AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಭಾರತೀಯರ ಆತ್ಮೀಯ ಆತಿಥ್ಯಕ್ಕೆ ಮನಸೋತ ರಷ್ಯನ್‌ ಪ್ರವಾಸಿಗ; ವೀಡಿಯೋ ವೈರಲ್

ಅತಿಥಿ ದೇವೋಭವ ಎನ್ನುವುದು ನಮ್ಮ ದೇಶದ ಸಂಸ್ಕೃತಿ. ಹಿಂದಿನಿಂದಲೂ ಹಾಗೆ ಇಲ್ಲಿ ನಾವು ಅತಿಥಿಗಳನ್ನು ನಗುಮೊಗದಿಂದ ಸ್ವಾಗತಿಸಿ ಸತ್ಕರಿಸುತ್ತೇವೆ. ಇಲ್ಲೊಬ್ರು ವಿದೇಶಿ ಪ್ರವಾಸಿಗ ಭಾರತೀಯರ ಈ ಪ್ರೀತಿ ತುಂಬಿದ ಆತಿಥ್ಯಕ್ಕೆ ಮನಸೋತಿದ್ದಾರೆ. ಅವರು ಶಿವ ದೇವಾಲಯವೊಂದಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿದ್ದ ಕುಟುಂಬವೊಂದು ಇವರಿಗೆ ಊಟ ಕೊಟ್ಟು ಸತ್ಕರಿಸಿದ್ದು, ಈ ಆತ್ಮೀಯ ಆತಿಥ್ಯವನ್ನು ಕಂಡು ಅವರು ಭಾವುಕರಾಗಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತದೆ.

Viral: ಭಾರತೀಯರ ಆತ್ಮೀಯ ಆತಿಥ್ಯಕ್ಕೆ ಮನಸೋತ ರಷ್ಯನ್‌ ಪ್ರವಾಸಿಗ; ವೀಡಿಯೋ ವೈರಲ್
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Mar 06, 2025 | 3:50 PM

Share

ನಮ್ಮ ಭಾರತದಲ್ಲಿ (india) ಮನಸ್ಸಿಗೆ ಮುದ ನೀಡುವಂತಹ ಹಲವಾರು ಪ್ರವಾಸಿ ತಾಣಗಳಿದ್ದು, ಈ ತಾಣಗಳ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು, ಇಲ್ಲಿನ ಸಂಸ್ಕೃತಿ, ಪರಂಪರೆ ಜನರ ಬಗ್ಗೆ ತಿಳಿಯಲು ಹಾಗೂ ವಿಶೇಷವಾಗಿ ನಮ್ಮ ಭಾರತದ ರುಚಿಕರ ಆಹಾರವನ್ನು ಸವಿಯುವ ಸಲುವಾಗಿ ಹಲವಾರು ವಿದೇಶಿ ಪ್ರವಾಸಿಗರು ಭಾರತಕ್ಕೆ ಪ್ರವಾಸ ಬರುತ್ತಾರೆ. ಅದೇ ರೀತಿ ಇಲ್ಲೊಬ್ರು ರಷ್ಯಾದ ಪ್ರವಾಸಿಗ (Russian Tourist) ಭಾರತದ ಶಿವ ದೇವಾಲಯವೊಂದಕ್ಕೆ ಭೇಟಿ ನೀಡಿದ್ದು, ಆ ಸಂದರ್ಭದಲ್ಲಿ ಅಲ್ಲಿದ್ದ ಕುಟುಂಬವೊಂದು ಇವರಿಗೆ ಊಟ ಕೊಟ್ಟು ಸತ್ಕರಿಸಿದ್ದು, ಈ ಆತ್ಮೀಯ ಆತಿಥ್ಯಕ್ಕೆ ಅವರು ಮನಸೋತು, ಭಾರತಕ್ಕೆ ಬನ್ನಿ, ಈ ದೇಶ ನಿಮಗೆ ಆಧ್ಯಾತ್ಮಿಕತೆಯ ನಿಜವಾದ ಅರ್ಥವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತದೆ.

ರಷ್ಯಾದ ಪ್ರವಾಸಿಗ ದೆಹಲಿಯ ಶಿವ ದೇವಾಲಯಕ್ಕೆ ಭೇಟಿ ನೀಡಿದ್ದಂತಹ ಸಂದರ್ಭದಲ್ಲಿ ಅಲ್ಲಿದ್ದ ಭಾರತೀಯ ಕುಟುಂಬವೊಂದು ಪ್ರವಾಸಿಗನಿಗೆ ಊಟ ಕೊಟ್ಟು ಆತ್ಮೀಯವಾಗಿ ಸತ್ಕರಿಸಿದ್ದಾರೆ. ಈ ಪ್ರೀತಿಯ ಸತ್ಕಾರಕ್ಕೆ ಹಾಗೂ ಇಲ್ಲಿನ ಸಂಸ್ಕೃತಿ, ಆಚಾರ-ವಿಚಾರವನ್ನು ಕಂಡು ವಿದೇಶಿ ಪ್ರವಾಸಿಗ ಭಾವುಕರಾಗಿದ್ದಾರೆ.

ಇದನ್ನೂ ಓದಿ
Image
ಬಾಲಕನನ್ನು ಅಟ್ಟಾಡಿಸಿಕೊಂಡು ಬಂದ ಬೀದಿ ನಾಯಿಗಳು, ಮುಂದೇನಾಯ್ತು ನೋಡಿ
Image
ಸೈಟ್‌ ಸೇಲ್‌ಗಿದೆ, ಓನ್ಲಿ ‌ ಫಾರ್‌ ವೆಜಿಟೇರಿಯನ್ಸ್‌
Image
ಬರೋಬ್ಬರಿ 7 ಲಕ್ಷ ರೂ. ದಾಖಲೆ ಮೊತ್ತಕ್ಕೆ ಸೇಲ್ ಆದ ಅಂಡರ್‌ವೇರ್
Image
100 ಪುಟಗಳ ಬಜೆಟ್‌ ಪ್ರತಿಯನ್ನು ಕೈಯಲ್ಲೇ ಬರೆದು ಮಂಡಿಸಿ ದಾಖಲೆ ಬರೆದ ಸಚಿವ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವನ್ನು Megha Udates ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಭಾರತೀಯ ಆತಿಥ್ಯಕ್ಕೆ ಮನಸೋತ ರಷ್ಯಾದ ಪ್ರವಾಸಿಗ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಪ್ರವಾಸ ಬಂದಿದ್ದ ರಷ್ಯಾದ ಪ್ರಜೆಯನ್ನು ನೆಲದ ಮೇಲೆ ಕೂರಿಸಿ ಭಾರತೀಯ ಕುಟುಂಬವೊಂದು ಅವರಿಗೆ ಊಟ ಕೊಡುವಂತಹ ದೃಶ್ಯವನ್ನು ಕಾಣಬಹುದು. ಭೋಜನವನ್ನು ಸ್ವೀಕರಿಸಿದ ಬಳಿಕ ಇಲ್ಲಿನ ಆತ್ಮೀಯ ಆಥಿತ್ಯಕ್ಕೆ ಹಾಗೂ ಸಂಸ್ಕೃತಿಗೆ ಮನಸೋತು ಸ್ನೇಹಿತರೇ ಭಾರತಕ್ಕೆ ಬನ್ನಿ, ಭಾರತವು ನಿಮಗೆ ನಿಜವಾದ ಆಧ್ಯಾತ್ಮಿಕತೆಯನ್ನು ತೋರಿಸುತ್ತದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ರೋಡಲ್ಲಿ ನಡ್ಕೊಂಡು ಬರ್ತಿದ್ದ ಬಾಲಕನನ್ನು ಅಟ್ಟಾಡಿಸಿಕೊಂಡು ಬಂದ ಬೀದಿ ನಾಯಿಗಳು; ಮುಂದೇನಾಯ್ತು ನೋಡಿ

ಮಾರ್ಚ್‌ 02 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.3 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಭಾರತೀಯ ಆತಿಥ್ಯ ಮತ್ತೊಮ್ಮೆ ಹೃದಯಗಳನ್ನು ಗೆದ್ದಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅತಿಥಿ ದೇವೋಭವ; ನಾವು ನಮ್ಮ ಆತಿಥ್ಯದಿಂದಲೇ ಹೆಸರುವಾಸಿಯಾಗಿದ್ದೇವೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ನನ್ನ ಹೆಮ್ಮೆಯ ಭಾರತʼ ಎಂದು ಹೇಳಿದ್ದಾರೆ. ಇನ್ನೂ ಅನೇಕ ಬಳಕೆದಾರರು ರಷ್ಯಾದ ಪ್ರವಾಸಿಗನನ್ನು ಸ್ವಾಗತಿಸಿದ ಭಾರತೀಯ ಕುಟುಂಬವನ್ನು ಶ್ಲಾಘಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್