AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್

Cab Driver : ನಾನಿನ್ನೂ ಸಂಸ್ಕೃತ ಕಲಿಯದಿರುವುದು ಅವಮಾನ ಎನ್ನಿಸುತ್ತಿದೆ, ಸದ್ಯದಲ್ಲೇ ಕಲಿಯಲು ಆರಂಭಿಸುತ್ತೇನೆ ಎಂದಿದ್ದಾರೆ ಈ ವಿಡಿಯೋ ನೋಡಿದ ಒಬ್ಬರು. ಪೂಜೆ ನಡೆಯುತ್ತಿದೆ ಎಂಬು ಭಾಸವಾಗುತ್ತದೆ ಎಂದಿದ್ದಾರೆ ಇನ್ನೊಬ್ಬರು.

ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್
Delhi cab driver talks to passenger in Sanskrit.
TV9 Web
| Edited By: |

Updated on: Nov 17, 2022 | 10:09 AM

Share

Viral Video : ಈ ಹಿಂದೆ ಬೆಂಗಳೂರಿನ ಗಲ್ಲಿ ಕ್ರಿಕೆಟ್​​ ಕಾಮೆಂಟರಿಯನ್ನು ಸಂಸ್ಕೃತದಲ್ಲಿ ಮಾಡಿದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಇದೀಗ ದೆಹಲಿಯ ಕ್ಯಾಬ್​ ಡ್ರೈವರ್ ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ವಿಡಿಯೋ ಇದೀಗ ವೈರಲ್ ಆಗಿದೆ. ಕ್ಯಾಬನ್ನು ಏರಿದ ಪ್ರಯಾಣಿಕರು ಈತನ ವಿವರವನ್ನು ಸಂಸ್ಕೃತದಲ್ಲಿಯೇ ಕೇಳುತ್ತ ಹೋಗುತ್ತಾರೆ. ಆತ ಸಂಸ್ಕೃತದಲ್ಲಿಯೇ ಉತ್ತರಿಸುತ್ತ ಹೋಗುತ್ತಾನೆ. ನವೆಂಬರ್ 10ರಂದು ಈ ವಿಡಿಯೋ ಟ್ವೀಟ್ ಮಾಡಲಾಗಿದೆ. 2.6 ಲಕ್ಷಕ್ಕಿಂತಲೂ ಹೆಚ್ಚು ಜನರು ಇದನ್ನು ನೋಡಿದ್ದಾರೆ. 11,000ಕ್ಕಿಂತಲೂ ಹೆಚ್ಚು ಜನ ಪ್ರತಿಕ್ರಿಯಿಸಿದ್ದಾರೆ.

ದೆಹಲಿಯ ಇಂಡಿಯಾ ಗೇಟ್​ ಬಳಿ ಹೋಗುತ್ತಿರುವಾಗ ಈ ವಿಡಿಯೋ ರೆಕಾರ್ಡ್​ ಮಾಡಲಾಗಿದೆ. ಉತ್ತರ ಪ್ರದೇಶದ ಮೂಲದ ಅಶೋಕ ತನ್ನ ಕುಟುಂಬದ ಸದಸ್ಯರ ಬಗ್ಗೆ ಪ್ರಯಾಣಿಕನಿಗೆ ತಿಳಿಸುತ್ತಾನೆ. ಈ ವಿಡಿಯೋ ನೋಡಿದ ಅನೇಕರಿಗೆ ಸಂಸ್ಕೃತ ಕಲಿಯುವ ಉಮೇದು ಬಂದಿದೆ.

ನಾನಿನ್ನೂ ಸಂಸ್ಕೃತ ಕಲಿಯದಿರುವುದು ನನ್ನ ಬಗ್ಗೆ ನನಗೆ ಅವಮಾನ ಎನ್ನಿಸುತ್ತಿದೆ. ಸದ್ಯದಲ್ಲೇ ನಾನು ಕಲಿಯಲು ಆರಂಭಿಸುತ್ತೇನೆ ಎಂದಿದ್ದಾರೆ ಒಬ್ಬರು. ಬಹಳ ಸುಂದರವಾದ ಸಂಭಾಷಣೆ ಎಂದಿದ್ದಾರೆ ಇನ್ನೊಬ್ಬರು. ಈ ಸಾಮಾನ್ಯವಾದ ಸಂಭಾಷಣೆಯೂ ಒಂದು ಪೂಜಾ ಸಂದರ್ಭದಂತೆ ಅನ್ನಿಸುತ್ತಿದೆ ಎಂದಿದ್ದಾರೆ ಮಗದೊಬ್ಬರು. ಇದು ಕಿವಿಗೆ ತಂಪನ್ನೀಯುತ್ತಿದೆ ಎಂದಿದ್ದಾರೆ ಇನ್ನೊಬ್ಬರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್