AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಡೇಂಜರಸ್‌ ಸ್ಪೀಡ್‌ ಬ್ರೇಕರ್‌… ಹಂಪ್‌ ಕಾಣದೇ ಸ್ಕೂಟಿ ಸಮೇತ ಪಲ್ಟಿಯಾದ ಸವಾರ; ಭಯಾನಕ ವಿಡಿಯೋ ವೈರಲ್‌

ಕೆಲ ಸಮಯದ ಹಿಂದೆಯಷ್ಟೇ ಗುರುಗ್ರಾಮದ ಗಾಲ್ಫ್‌ಕೋರ್ಸ್‌ ರಸ್ತೆಯಲ್ಲಿ ಸ್ಫೀಡ್‌ ಬ್ರೇಕರ್‌ ಕಾಣಿಸದೆ ವಾಹನಗಳು ಗಾಳಿಯಲ್ಲಿ ಹಾರಿದಂತಹ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದೀಗ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಸ್ಪೀಡ್‌ ಆಗಿ ಬಂದ ಸ್ಕೂಟರ್‌ ಚಾಲಕ ರಸ್ತೆಯಲ್ಲಿದ್ದ ಹಂಪ್‌ ಕಾಣಿಸದ ಪರಿಣಾಮ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾನೆ. ಈ ಭಯಾನಕ ದೃಶ್ಯ ಇದೀಗ ಭಾರೀ ವೈರಲ್‌ ಆಗಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Dec 13, 2024 | 3:17 PM

Share

ವಾಹನಗಳ ವೇಗವನ್ನು ತಡೆಯಲು ರಸ್ತೆಗಳಲ್ಲಿ ಅಲ್ಲಲ್ಲಿ ಸ್ಫೀಡ್‌ ಬ್ರೇಕರ್‌ಗಳನ್ನು ನಿರ್ಮಿಸಿರುತ್ತಾರೆ. ವಾಹನಗಳ ವೇಗವನ್ನು ನಿಧಾನಗೊಳಿಸಲು ನಿರ್ಮಿಸಲಾದ ಈ ಹಂಪ್‌ಗಳೇ ಅದೆಷ್ಟೋ ಬಾರಿ ವಾಹನ ಸವಾರರ ಪ್ರಾಣಕ್ಕೆ ಕಂಟಕವಾಗಿ ಪರಿಣಮಿಸಿದ್ದುಂಟು. ಹೌದು ಹಂಪ್‌ ಕಾಣಿಸದೆ ಅದನ್ನು ದಾಟುವ ಸಂದರ್ಭದಲ್ಲಿ, ಅವೈಜ್ಞಾನಿಕ ಸ್ಪೀಡ್‌ ಬ್ರೇಕರ್‌ಗಳಿಂದಾಗಿ ಅಪಘಾತಗಳು ಸಂಭವಿಸಿವೆ. ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ರಸ್ತೆಯಲ್ಲಿರುವ ಸ್ಪೀಡ್‌ ಬ್ರೇಕರ್‌ ಕಾಣಿಸದೆ ಸ್ಕೂಟರ್‌ ಸವಾರನೊಬ್ಬ ಸ್ಕೂಟಿ ಸಮೇತ ಹಾರಿ ಬಿದ್ದಿದ್ದಾನೆ. ಈ ಭಯಾನಕ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗುತ್ತಿದೆ.

ಈ ಘಟನೆ ಉತ್ತರಖಂಡದ ಡೆಹ್ರಾಡೂನ್‌ನಲ್ಲಿ ನಡೆದಿದ್ದು, ಇಲ್ಲಿನ ಕ್ಲಾಕ್‌ ಟವರ್‌ ಬಳಿ ಇರುವ ರಸ್ತೆಯಲ್ಲಿ ಸ್ಪೀಡ್‌ ಬ್ರೇಕರ್‌ ಕಾಣಿಸದೆ ಸ್ಕೂಟರ್‌ ಸವಾರನೊಬ್ಬ ಸ್ಕೂಟಿ ಸಮೇತ ಪಲ್ಟಿಯಾಗಿದ್ದಾನೆ. ಅಷ್ಟೇ ಅಲ್ಲದೆ ಬೈಕ್‌ ಕಾರ್‌ಗಳು ಕೂಡಾ ಇದೇ ಹಂಪ್‌ ಬಳಿ ಗಾಳಿಯಲ್ಲಿ ಹಾರಿ ಹೋಗಿವೆ. ಇಲ್ಲಿ ಯಾವುದೇ ಗುರುತುಗಳು ಮತ್ತು ಸೂಚನಾ ಫಲಕಗಳು ಇಲ್ಲದ ಕಾರಣ ಅಲ್ಲಿ ಹಂಪ್‌ ಇದೆ ಎಂಬುದು ವಾಹನ ಸವಾರರ ಗಮನಕ್ಕೆ ಬಾರದೆ ಈ ಅಪಘಾತ ಸಂಭವಿಸಿದೆ. ಹೌದು ಹಂಪ್‌ ಇಲ್ಲವೆಂದು ವೇಗವಾಗಿ ಬಂದಾಗ ಸ್ಪೀಡ್‌ ಬ್ರೇಕರ್‌ಗೆ ಸಿಕ್ಕಿ ಸ್ಕೂಟರ್‌ ಸವಾರ ಬೈಕ್‌ ಸಮೇತ ಹಾರಿ ದೊಪ್ಪನೆ ಬಿದ್ದಿದ್ದಾನೆ.

ಈ ಸ್ಪೀಡ್‌ ಬ್ರೇಕರ್‌ನಿಂದ ಇಲ್ಲಿ ಇಂತಹ ಏಳು ಅಪಘಾತಗಳು ಸಂಭವಿಸಿದ್ದು, ಪರಿಣಾಮ ಮೂರು ವರ್ಷದ ಮಗು ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಹಾವಿಗೆ ಮುತ್ತಿಡಲು ಹೋಗಿ ತುಟಿಗೆ ಕಚ್ಚಿಸಿಕೊಂಡ ವ್ಯಕ್ತಿ; ವಿಡಿಯೋ ವೈರಲ್‌

ಈ ಕುರಿತ ವಿಡಿಯೋವೊಂದನ್ನು askbhupi ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ವೇಗವಾಗಿ ಬಂದ ಸ್ಕೂಟರ್‌ ಸವಾರ ಹಂಪ್‌ ಕಾಣಿಸದೆ ಸ್ಕೂಟಿ ಸಮೇತ ಕೆಳಗೆ ಬೀಳುವಂತಹ ದೃಶ್ಯವನ್ನು ಕಾಣಬಹುದು. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಸಂಬಂಧಪಟ್ಟ ಇಲಾಖೆಯವರು ಈ ಬಗ್ಗೆ ಗಮನ ಹರಿಸಿ ಎಂದು ಹಲವರು ಆಗ್ರಹಿಸಿದ್ದಾರೆ. ಇನ್ನೂ ಕೆಲವರು ನಿಮ್ಮ ಸ್ಪೀಡ್‌ ಬ್ರೇಕರ್‌ಗಳಿಂದಾಗಿ ಜನ ಸಾಮಾನ್ಯರು ಕಷ್ಟ ಅನುಭವಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?