AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್

Cab Driver : ನಾನಿನ್ನೂ ಸಂಸ್ಕೃತ ಕಲಿಯದಿರುವುದು ಅವಮಾನ ಎನ್ನಿಸುತ್ತಿದೆ, ಸದ್ಯದಲ್ಲೇ ಕಲಿಯಲು ಆರಂಭಿಸುತ್ತೇನೆ ಎಂದಿದ್ದಾರೆ ಈ ವಿಡಿಯೋ ನೋಡಿದ ಒಬ್ಬರು. ಪೂಜೆ ನಡೆಯುತ್ತಿದೆ ಎಂಬು ಭಾಸವಾಗುತ್ತದೆ ಎಂದಿದ್ದಾರೆ ಇನ್ನೊಬ್ಬರು.

ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್
Delhi cab driver talks to passenger in Sanskrit.
TV9 Web
| Edited By: ಶ್ರೀದೇವಿ ಕಳಸದ|

Updated on: Nov 17, 2022 | 10:09 AM

Share

Viral Video : ಈ ಹಿಂದೆ ಬೆಂಗಳೂರಿನ ಗಲ್ಲಿ ಕ್ರಿಕೆಟ್​​ ಕಾಮೆಂಟರಿಯನ್ನು ಸಂಸ್ಕೃತದಲ್ಲಿ ಮಾಡಿದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಇದೀಗ ದೆಹಲಿಯ ಕ್ಯಾಬ್​ ಡ್ರೈವರ್ ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ವಿಡಿಯೋ ಇದೀಗ ವೈರಲ್ ಆಗಿದೆ. ಕ್ಯಾಬನ್ನು ಏರಿದ ಪ್ರಯಾಣಿಕರು ಈತನ ವಿವರವನ್ನು ಸಂಸ್ಕೃತದಲ್ಲಿಯೇ ಕೇಳುತ್ತ ಹೋಗುತ್ತಾರೆ. ಆತ ಸಂಸ್ಕೃತದಲ್ಲಿಯೇ ಉತ್ತರಿಸುತ್ತ ಹೋಗುತ್ತಾನೆ. ನವೆಂಬರ್ 10ರಂದು ಈ ವಿಡಿಯೋ ಟ್ವೀಟ್ ಮಾಡಲಾಗಿದೆ. 2.6 ಲಕ್ಷಕ್ಕಿಂತಲೂ ಹೆಚ್ಚು ಜನರು ಇದನ್ನು ನೋಡಿದ್ದಾರೆ. 11,000ಕ್ಕಿಂತಲೂ ಹೆಚ್ಚು ಜನ ಪ್ರತಿಕ್ರಿಯಿಸಿದ್ದಾರೆ.

ದೆಹಲಿಯ ಇಂಡಿಯಾ ಗೇಟ್​ ಬಳಿ ಹೋಗುತ್ತಿರುವಾಗ ಈ ವಿಡಿಯೋ ರೆಕಾರ್ಡ್​ ಮಾಡಲಾಗಿದೆ. ಉತ್ತರ ಪ್ರದೇಶದ ಮೂಲದ ಅಶೋಕ ತನ್ನ ಕುಟುಂಬದ ಸದಸ್ಯರ ಬಗ್ಗೆ ಪ್ರಯಾಣಿಕನಿಗೆ ತಿಳಿಸುತ್ತಾನೆ. ಈ ವಿಡಿಯೋ ನೋಡಿದ ಅನೇಕರಿಗೆ ಸಂಸ್ಕೃತ ಕಲಿಯುವ ಉಮೇದು ಬಂದಿದೆ.

ನಾನಿನ್ನೂ ಸಂಸ್ಕೃತ ಕಲಿಯದಿರುವುದು ನನ್ನ ಬಗ್ಗೆ ನನಗೆ ಅವಮಾನ ಎನ್ನಿಸುತ್ತಿದೆ. ಸದ್ಯದಲ್ಲೇ ನಾನು ಕಲಿಯಲು ಆರಂಭಿಸುತ್ತೇನೆ ಎಂದಿದ್ದಾರೆ ಒಬ್ಬರು. ಬಹಳ ಸುಂದರವಾದ ಸಂಭಾಷಣೆ ಎಂದಿದ್ದಾರೆ ಇನ್ನೊಬ್ಬರು. ಈ ಸಾಮಾನ್ಯವಾದ ಸಂಭಾಷಣೆಯೂ ಒಂದು ಪೂಜಾ ಸಂದರ್ಭದಂತೆ ಅನ್ನಿಸುತ್ತಿದೆ ಎಂದಿದ್ದಾರೆ ಮಗದೊಬ್ಬರು. ಇದು ಕಿವಿಗೆ ತಂಪನ್ನೀಯುತ್ತಿದೆ ಎಂದಿದ್ದಾರೆ ಇನ್ನೊಬ್ಬರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?