AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ಬಸ್‌ ತಡೆದು ನಿಲ್ಲಿಸಿ ನಡು ರಸ್ತೆಯಲ್ಲಿ ಹೈಡ್ರಾಮಾ ಮಾಡಿದ ಮಹಿಳೆ; ವಿಡಿಯೋ ವೈರಲ್‌

ಕಂಠಪೂರ್ತಿ ಕುಡಿದು ಸಾರ್ವಜನಿಕ ಸ್ಥಳಗಳಲ್ಲಿ ಕುಡುಕರು ಮಾಡುವ ಕೆಲವೊಂದಿಷ್ಟು ಅವಾಂತರಗಳನ್ನು ನೋಡಿರುತ್ತೀರಿ ಅಲ್ವಾ. ಅದೇ ರೀತಿ ಇಲ್ಲೊಬ್ಬಳು ಮಹಿಳೆ ಪುರುಷರಿಗಿಂತ ನಾನೇನು ಕಮ್ಮಿಯಿಲ್ಲ ಎನ್ನುತ್ತಾ ಕಂಠ ಪೂರ್ತಿ ಕುಡಿದು ಬಂದು ಬಸ್‌ ತಡೆದು ನಿಲ್ಲಿಸಿ ನಡು ರಸ್ತೆಯಲ್ಲಿ ದೊಡ್ಡ ರಂಪಾಟವನ್ನೇ ಮಾಡಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಇದುವಾ ಮಹಿಳಾ ಸಬಲೀಕರಣ ಅಂದ್ರೆ ಎಂದು ನೆಟ್ಟಿಗರು ಪಾನಮತ್ತ ಮಹಿಳೆಯ ವರ್ತನೆಯನ್ನು ಕಂಡು ಕಿಡಿ ಕಾರಿದ್ದಾರೆ.

ಕುಡಿದ ಅಮಲಿನಲ್ಲಿ ಬಸ್‌ ತಡೆದು ನಿಲ್ಲಿಸಿ ನಡು ರಸ್ತೆಯಲ್ಲಿ ಹೈಡ್ರಾಮಾ ಮಾಡಿದ ಮಹಿಳೆ; ವಿಡಿಯೋ ವೈರಲ್‌
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Mar 10, 2025 | 2:14 PM

Share

ದೆಹಲಿ, ಮಾ. 10: ಎಣ್ಣೆ ಏಟಲ್ಲಿ ಕುಡುಕರು (drunkards) ಮಾಡುವ ರಂಪಾಟ, ಅವಾಂತರಗಳು ಅಷ್ಟಿಷ್ಟಲ್ಲ. ಒಂದಾ ಬೇರೆಯವರ ವಸ್ತುಗಳಿಗೆ ಹಾನಿ ಮಾಡಿಯೋ ಅಥವಾ ಅಥವಾ ಕಂಡಕಂಡವರಿಗೆ ಬೈದೊ ಇಲ್ಲವೇ ಅವರೊಂದಿಗೆ ಜಗಳ ಕಾಯ್ದು ಕಿರಿಕ್‌ ಮಾಡುತ್ತಿರುತ್ತಾರೆ. ಕುಡುಕರ ಅವಾಂತರಗಳಿಗೆ ಸಂಬಂಧಿಸಿದ ಇಂತಹ ಸಾಕಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗೊಮ್ಮೆ ಈಗೊಮ್ಮೆ ಕಾಣ ಸಿಗುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ದೃಶ್ಯ ವೈರಲ್‌ ಆಗಿದ್ದು, ಮಹಿಳೆಯೊಬ್ಬಳು ಪುರುಷರಿಗಿಂತ ನಾನೇನು ಕಮ್ಮಿಯಿಲ್ಲ ಎನ್ನುತ್ತಾ ಕಂಠ ಪೂರ್ತಿ ಕುಡಿದು ಬಂದು ಬಸ್‌ ತಡೆದು ನಿಲ್ಲಿಸಿ ನಡು ರಸ್ತೆಯಲ್ಲಿ ದೊಡ್ಡ ರಂಪಾಟ ಮಾಡಿದ್ದಾಳೆ. ಈಕೆಯ ಹುಚ್ಚಾಟವನ್ನು ಕಂಡು ಇದುವಾ ಮಹಿಳಾ ಸಬಲೀಕರಣ ಅಂದ್ರೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ದೆಹಲಿಯ ಮೋಹನ್‌ ಗಾರ್ಡನ್‌ ಎಂಬಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಪಾನಮತ್ತ ಮಹಿಳೆಯೊಬ್ಬಳು ಬಸ್ಸನ್ನು ತಡೆದು ನಿಲ್ಲಿಸಿ ನಡು ರಸ್ತೆಯಲ್ಲಿ ಹೈಡ್ರಾಮಾ ಮಾಡಿದ್ದಾಳೆ. ಆಕೆ ಕುಡಿದ ಮತ್ತಿನಲ್ಲಿ ನಡುರಸ್ತೆಗಿಳಿದು ಬಸ್ಸನ್ನು ತಡೆದು ನಿಲ್ಲಿಸಿದ್ದು, ಆಕೆ ಮುಂದೆ ಬರುತ್ತಿರುವ ವೇಳೆ ಚಾಲಕ ಸಡನ್‌ ಆಗಿ ಬಸ್‌ ನಿಲ್ಲಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ. ಹೀಗೆ ಬಸ್‌ ತಡೆದದ್ದು ಮಾತ್ರವಲ್ಲದೆ ರಸ್ತೆಯಲ್ಲಿ ಮಲಗುವ ಮೂಲಕ ದೊಡ್ಡ ರಂಪಾಟವನ್ನು ಮಾಡಿ ಸಂಚಾರಕ್ಕೂ ಕೂಡಾ ಅಡ್ಡಿ ಉಂಟು ಮಾಡಿದ್ದಾಳೆ. ನಂತರ ಪೊಲೀಸರು ಬಂದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

Lavelybakshi ಹೆಸರಿನ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಲಾದ ಈ ವಿಡಿಯೋದಲ್ಲಿ ಪಾನಮತ್ತ ಮಹಿಳೆ ನಡುರಸ್ತೆಯಲ್ಲಿ ಬಸ್ಸನ್ನು ತಡೆದು ನಿಲ್ಲಿಸುವ ಮೂಲಕ ಸಂಚಾರಕ್ಕೆ ಅಡ್ಡಿಪಡಿಸಿದಂತಹ ದೃಶ್ಯವನ್ನು ಕಾಣಬಹುದು. ಇನ್ನೊಂದು ವಿಡಿಯೋದಲ್ಲಿ ಆಕೆ ರಸ್ತೆಯಲ್ಲಿಯೇ ಮಲಗಿ ವಾಹನ ಸವಾರರಿಗೆ ತೊಂದರೆ ಉಂಟು ಮಾಡಿದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ
Image
ಕುದುರೆಗೆ ಬಲವಂತವಾಗಿ ಸಿಗರೇಟ್ ಸೇದಿಸಿದ ಯುವಕರು
Image
ನಿಮ್ಮ ಮೂಗು ದುಂಡಾಗಿದ್ಯಾ? ಹಾಗಾದ್ರೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ
Image
20 ಹೆಂಡತಿಯರು, 104 ಮಕ್ಕಳು, 144 ಮೊಮ್ಮಕ್ಕಳು ಇವರದ್ದೇ ಒಂದು ಹಳ್ಳಿ
Image
ಚರಂಡಿಯಲ್ಲಿ ಸಿಲುಕಿದ್ದ ಹಸುವನ್ನು ರಕ್ಷಿಸಿದ ಹೃದಯವಂತ

ಇದನ್ನೂ ಓದಿ: ಅಬ್ಬಬ್ಬಾ ಈ ಮಕ್ಳಿಗೆ ಭಯವೇ ಇಲ್ವಾ… ಸತ್ತ ಹೆಬ್ಬಾವನ್ನು ಹಿಡಿದು ಸ್ಕಿಪ್ಪಿಂಗ್‌ ಆಡಿದ ಪೋರರು

ಮಾರ್ಚ್‌ 08 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದೇ ಇರ್ಬೇಕು ಮಹಿಳಾ ಸಬಲೀಕರಣ ಅಂದ್ರೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇದೆಂತಹ ನಾಟಕʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಸಾರ್ವಜನಿಕ ಸ್ಥಳದಲ್ಲಿ ಪಾನಮತ್ತ ಮಹಿಳೆಯ ಹುಚ್ಚಾಟವನ್ನು ಕಂಡು ಶಾಕ್‌ ಆಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?