AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾಡು ಹಗಲೇ ಕಳ್ಳತನಕ್ಕೆ ಯತ್ನ; ಪೊಲೀಸ್​​ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ

ಕರ್ಮ ಯಾರನ್ನೂ ಬಿಡಲ್ಲ, ತಪ್ಪು ಮಾಡಿದವನು ಒಂದಲ್ಲಾ ಒಂದು ದಿನ ತಮ್ಮ ಕರ್ಮದ ಫಲವನ್ನು ಅನುಭವಿಸಿಯೇ ತೀರುತ್ತಾನೆ ಎಂಬ ಮಾತನ್ನು ಹಲವರು ಹೇಳುತ್ತಿರುತ್ತಾರೆ. ಆದರೆ ಇಲ್ಲೊಬ್ಬ ಕಳ್ಳನಿಗೆ ಇನ್ಸ್ಟೆಂಟ್ ಕರ್ಮ ಲಭಿಸಿದ್ದು, ಕಳ್ಳತನ ಮಾಡುವ ವೇಳೆಯಲ್ಲಿಯೇ ಪೊಲೀಸಪ್ಪನ ಕೈಯಲ್ಲಿ ಸಿಕ್ಕಿಬಿದ್ದು, ಧರ್ಮದೇಟು ತಿಂದಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದೆ.

Viral Video: ಹಾಡು ಹಗಲೇ ಕಳ್ಳತನಕ್ಕೆ ಯತ್ನ; ಪೊಲೀಸ್​​ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ
ಮಾಲಾಶ್ರೀ ಅಂಚನ್​
| Edited By: |

Updated on: May 12, 2024 | 12:40 PM

Share

ಕಳ್ಳತನ ಮಾಡುವುದು ಅಪರಾಧ ಎಂದು ಗೊತ್ತಿದ್ರೂ ಕೂಡಾ ಕೆಲವರು ಕಳ್ಳತನವನ್ನೇ ತಮ್ಮ ವೃತ್ತಿಯನ್ನಾಗಿ ಮಾಡಿಕೊಂಡಿರುತ್ತಾರೆ. ಈ ಚಾಲಾಕಿ ಕಳ್ಳರು ಬಹಳ ಬುದ್ಧಿವಂತಿಕೆಯಿಂದ ಕದಿಯುತ್ತಾರೆ. ಇನ್ನೂ ಕೆಲ ಕಳ್ಳರು ಜನರಿಗೆ ಎದರಿಸಿ ಬೆದರಿಸಿ ಪರ್ಸ್ ಎಗರಿಸಿಕೊಂಡು ಹೋಗುತ್ತಾರೆ. ಹೀಗೆ ಕೆಲವೊಮ್ಮೆ ಕಳ್ಳರು ಅತಿಯಾದ ಬುದ್ಧಿವಂತಿಕೆಯನ್ನು ಬಳಸಿ ಹಾರಾಡಲು ಹೋಗಿ ಕೊನೆಗೆ ಪೊಲೀಸರ ಅಥಿತಿಯಾಗುತ್ತಾರೆ. ಸದ್ಯ ಅಂತಹದ್ದೇ ಘಟನೆಯೊಂದು ನಡೆದಿದ್ದು, ಹಾಡು ಹಗಲೇ ಬೈಕ್ ಸವಾರರೊಬ್ಬರನ್ನು ಹೆದರಿಸಿ ಕಳ್ಳತನಕ್ಕೆ ಯತ್ನಿಸಿದ ಕಳ್ಳನೊಬ್ಬ ಪೊಲೀಸಪ್ಪನ ಕೈಯಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಕುರಿತ ವಿಡಿಯೋವನ್ನು ದೆಹಲಿ ಪೊಲೀಸ್ (@DelhiPolice) ಅಧೀಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ದೆಹಲಿ ಪೊಲೀಸ್ ಠಾಣೆಯ ಸದರ್ ಬಜಾರ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ಕಾನ್‌ಸ್ಟೆಬಲ್ ಸಚಿನ್‌ ಕಳ್ಳನೊಬ್ಬನನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: Video Viral: ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ; ವಿಡಿಯೋ ವೈರಲ್​

ವೈರಲ್‌ ವಿಡಿಯೋದಲ್ಲಿ ಖತರ್ನಾಕ್‌ ಕಳ್ಳನೊಬ್ಬ ಹಾಡು ಹಗಲೇ ಯಾರ ಭಯವೂ ಇಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ಬೈಕ್‌ ಸವಾರರೊಬ್ಬರನ್ನು ಹೆದರಿಸಿ ಬೆದರಿಸಿ, ಅವರ ಪರ್ಸ್‌ ಅನ್ನು ಕದಿಯಲು ಯತ್ನಿಸುತ್ತಿರುವುದನ್ನು ಕಾಣಬಹುದು. ಅಲ್ಲೇ ಗಸ್ತು ತಿರುಗುತ್ತಿದ್ದ ಪೊಲೀಸ್‌ ಈ ದೃಶ್ಯವನ್ನು ಕಂಡು ಓಡಿ ಬಂದು ಕಳ್ಳನನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಆ ಭೂಪ ಹಾಡು ಹಗಲೇ ಕಳ್ಳತನ ಮಾಡಲು ಹೋಗಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಮೇ 08 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಪೊಲೀಸಪ್ಪನ ಈ ಕಾರ್ಯಕ್ಕೆ ನೆಟ್ಟಿಗರು ಭಾರಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು