AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸರ್​​ ಪ್ಲೀಸ್​​ ನನ್ನ ಹಣ ನೀಡಿ: ದುಡಿದ ಹಣಕ್ಕಾಗಿ ರೈಲಿನ ಹಿಂದೆ ಓಡಿದ ಕೂಲಿ

ಬಾಂಗ್ಲಾದೇಶದ ಢಾಕಾ ರೈಲು ನಿಲ್ದಾಣದಲ್ಲಿ ಕೂಲಿಯೊಬ್ಬ ಪ್ರಯಾಣಿಕನಿಂದ ಹಣ ಪಡೆಯದೆ ವಂಚನೆಗೆ ಒಳಗಾಗಿದ್ದಾನೆ. ತಾನು ದುಡಿದ ಹಣಕ್ಕಾಗಿ ಆತ ರೈಲಿನ ಹಿಂದೆ ಓಡಿದ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನೆಟ್ಟಿಗರು ಇಂತಹ ಕೃತ್ಯಕ್ಕೆ ತಕ್ಕ ಶಿಕ್ಷೆ ಮತ್ತು ಕಾರ್ಮಿಕರಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದ್ದಾರೆ.

Video: ಸರ್​​ ಪ್ಲೀಸ್​​ ನನ್ನ ಹಣ ನೀಡಿ: ದುಡಿದ ಹಣಕ್ಕಾಗಿ ರೈಲಿನ ಹಿಂದೆ ಓಡಿದ ಕೂಲಿ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Nov 15, 2025 | 1:08 PM

Share

ನಿಯತ್ತಿನಿಂದ ದುಡಿಯುವ ಕೈಗಳಿಗೆ ಯಾವತ್ತೂ ದ್ರೋಹ ಮಾಡಬಾರದು. ಇಲ್ಲೊಂದು ಅಮಾನವೀಯ ಘಟನೆಯ ವಿಡಿಯೋವೊಂದು ವೈರಲ್​​ ಆಗಿದೆ. ಬಾಂಗ್ಲಾದೇಶದ ಢಾಕಾ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ರೈಲ್ವೆ ನಿಲ್ದಾಣದ ಕೂಲಿಗೆ ಹಣ ನೀಡದೇ ಮೋಸ (Dhaka coolie cheated) ಮಾಡಿದ್ದಾನೆ. ಪಾಪ ಆ ಕೂಲಿ ಹಣಕ್ಕಾಗಿ ರೈಲಿನ ಹಿಂದೆ ಓಡಿದ್ದಾನೆ. ಈ ವಿಡಿಯೋಯನ್ನು ಫೇಸ್​​​ಬುಕ್​​​ನಲ್ಲಿ ಹಂಚಿಕೊಂಡಿದ್ದು, ಇಂತಹ ವಿಚಾರದಲ್ಲಿ ಮನುಷ್ಯತ್ವ ಕಳೆದುಕೊಳ್ಳಬಾರದು ಎಂದು ನೆಟ್ಟಿಗರು ಹೇಳಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ದುಡಿಯುವ ಇಂತಹ ಕೂಲಿಗಳಿಗೆ ಮೋಸ ಮಾಡುವುದು ಸರಿಯಲ್ಲ, ಮೋಸ ಮಾಡುವ ಇಂತಹ ಜನರಿಗೆ ಸರಿಯಾದ ಶಿಕ್ಷೆ ಆಗಬೇಕು ಎಂದು ನೆಟ್ಟಿಗರು ಹೇಳಿದ್ದಾರೆ.

ಫೇಸ್​​​ ಬುಕ್​​​ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಹೀಗೆ ಹೇಳಲಾಗಿದೆ. ಕೂಲಿಯೊಬ್ಬ ಪ್ರಯಾಣಿಕನ ಬಳಿ ತಾನು ದುಡಿದ ಹಣವನ್ನು ಕೇಳಲು ರೈಲಿನ ಹಿಂದೆ ಓಡುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಆದರೆ ಆ ಪ್ರಯಾಣಿಕ ಕರುಣೆಯೇ ಇಲ್ಲದಂತೆ ವರ್ತಿಸಿದ್ದಾನೆ.  ಪ್ರಯಾಣಿಕನಲ್ಲಿ ಅಂಗಲಾಚಿ ದುಡಿದ ಹಣ ಕೇಳಿದ್ರು ನೀಡಿಲ್ಲ, ಇನ್ನು ಪಕ್ಕದಲ್ಲಿದ್ದ ಯಾರು ಕೂಡ ಆ ಕೂಲಿಯ ಸಹಾಯಕ್ಕೆ ಬರುವುದಿಲ್ಲ.  ಈ ವಿಡಿಯೋ ಮಾಡಿ ಸೋಶಿಯಲ್​​​ ಮೀಡಿಯಾದಲ್ಲಿ ಹಂಚಿಕೊಂಡ ಸೋಜೋಲ್ ಅಲಿ ಎಂಬುವವರು ನಿನ್ನ ಫೋನ್​​ ನಂಬರ್​​​​ ಹೇಳು ನಾನು ಹಣ ಹಾಕುವೆ ಎಂದು ಹೇಳಿದ್ದಾರೆ. ಆದರೆ ಆ ಕೂಲಿ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ. ಆ ಕೂಲಿ ಎಷ್ಟೇ ಕೇಳಿಕೊಂಡರು ಪ್ರಯಾಣಿಕ ಯಾವುದಕ್ಕೂ ಪ್ರತಿಕ್ರಿಯೆ ನೀಡಲೇ ಇಲ್ಲ.

ಇದನ್ನೂ ಓದಿ: ರಾಂಗ್ ಸೈಡ್​​​ನಲ್ಲಿ ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಜಗಳಕ್ಕೆ ಇಳಿದ ಮಹಿಳೆ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ

ಮನುಷ್ಯ ಮೊದಲು ಮಾನವೀಯತೆ ಕಲಿಬೇಕು:

ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಈ ವಿಡಿಯೋ ನೋಡಿ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಲಿಗಳನ್ನು ನ್ಯಾಯಯುತವಾಗಿ ಮತ್ತು ಗೌರವದಿಂದ ನಡೆಸಿಕೊಳ್ಳುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಒಬ್ಬರು ಹೀಗೆ ಕಮೆಂಟ್​ ಮಾಡಿದ್ದಾರೆ. ಹಣ ಕೊಡದ ವ್ಯಕ್ತಿಯ ಬಗ್ಗೆ ನನಗೆ ವಿಷಾದವಿದೆ, ಏಕೆಂದರೆ ಅವನು ದೇವರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಮತ್ತೊಬ್ಬರು ದಯವಿಟ್ಟು ಯಾರಾದರೂ ಅವನನ್ನು ಹುಡುಕಿ ಅವನ ಬಾಕಿ ಹಣವನ್ನು ಪಾವತಿಸಬಹುದೇ? ಎಂದು ಹೇಳಿದ್ದಾರೆ. ಪ್ರಯಾಣಿಕ ಮಾಡಿದ ಪಾಪವನ್ನು ಖಂಡಿತ ಕರ್ಮ ನೋಡಿಕೊಳ್ಳುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್