AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಎದ್ದೇಳೋ ಕಂದಮ್ಮ, ಸತ್ತ ಮರಿ ಆನೆಯನ್ನು ಎಬ್ಬಿಸುತ್ತಿರುವ ತಾಯಿ ಆನೆ, ವಿಡಿಯೋ ವೈರಲ್

ಮನಕಲಕುಲ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತನ್ನ ಕಂದಮ್ಮ ಸತ್ತಿರುವುದನ್ನು ಒಪ್ಪಿಕೊಳ್ಳಲು ಸಾಧ್ಯವಾಗದೇ ತಾಯಾನೆಯೂ ಸತ್ತ ಮರಿ ಆನೆಯಾನೆಯನ್ನು ಎಬ್ಬಿಸುವ ಸಲುವಾಗಿ ಅದರ ದೇಹವನ್ನು ಎಳೆದಾಡುತ್ತಿರುವ ದೃಶ್ಯವು ನೋಡುಗರನ್ನು ಭಾವುಕರನ್ನಾಗಿಸಿದೆ. ಈ ದೃಶ್ಯ ನೋಡಿದ ಸೋಶಿಯಲ್ ಮೀಡಿಯಾ ಬಳಕೆದಾರರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಸಾಯಿನಂದಾ
| Edited By: |

Updated on: Nov 23, 2024 | 5:27 PM

Share

ತಾಯಿಯ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತನ್ನ ಕರುಳ ಕುಡಿಯ ರಕ್ಷಣೆಗಾಗಿ ತಾಯಿಯಾದವಳು ಏನು ಬೇಕಾದರೂ ಮಾಡಲು ಸಿದ್ಧವಿರುತ್ತಾಳೆ. ಈ ವಿಚಾರದಲ್ಲಿ ಪ್ರಾಣಿಗಳು ಕೂಡ ಹೊರತಾಗಿಲ್ಲ. ಮೂಕ ಪ್ರಾಣಿಗಳು ಕೂಡ ತನ್ನ ಕಂದಮ್ಮನ ಮೇಲೆ ವಿಶೇಷವಾದ ಪ್ರೀತಿಯನ್ನು ಇಟ್ಟಿರುತ್ತವೆ. ಆದರೆ ಅವುಗಳು ಭಾವನೆಗಳನ್ನು ತೋರ್ಪಡಿಸುವ ವಿಧಾನ ಸ್ವಲ್ಪ ಭಿನ್ನವಾಗಿರಬಹುದು. ತಾಯಿ ಆನೆ ತನ್ನ ಮರಿ ಸಾವನ್ನಪ್ಪಿರುವುದನ್ನು ಅರಗಿಸಿಕೊಳ್ಳಲು ಆಗದೇ, ಮರಿಯಾನೆ ದೇಹವನ್ನು ತಾನು ಹೋದಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಈ ವಿಡಿಯೋವನ್ನು, ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ಅಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದೊಂದಿಗೆ, ‘ತಾಯಿ ಆನೆ ತನ್ನ ಮರಿ ಸಾವನ್ನಪ್ಪಿರುವುದನ್ನು ಅರಗಿಸಿಕೊಳ್ಳಲು ಆಗದೆ ಕಷ್ಟ ಪಡುತ್ತಿದೆ. ಇದು ಕೆಲ ಸಮಯದವರೆಗೆ ಅಥವಾ ಕೆಲ ದಿನಗಳ ವರೆಗೆ ತಾಯಿ ಆನೆ ಮರಿಯನ್ನು ಈ ರೀತಿ ಹೋದಲೆಲ್ಲಾ ಕರೆದೊಯ್ಯುತ್ತದೆ. ಬಳಿಕ ಅದಾಗೆಯೇ ಬಿಟ್ಟು ಹೋಗುತ್ತದೆ, ಪ್ರಾಣಿಗಳು ನಮ್ಮಂತೆಯೇ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪತ್ನಿಯನ್ನು ಹನಿಮೂನ್​​ಗೆಂದು ಕರೆದ್ಯೊಯ್ದು, ಶೇಖ್​​​​ಗೆ ಮಾರಿದ ಪತಿ, ಆಕೆ ಭಾರತಕ್ಕೆ ವಾಪಸ್ಸು ಬಂದಿದ್ದೇ ರೋಚಕ

ಈ ವಿಡಿಯೋದಲ್ಲಿ ತಾಯಾನೆಯೊಂದು ಸತ್ತ ಮರಿ ಆನೆಯಾನೆ ಎಬ್ಬಿಸುವ ಸಲುವಾಗಿ ಮರಿಯ ದೇಹವನ್ನು ಎಳೆದಾಡುವುದನ್ನು ನೋಡಬಹುದು. ಈ ವಿಡಿಯೋವು ಒಂದೂವರೇ ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದ್ದು, ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಸೋಶಿಯಲ್ ಮೀಡಿಯಾ ಬಳಕೆದಾರರೊಬ್ಬರು, ‘ಈ ದೃಶ್ಯ ನೋಡಿದರೆ ಕಣ್ಣು ಒದ್ದೆಯಾಗುತ್ತದೆ’ ಎಂದಿದ್ದಾರೆ. ಮತ್ತೊಬ್ಬರು, ‘ಪ್ರೀತಿ ಎಂದೆಂದಿಗೂ ಶಾಶ್ವತ’ ಎಂದು ಬರೆದಿದ್ದಾರೆ. ಮತ್ತೊಬ್ಬರು, ‘ಇದು ಮನಸ್ಸಿಗೆ ಹತ್ತಿರವಾಗುವ ದೃಶ್ಯವಾಗಿದೆ. ಇದೇ ನೋಡಿ ನಿಜವಾದ ಸಂಬಂಧ. ಆ ತಾಯಾನೆಗೆ ತನ್ನ ಕಂದನ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ’ ಎಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ