AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಎದ್ದೇಳೋ ಕಂದಮ್ಮ, ಸತ್ತ ಮರಿ ಆನೆಯನ್ನು ಎಬ್ಬಿಸುತ್ತಿರುವ ತಾಯಿ ಆನೆ, ವಿಡಿಯೋ ವೈರಲ್

ಮನಕಲಕುಲ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತನ್ನ ಕಂದಮ್ಮ ಸತ್ತಿರುವುದನ್ನು ಒಪ್ಪಿಕೊಳ್ಳಲು ಸಾಧ್ಯವಾಗದೇ ತಾಯಾನೆಯೂ ಸತ್ತ ಮರಿ ಆನೆಯಾನೆಯನ್ನು ಎಬ್ಬಿಸುವ ಸಲುವಾಗಿ ಅದರ ದೇಹವನ್ನು ಎಳೆದಾಡುತ್ತಿರುವ ದೃಶ್ಯವು ನೋಡುಗರನ್ನು ಭಾವುಕರನ್ನಾಗಿಸಿದೆ. ಈ ದೃಶ್ಯ ನೋಡಿದ ಸೋಶಿಯಲ್ ಮೀಡಿಯಾ ಬಳಕೆದಾರರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಸಾಯಿನಂದಾ
| Edited By: |

Updated on: Nov 23, 2024 | 5:27 PM

Share

ತಾಯಿಯ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತನ್ನ ಕರುಳ ಕುಡಿಯ ರಕ್ಷಣೆಗಾಗಿ ತಾಯಿಯಾದವಳು ಏನು ಬೇಕಾದರೂ ಮಾಡಲು ಸಿದ್ಧವಿರುತ್ತಾಳೆ. ಈ ವಿಚಾರದಲ್ಲಿ ಪ್ರಾಣಿಗಳು ಕೂಡ ಹೊರತಾಗಿಲ್ಲ. ಮೂಕ ಪ್ರಾಣಿಗಳು ಕೂಡ ತನ್ನ ಕಂದಮ್ಮನ ಮೇಲೆ ವಿಶೇಷವಾದ ಪ್ರೀತಿಯನ್ನು ಇಟ್ಟಿರುತ್ತವೆ. ಆದರೆ ಅವುಗಳು ಭಾವನೆಗಳನ್ನು ತೋರ್ಪಡಿಸುವ ವಿಧಾನ ಸ್ವಲ್ಪ ಭಿನ್ನವಾಗಿರಬಹುದು. ತಾಯಿ ಆನೆ ತನ್ನ ಮರಿ ಸಾವನ್ನಪ್ಪಿರುವುದನ್ನು ಅರಗಿಸಿಕೊಳ್ಳಲು ಆಗದೇ, ಮರಿಯಾನೆ ದೇಹವನ್ನು ತಾನು ಹೋದಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಈ ವಿಡಿಯೋವನ್ನು, ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ಅಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದೊಂದಿಗೆ, ‘ತಾಯಿ ಆನೆ ತನ್ನ ಮರಿ ಸಾವನ್ನಪ್ಪಿರುವುದನ್ನು ಅರಗಿಸಿಕೊಳ್ಳಲು ಆಗದೆ ಕಷ್ಟ ಪಡುತ್ತಿದೆ. ಇದು ಕೆಲ ಸಮಯದವರೆಗೆ ಅಥವಾ ಕೆಲ ದಿನಗಳ ವರೆಗೆ ತಾಯಿ ಆನೆ ಮರಿಯನ್ನು ಈ ರೀತಿ ಹೋದಲೆಲ್ಲಾ ಕರೆದೊಯ್ಯುತ್ತದೆ. ಬಳಿಕ ಅದಾಗೆಯೇ ಬಿಟ್ಟು ಹೋಗುತ್ತದೆ, ಪ್ರಾಣಿಗಳು ನಮ್ಮಂತೆಯೇ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪತ್ನಿಯನ್ನು ಹನಿಮೂನ್​​ಗೆಂದು ಕರೆದ್ಯೊಯ್ದು, ಶೇಖ್​​​​ಗೆ ಮಾರಿದ ಪತಿ, ಆಕೆ ಭಾರತಕ್ಕೆ ವಾಪಸ್ಸು ಬಂದಿದ್ದೇ ರೋಚಕ

ಈ ವಿಡಿಯೋದಲ್ಲಿ ತಾಯಾನೆಯೊಂದು ಸತ್ತ ಮರಿ ಆನೆಯಾನೆ ಎಬ್ಬಿಸುವ ಸಲುವಾಗಿ ಮರಿಯ ದೇಹವನ್ನು ಎಳೆದಾಡುವುದನ್ನು ನೋಡಬಹುದು. ಈ ವಿಡಿಯೋವು ಒಂದೂವರೇ ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದ್ದು, ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಸೋಶಿಯಲ್ ಮೀಡಿಯಾ ಬಳಕೆದಾರರೊಬ್ಬರು, ‘ಈ ದೃಶ್ಯ ನೋಡಿದರೆ ಕಣ್ಣು ಒದ್ದೆಯಾಗುತ್ತದೆ’ ಎಂದಿದ್ದಾರೆ. ಮತ್ತೊಬ್ಬರು, ‘ಪ್ರೀತಿ ಎಂದೆಂದಿಗೂ ಶಾಶ್ವತ’ ಎಂದು ಬರೆದಿದ್ದಾರೆ. ಮತ್ತೊಬ್ಬರು, ‘ಇದು ಮನಸ್ಸಿಗೆ ಹತ್ತಿರವಾಗುವ ದೃಶ್ಯವಾಗಿದೆ. ಇದೇ ನೋಡಿ ನಿಜವಾದ ಸಂಬಂಧ. ಆ ತಾಯಾನೆಗೆ ತನ್ನ ಕಂದನ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ’ ಎಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?