AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಮೆಟ್ರೋದಲ್ಲಿ ಮೊಟ್ಟೆ ಸೇವಿಸಿ ಎಣ್ಣೆ ಪಾರ್ಟಿ ಮಾಡಿದ ಯುವಕ

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಕರು ಮಾಡುವ ಎಡವಟ್ಟುಗಳು ಒಂದೆರಡಲ್ಲ. ಹೀಗೆ ನಾನಾ ವಿಚಾರಗಳಿಂದಲೇ ಮೆಟ್ರೋ ಸುದ್ದಿಯಾಗುತ್ತಿರುತ್ತದೆ. ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುವಾಗ ಯುವಕನೊಬ್ಬನು ಮೊಟ್ಟೆ ತಿಂದು 'ಮದ್ಯ' ಸೇವಿಸುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ಮೆಟ್ರೋದೊಳಗೆ ಆಹಾರ ಪದಾರ್ಥಗಳ ಸೇವನೆ ಹಾಗೂ ಮದ್ಯ ನಿಷೇಧವಿದ್ದರೂ ಈ ಕೃತ್ಯ ಎಸಗಿರುವುದಕ್ಕೆ ಈ ಯುವಕನ ವಿರುದ್ಧ ದೆಹಲಿ ಪೊಲೀಸರು ಕ್ರಮ ಕೈಗೊಂಡು ಬಂಧಿಸಿದ್ದಾರೆ.

Viral : ಮೆಟ್ರೋದಲ್ಲಿ ಮೊಟ್ಟೆ ಸೇವಿಸಿ ಎಣ್ಣೆ ಪಾರ್ಟಿ ಮಾಡಿದ ಯುವಕ
ವೈರಲ್​​ ವಿಡಿಯೋ
ಸಾಯಿನಂದಾ
| Edited By: |

Updated on:Apr 10, 2025 | 12:38 PM

Share

ದೆಹಲಿ, ಏಪ್ರಿಲ್ 10: ದೆಹಲಿ (dehli) ಮೆಟ್ರೋ (metro) ದಲ್ಲಿ ಪ್ರಯಾಣಿಕರು ಮಾಡುವಂತಹ ಅವಾಂತರಗಳು, ಕಿತಾಪತಿಗಳಿಗೆ ಸಂಬಂಧಪಟ್ಟ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಹೌದು ದೆಹಲಿ ಮೆಟ್ರೋ ರೈಲು ನಿಗಮವು ಕೋಚ್‌ (coach) ಗಳ ಒಳಗೆ ತಿನ್ನುವುದು ಮತ್ತು ಕುಡಿಯಬಾರದು ಎನ್ನುವ ನಿಯಮವೇ ಇದೆ. ಆದರೆ ಒಂದೆರಡು ದಿನಗಳ ಹಿಂದೆಯಷ್ಟೇ ಯುವಕನೊಬ್ಬನು ಮೆಟ್ರೋದಲ್ಲಿ ಮೊಟ್ಟೆ (egg) ತಿಂದು ಹಾಗೂ ಮದ್ಯ (alcohol) ಸೇವಿಸುವ ವಿಡಿಯೋವೊಂದು ವೈರಲ್ ಆದ ಬೆನ್ನಲೇ ಈ ಘಟನೆಗೆ ಸಂಬಂಧ ಪಟ್ಟಂತೆ ದೆಹಲಿ ಪೊಲೀಸರು ಆರೋಪಿ ಆಕಾಶ್ ಕುಮಾರ್ (akash kumar) ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಕಾರ್ಡೂಮಾ ಮೆಟ್ರೋ ನಿಲ್ದಾಣದ ಸೀನಿಯರ್ ಸ್ಟೇಷನ್ ಮ್ಯಾನೇಜರ್ ಅಮರ್ ದೇವ್ ನೀಡಿದ ದೂರಿನ ಬೆನ್ನಲೇ ಆರೋಪಿ ಶಹದಾರಾ ನಿವಾಸಿ ಆಕಾಶ್ ಕುಮಾರ್‌ನನ್ನು ಬುರಾರಿಯಲ್ಲಿ ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. Dehli police ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಆರೋಪಿಯೂ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದು ಆದರೆ ತಾನು ಮದ್ಯ ಸೇವಿಸುತ್ತಿರಲಿಲ್ಲ. ಅದು ಪಾನೀಯ ಎಂದು ಸ್ಪಷ್ಟಪಡಿಸಿದ್ದಾನೆ. ಹೌದು, ಬಂಧಿತ ಆರೋಪಿ ಆಕಾಶ್ ಕುಮಾರ್ ನನ್ನು ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆಯಲ್ಲಿ ಮಾರ್ಚ್ 23 ರಂದು ರಾತ್ರಿ 10 ಗಂಟೆ ಸುಮಾರಿಗೆ ವೆಲ್ಕಮ್ ನಿಂದ ಕರ್ಕಾರ್ಡೂಮಾ ಕೋರ್ಟ್ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುವಾಗ ವಿಡಿಯೋ ರೆಕಾರ್ಡ್ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ. ಅದಲ್ಲದೇ, ಬಾಟಲಿಯಲ್ಲಿ ಕೇವಲ ತಂಪು ಪಾನೀಯವಿತ್ತು. ಸಾಮಾಜಿಕ ಮಾಧ್ಯಮದಲ್ಲಿ ಎಲ್ಲರ ಗಮನ ಸೆಳೆಯಲು ತಾನು ಈ ಕೃತ್ಯವನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಯುವಕನ ವಿರುದ್ಧದೆಹಲಿ ಮೆಟ್ರೋ ರೈಲ್ವೆ ಕಾಯ್ದೆ ಸೆಕ್ಷನ್ 59 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಇದನ್ನೂ ಓದಿ: ಪ್ರತಿಭಟನೆಯ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯ ಸೊಂಟಕ್ಕೆ ಕೈ ಹಾಕಿದ ವ್ಯಕ್ತಿ, ವಿಡಿಯೋ ವೈರಲ್

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ಆದ ವಿಡಿಯೋದಲ್ಲಿ, ಮೆಟ್ರೋದಲ್ಲಿ ಯುವಕನು ಗ್ಲಾಸ್ ನಲ್ಲಿದ್ದ ಮದ್ಯ ಕುಡಿಯುತ್ತ, ಬೇಯಿಸಿದ ಮೊಟ್ಟೆಯನ್ನು ಒಡೆಯಲು ಕೋಚ್‌ನ ಹ್ಯಾಂಡ್ರೈಲ್‌ ಬಳಸಿರುವುದನ್ನು ಗಮನಿಸಬಹುದು. ಆ ಬಳಿಕ ಬ್ಯಾಗ್‌ನಿಂದ ಒಂದು ಕವರ್‌ ತೆಗೆದುಕೊಂಡು ಅದಕ್ಕೆ ಮೊಟ್ಟೆಯ ಸಿಪ್ಪೆಯನ್ನು ಹಾಕಿದ್ದಾನೆ. ಈತನ ಕೈಯಲ್ಲಿದ್ದ ಮೊಟ್ಟೆಯ ತುಂಡುಗಳು ಕೋಚ್‌ನ ನೆಲದ ಮೇಲೆ ಬೀಳುತ್ತಿದ್ದು, ಸ್ವಚ್ಛತೆಗೂ ಗಮನ ಹರಿಸಲಿಲ್ಲ. ಯಾವುದಕ್ಕೂ ತಲೆ ಕೆಡಿಸದೇ ಮೊಟ್ಟೆ ತಿನ್ನುತ್ತಾ ಮದ್ಯ ಸೇವಿಸುತ್ತಿರುವುದನ್ನು ಕಾಣಬಹುದು.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Thu, 10 April 25

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ