ, ರಚನಾತ್ಮಕ ವಿದೇಶಿ ಜೀವನಶೈಲಿಯಲ್ಲಿ ಸ್ವಾತಂತ್ರ್ಯದ ಕೊರತೆಯನ್ನು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ ತಾಯ್ನಾಡು ನಮಗೆ ಚಂದ ಎಂದಿದ್ದಾರೆ.

r/returnToIndia ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ, ಕೆನಡಾದಲ್ಲಿ 5 ವರ್ಷ ವಾಸಿಸಿದ ನಂತರ ನನಗೆ ಇಲ್ಲಿ ಎಲ್ಲವನ್ನು ಸಹಿಸಲು ಸಾಧ್ಯವಾಗಲಿಲ್ಲ. ಸಾಮಾಜಿಕ ಪ್ರತ್ಯೇಕತೆಯಿದೆ. ನನಗೆ ಇಲ್ಲಿ ಸ್ನೇಹಿತರಿದ್ದು, ಆದರೆ ವಿದೇಶದಲ್ಲಿ ಜೀವನವು ರೋಬೋಟಿಕ್ ಅನಿಸಿತು. ಡ್ರೈವಿಂಗ್ ಕೂಡ ತುಂಬಾ ರಚನಾತ್ಮಕ ಮತ್ತು ರೋಬೋಟಿಕ್ ಆಗಿದೆ. ಹೀಗಾಗಿ ನಾನು ಮನುಷ್ಯ ಎಂದು ಭಾವಿಸುವುದನ್ನು ನಿಲ್ಲಿಸಿದೆ. ಇಲ್ಲಿ ಎಲ್ಲವನ್ನೂ ಯೋಜಿಸಬೇಕು. ಮತ್ತೊಂದೆಡೆ, ಭಾರತದಲ್ಲಿ ಸಂಘಟಿತ ಅವ್ಯವಸ್ಥೆ ಇದೆ, ಅದನ್ನು ನಾನು ತುಂಬಾ ಮಿಸ್ ಮಾಡಿಕೊಳ್ತೇನೆ. ಇಡೀ ದಿನವನ್ನು ಖರ್ಚು ಮಾಡದ ಯಾದೃಚ್ಛಿಕ ಮುಖಾಮುಖಿಗಳು ಮತ್ತು ಸ್ವಯಂಪ್ರೇರಿತ ಯೋಜನೆಗಳಿಂದ ನಾನು ತಪ್ಪಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

I did it. I quit my job today and booked my flight to be back home next Sunday byu/Automatic-Funny-8842 inreturnToIndia

ಡೇಟಿಂಗ್ ಜೀವನ ಇಲ್ಲಿಯೂ ಸಹ ನೀರಸವಾಗಿದೆ. ಎಲ್ಲರೂ ಮನೆಯೊಳಗೆ ಸಮಯ ಕಳೆಯುತ್ತಿರುವಾಗ ಈ ಚಳಿಗಾಲದಲ್ಲಿ ಯಾರನ್ನಾದರೂ ಕಂಡುಕೊಳ್ಳುವುದು ಅದೃಷ್ಟ. ನಾನು ಭವಿಷ್ಯದ ಬಗ್ಗೆ ತುಂಬಾ ಉತ್ಸುಕನಾಗಿದ್ದೇನೆ. ಕೊಳಕು ಮತ್ತು ನಾಗರಿಕ ಪ್ರಜ್ಞೆ ಇಲ್ಲದ ಭಾರತವನ್ನು ನಾನು ದ್ವೇಷಿಸುತ್ತೇನೆ, ಆದರೆ ಅದರ ಎಲ್ಲಾ ನ್ಯೂನತೆಗಳನ್ನು ನಾನು ಸಹಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಸೀರೆಯುಟ್ಟ ಭಾರತೀಯ ನಾರಿಯೊಂದಿಗೆ ಸೆಲ್ಫಿ ಕ್ಲಿಕಿಸಿಕೊಂಡ ವಿದೇಶಿಗರು

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಒಬ್ಬ ಬಳಕೆದಾರ, ನಿಮಗೆ ಎಲ್ಲಿ ಸಂತೋಷವಾಗುತ್ತದೆಯೋ ಅಲ್ಲಿಯೇ ಇರಿ ಎಂದಿದ್ದಾರೆ. ಇನ್ನೊಬ್ಬರು, ನೀವು ಧೈರ್ಯಶಾಲಿಯಾಗಿ ಏನು ಮಾಡಲು ಮುಂದಾಗಿದ್ದೀರಿ ಅದನ್ನೇ ಮುಂದುವರಿಸಿ. ನಿಮ್ಮ ನಿರ್ಧಾರ ನಿಮಗೆ ಖುಷಿ ಕೊಟ್ಟರೆ ಸಾಕು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ