AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ತುತ್ತನಿಟ್ಟ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಕಣ್ಣೀರ ವಿದಾಯ ಹೇಳಿದ ಕೋತಿ

ಸ್ವಾರ್ಥ ತುಂಬಿದ ಮನುಷ್ಯನ ಪ್ರೀತಿಗಿಂತ ಮೂಕ ಪ್ರಾಣಿಗಳ ಪ್ರೀತಿಯೇ ಮೇಲು. ಹೀಗಾಗಿ ಎಷ್ಟೋ ಜನರು ಈ ಪ್ರಾಣಿಗಳ ಜೊತೆಗೆ ಒಡನಾಟ ಬೆಳೆಸಿಕೊಂಡಿರುತ್ತಾರೆ. ಆದರೆ ಇದೀಗ ಕೋತಿಯೊಂದು ತನಗೆ ತುತ್ತು ಅನ್ನ ನೀಡಿದ ಹಸಿವು ನೀಗಿಸಿದ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಕಣ್ಣೀರ ವಿದಾಯ ಹೇಳಿದ್ದು, ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ಪ್ರಾಣಿಗಳ ಪ್ರೀತಿ ಪರಿಶುದ್ಧವಾದದ್ದು ಎಂದಿದ್ದಾರೆ.

Video : ತುತ್ತನಿಟ್ಟ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಕಣ್ಣೀರ ವಿದಾಯ ಹೇಳಿದ ಕೋತಿ
ತುತ್ತು ಅನ್ನ ನೀಡಿದ ವ್ಯಕ್ತಿಯ ಅಂತ್ಯ ಕ್ರಿಯೆಯಲ್ಲಿ ಭಾಗಿಯಾದ ಕೋತಿImage Credit source: Twitter
ಸಾಯಿನಂದಾ
|

Updated on: Jun 10, 2025 | 7:23 PM

Share

ದಿಯೋಘರ್, ಜೂನ್ 10: ನಾವೆಲ್ಲರೂ ಈ ಪ್ರಾಣಿ (animal) ಗಳಿಗೆ ಭಾವನೆಗಳಿಲ್ಲ ಎಂದುಕೊಳ್ಳುತ್ತೇವೆ. ಆದರೆ ಅವುಗಳಿಗೂ ತಾವು ತಮ್ಮವರು ಭಾವನೆ ಇದ್ದೆ ಇರುತ್ತದೆ. ಹೌದು, ಈ ಮೂಕ ಪ್ರಾಣಿಗಳ ಮೇಲೆ ಒಮ್ಮೆ ಕಾಳಜಿಯುತ ಪ್ರೀತಿ ಭಾವನೆ ತೋರಿದರೆ ಸಾಕು, ಅದು ಯಾವತ್ತೂ ನಿಮ್ಮನ್ನು ಮರೆಯುವುದಿಲ್ಲ. ಇದಕ್ಕೆ ಈ ವಿಡಿಯೋವೊಂದು ಸಾಕ್ಷಿಯಾಗಿದೆ. ತನಗೆ ಆಹಾರ ನೀಡುತ್ತಿದ್ದ ವ್ಯಕ್ತಿಯೂ ಮರಣ ಹೊಂದಿದ್ದು, ಆತನ ಮೃತದ ದೇಹದ ಮುಂದೆ ಕುಳಿತು ಕಣ್ಣೀರ ವಿದಾಯ ಹೇಳಿದ ಕೋತಿ (monkey) ಯ ಹೃದಯ ಸ್ಪರ್ಶಿ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದಿಯೋಘರ್ (Diyoghar) ಎಂಬಲ್ಲಿ ನಡೆದಿದೆ ಎನ್ನಲಾಗಿದೆ.

@news24tvchannel ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮೃತ ಪಟ್ಟಿರುವ ಮುನ್ನ ಸಿಂಗ್ ಅವರ ಮೃತದೇಹವನ್ನು ಮನೆಯ ಹೊರಗಡೆ ಇಟ್ಟಿರುವುದನ್ನು ಕಾಣಬಹುದು. ಈ ವೇಳೆಯಲ್ಲಿ ಕೋತಿಯೊಂದು ಮೃತದೇಹದ ಹತ್ತಿರ ಬಂದು ಸ್ವಲ್ಪ ಹೊತ್ತು ಅಲ್ಲೇ ಕುಳಿತುಕೊಂಡಿದ್ದು, ಆ ಬಳಿಕ ವ್ಯಕ್ತಿಗೆ ಚುಂಬಿಸಿ ಕಣ್ಣೀರ ವಿದಾಯ ಹೇಳಿದೆ. ತದನಂತರದಲ್ಲಿ ಅಂತ್ಯಕ್ರಿಯೆಯ ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ಈ ದೃಶ್ಯವನ್ನು ಕಣ್ಣಾರೆ ಕಂಡ ಗ್ರಾಮಸ್ಥರು ಕೋತಿಗೆ ಕೈ ಮುಗಿದು ನಮಸ್ಕಾರ ಮಾಡುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ
Image
ಮೊಮೊಸ್ ಬಿರಿಯಾನಿ ಆಯ್ತು, ಈಗ ಲಿಚಿ ಮೊಮೊಸ್ ಸರದಿ
Image
ಮಂಗಳೂರಿಗೆ ಬಂತಾ ಇಂಡೋನೇಷ್ಯಾದ ಗುಲಾಬಿ ಬಣ್ಣದ ಎಳನೀರು?
Image
ವಂದೇ ಭಾರತ್ ಎಕ್ಸ್‌ಪ್ರೆಸ್‌​​​​ನಲ್ಲಿ ಮಗನ ಹುಟ್ಟುಹಬ್ಬ ಆಚರಿಸಿದ ದಂಪತಿ
Image
ಪತ್ನಿಯ ಗೆಲುವಿನ ಕ್ಷಣವನ್ನು ಸಂಭ್ರಮಿಸಿದ ಪತಿ

ಇದನ್ನೂ ಓದಿ : ಸಿಂಧೂರ ಹಚ್ಚುವಾಗ ನಡುಗಿತು ವರನ ಕೈ, ಈ ಮದುವೆ ಬೇಡ ಎಂದು ಹಠ ಹಿಡಿದು ಕುಳಿತ ವಧು

ಹೌದು, ಮೃತ ಪಟ್ಟಿರುವ ವ್ಯಕ್ತಿಯ ಹೆಸರು ಮುನ್ನ ಸಿಂಗ್. ಈ ವ್ಯಕ್ತಿಯೂ ಈ ಕೋತಿಗೆ ರೊಟ್ಟಿ ಹಾಗೂ ಆಹಾರ ನೀಡಿ ಅದರ ಹಸಿವು ನೀಗಿಸುತ್ತಿದ್ದನು. ಈ ಋಣವನ್ನು ತೀರಿಸಲು ಈ ಕೋತಿಯೊಂದು ಆತನ ಅಂತ್ಯಕ್ರಿಯೆಯನ್ನು ಭಾಗಿಯಾಗಿ ಅಗಲಿದ ಹೃದಯವಂತ ವ್ಯಕ್ತಿಯ ಮುಂದೆ ಕುಳಿತು ಶೋಕ ವ್ಯಕ್ತಪಡಿಸಿದ್ದು, ಈ ವಿಡಿಯೋವೊಂದು ಐವತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರ ಕಣ್ಣು ಒದ್ದೆಯಾಗಿದೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಬಳಕೆದಾರರೊಬ್ಬರು ಈ ದೃಶ್ಯ ಕಂಡು ಕಣ್ಣು ಒದ್ದೆಯಾಯಿತು, ಈ ರೀತಿ ಪ್ರಾಣಿ ಪ್ರೀತಿ ಸಂಪಾದಿಸಲು ಅದೃಷ್ಟ ಬೇಕು ಎಂದಿದ್ದಾರೆ. ಮತ್ತೊಬ್ಬರು ಜೈ ಭಜರಂಗಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮನುಷ್ಯನಿಗಿಂತ ಈ ಪ್ರಾಣಿಗಳೇ ಮೇಲು, ಈ ಮುಗ್ಧ ಜೀವಿಗಳು ತುತ್ತಿಟ್ಟವನ ಋಣವನ್ನು ಹೀಗೆಯಾದ್ರೂ ತೀರಿಸುತ್ತವೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ