Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾಡು ಹಗಲೇ ಕಳ್ಳತನಕ್ಕೆ ಯತ್ನ; ಪೊಲೀಸ್​​ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ

ಕರ್ಮ ಯಾರನ್ನೂ ಬಿಡಲ್ಲ, ತಪ್ಪು ಮಾಡಿದವನು ಒಂದಲ್ಲಾ ಒಂದು ದಿನ ತಮ್ಮ ಕರ್ಮದ ಫಲವನ್ನು ಅನುಭವಿಸಿಯೇ ತೀರುತ್ತಾನೆ ಎಂಬ ಮಾತನ್ನು ಹಲವರು ಹೇಳುತ್ತಿರುತ್ತಾರೆ. ಆದರೆ ಇಲ್ಲೊಬ್ಬ ಕಳ್ಳನಿಗೆ ಇನ್ಸ್ಟೆಂಟ್ ಕರ್ಮ ಲಭಿಸಿದ್ದು, ಕಳ್ಳತನ ಮಾಡುವ ವೇಳೆಯಲ್ಲಿಯೇ ಪೊಲೀಸಪ್ಪನ ಕೈಯಲ್ಲಿ ಸಿಕ್ಕಿಬಿದ್ದು, ಧರ್ಮದೇಟು ತಿಂದಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದೆ.

Viral Video: ಹಾಡು ಹಗಲೇ ಕಳ್ಳತನಕ್ಕೆ ಯತ್ನ; ಪೊಲೀಸ್​​ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: May 12, 2024 | 12:40 PM

ಕಳ್ಳತನ ಮಾಡುವುದು ಅಪರಾಧ ಎಂದು ಗೊತ್ತಿದ್ರೂ ಕೂಡಾ ಕೆಲವರು ಕಳ್ಳತನವನ್ನೇ ತಮ್ಮ ವೃತ್ತಿಯನ್ನಾಗಿ ಮಾಡಿಕೊಂಡಿರುತ್ತಾರೆ. ಈ ಚಾಲಾಕಿ ಕಳ್ಳರು ಬಹಳ ಬುದ್ಧಿವಂತಿಕೆಯಿಂದ ಕದಿಯುತ್ತಾರೆ. ಇನ್ನೂ ಕೆಲ ಕಳ್ಳರು ಜನರಿಗೆ ಎದರಿಸಿ ಬೆದರಿಸಿ ಪರ್ಸ್ ಎಗರಿಸಿಕೊಂಡು ಹೋಗುತ್ತಾರೆ. ಹೀಗೆ ಕೆಲವೊಮ್ಮೆ ಕಳ್ಳರು ಅತಿಯಾದ ಬುದ್ಧಿವಂತಿಕೆಯನ್ನು ಬಳಸಿ ಹಾರಾಡಲು ಹೋಗಿ ಕೊನೆಗೆ ಪೊಲೀಸರ ಅಥಿತಿಯಾಗುತ್ತಾರೆ. ಸದ್ಯ ಅಂತಹದ್ದೇ ಘಟನೆಯೊಂದು ನಡೆದಿದ್ದು, ಹಾಡು ಹಗಲೇ ಬೈಕ್ ಸವಾರರೊಬ್ಬರನ್ನು ಹೆದರಿಸಿ ಕಳ್ಳತನಕ್ಕೆ ಯತ್ನಿಸಿದ ಕಳ್ಳನೊಬ್ಬ ಪೊಲೀಸಪ್ಪನ ಕೈಯಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಕುರಿತ ವಿಡಿಯೋವನ್ನು ದೆಹಲಿ ಪೊಲೀಸ್ (@DelhiPolice) ಅಧೀಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ದೆಹಲಿ ಪೊಲೀಸ್ ಠಾಣೆಯ ಸದರ್ ಬಜಾರ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ಕಾನ್‌ಸ್ಟೆಬಲ್ ಸಚಿನ್‌ ಕಳ್ಳನೊಬ್ಬನನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: Video Viral: ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ; ವಿಡಿಯೋ ವೈರಲ್​

ವೈರಲ್‌ ವಿಡಿಯೋದಲ್ಲಿ ಖತರ್ನಾಕ್‌ ಕಳ್ಳನೊಬ್ಬ ಹಾಡು ಹಗಲೇ ಯಾರ ಭಯವೂ ಇಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ಬೈಕ್‌ ಸವಾರರೊಬ್ಬರನ್ನು ಹೆದರಿಸಿ ಬೆದರಿಸಿ, ಅವರ ಪರ್ಸ್‌ ಅನ್ನು ಕದಿಯಲು ಯತ್ನಿಸುತ್ತಿರುವುದನ್ನು ಕಾಣಬಹುದು. ಅಲ್ಲೇ ಗಸ್ತು ತಿರುಗುತ್ತಿದ್ದ ಪೊಲೀಸ್‌ ಈ ದೃಶ್ಯವನ್ನು ಕಂಡು ಓಡಿ ಬಂದು ಕಳ್ಳನನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಆ ಭೂಪ ಹಾಡು ಹಗಲೇ ಕಳ್ಳತನ ಮಾಡಲು ಹೋಗಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಮೇ 08 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಪೊಲೀಸಪ್ಪನ ಈ ಕಾರ್ಯಕ್ಕೆ ನೆಟ್ಟಿಗರು ಭಾರಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ