AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್

Cab Driver : ನಾನಿನ್ನೂ ಸಂಸ್ಕೃತ ಕಲಿಯದಿರುವುದು ಅವಮಾನ ಎನ್ನಿಸುತ್ತಿದೆ, ಸದ್ಯದಲ್ಲೇ ಕಲಿಯಲು ಆರಂಭಿಸುತ್ತೇನೆ ಎಂದಿದ್ದಾರೆ ಈ ವಿಡಿಯೋ ನೋಡಿದ ಒಬ್ಬರು. ಪೂಜೆ ನಡೆಯುತ್ತಿದೆ ಎಂಬು ಭಾಸವಾಗುತ್ತದೆ ಎಂದಿದ್ದಾರೆ ಇನ್ನೊಬ್ಬರು.

ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್
Delhi cab driver talks to passenger in Sanskrit.
TV9 Web
| Edited By: |

Updated on: Nov 17, 2022 | 10:09 AM

Share

Viral Video : ಈ ಹಿಂದೆ ಬೆಂಗಳೂರಿನ ಗಲ್ಲಿ ಕ್ರಿಕೆಟ್​​ ಕಾಮೆಂಟರಿಯನ್ನು ಸಂಸ್ಕೃತದಲ್ಲಿ ಮಾಡಿದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಇದೀಗ ದೆಹಲಿಯ ಕ್ಯಾಬ್​ ಡ್ರೈವರ್ ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ವಿಡಿಯೋ ಇದೀಗ ವೈರಲ್ ಆಗಿದೆ. ಕ್ಯಾಬನ್ನು ಏರಿದ ಪ್ರಯಾಣಿಕರು ಈತನ ವಿವರವನ್ನು ಸಂಸ್ಕೃತದಲ್ಲಿಯೇ ಕೇಳುತ್ತ ಹೋಗುತ್ತಾರೆ. ಆತ ಸಂಸ್ಕೃತದಲ್ಲಿಯೇ ಉತ್ತರಿಸುತ್ತ ಹೋಗುತ್ತಾನೆ. ನವೆಂಬರ್ 10ರಂದು ಈ ವಿಡಿಯೋ ಟ್ವೀಟ್ ಮಾಡಲಾಗಿದೆ. 2.6 ಲಕ್ಷಕ್ಕಿಂತಲೂ ಹೆಚ್ಚು ಜನರು ಇದನ್ನು ನೋಡಿದ್ದಾರೆ. 11,000ಕ್ಕಿಂತಲೂ ಹೆಚ್ಚು ಜನ ಪ್ರತಿಕ್ರಿಯಿಸಿದ್ದಾರೆ.

ದೆಹಲಿಯ ಇಂಡಿಯಾ ಗೇಟ್​ ಬಳಿ ಹೋಗುತ್ತಿರುವಾಗ ಈ ವಿಡಿಯೋ ರೆಕಾರ್ಡ್​ ಮಾಡಲಾಗಿದೆ. ಉತ್ತರ ಪ್ರದೇಶದ ಮೂಲದ ಅಶೋಕ ತನ್ನ ಕುಟುಂಬದ ಸದಸ್ಯರ ಬಗ್ಗೆ ಪ್ರಯಾಣಿಕನಿಗೆ ತಿಳಿಸುತ್ತಾನೆ. ಈ ವಿಡಿಯೋ ನೋಡಿದ ಅನೇಕರಿಗೆ ಸಂಸ್ಕೃತ ಕಲಿಯುವ ಉಮೇದು ಬಂದಿದೆ.

ನಾನಿನ್ನೂ ಸಂಸ್ಕೃತ ಕಲಿಯದಿರುವುದು ನನ್ನ ಬಗ್ಗೆ ನನಗೆ ಅವಮಾನ ಎನ್ನಿಸುತ್ತಿದೆ. ಸದ್ಯದಲ್ಲೇ ನಾನು ಕಲಿಯಲು ಆರಂಭಿಸುತ್ತೇನೆ ಎಂದಿದ್ದಾರೆ ಒಬ್ಬರು. ಬಹಳ ಸುಂದರವಾದ ಸಂಭಾಷಣೆ ಎಂದಿದ್ದಾರೆ ಇನ್ನೊಬ್ಬರು. ಈ ಸಾಮಾನ್ಯವಾದ ಸಂಭಾಷಣೆಯೂ ಒಂದು ಪೂಜಾ ಸಂದರ್ಭದಂತೆ ಅನ್ನಿಸುತ್ತಿದೆ ಎಂದಿದ್ದಾರೆ ಮಗದೊಬ್ಬರು. ಇದು ಕಿವಿಗೆ ತಂಪನ್ನೀಯುತ್ತಿದೆ ಎಂದಿದ್ದಾರೆ ಇನ್ನೊಬ್ಬರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ