AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಯುವಕರಿಗೆ ಮಾದರಿಯಾಗಲು ಹೇಗೆ ಸಾಧ್ಯ? ಧವನ್, ರೈನಾ ವಿರುದ್ಧ ವಾಗ್ದಾಳಿ ನಡೆಸಿದ ಕರ್ನಾಟಕ ಮೂಲದ ಪೊಲೀಸ್ ಅಧಿಕಾರಿ

ಬೆಟ್ಟಿಂಗ್ ಆ್ಯಪ್ ಪ್ರಚಾರ ಪ್ರಕರಣದಲ್ಲಿ ಶಿಖರ್ ಧವನ್ ಮತ್ತು ಸುರೇಶ್ ರೈನಾ ಅವರ ₹11.14 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ ಜಪ್ತಿ ಮಾಡಿದೆ. 1xBet ಪ್ರಚಾರಕ್ಕಾಗಿ ವಿದೇಶಿ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದು ತನಿಖೆಯಿಂದ ಬಯಲಾಗಿದೆ. ಈ ಬಗ್ಗೆ ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ್ ಸಿ ಸಜ್ಜನರ್, ಸೆಲೆಬ್ರಿಟಿಗಳು ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಯುವಕರ ಭವಿಷ್ಯದ ಮೇಲೆ ಬೀರುವ ಪರಿಣಾಮ ಎಂದು ಹೇಳಿದ್ದಾರೆ.

ನೀವು ಯುವಕರಿಗೆ ಮಾದರಿಯಾಗಲು ಹೇಗೆ ಸಾಧ್ಯ? ಧವನ್, ರೈನಾ ವಿರುದ್ಧ ವಾಗ್ದಾಳಿ ನಡೆಸಿದ ಕರ್ನಾಟಕ ಮೂಲದ ಪೊಲೀಸ್ ಅಧಿಕಾರಿ
ಶಿಖರ್ ಧವನ್, ಸುರೇಶ್ ರೈನಾ, ವಿಶ್ವನಾಥ್ ಸಿ ಸಜ್ಜನರ್
ಅಕ್ಷಯ್​ ಪಲ್ಲಮಜಲು​​
|

Updated on: Nov 08, 2025 | 4:47 PM

Share

ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್ (Shikhar Dhawan) ಹಾಗೂ ಸುರೇಶ್ ರೈನಾ (Suresh Raina) ಅವರಿಗೆ ಸಂಬಂಧಿಸಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಇಬ್ಬರು ಕ್ರಿಕೆಟಿಗರಿಗೆ ಸೇರಿರುವ ಒಟ್ಟು 11.14 ಕೋಟಿ ರೂ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಂಡಿದೆ. ಇದೀಗ ಈ ಬಗ್ಗೆ ಕರ್ನಾಟಕ ಮೂಲದ ತೆಲಂಗಾಣ ಕೇಡರ್​​​ನ ಐಪಿಎಸ್​​​ ಅಧಿಕಾರ ಹಾಗೂ ಹೈದರಬಾದ್​​ ಪೊಲೀಸ್​ ಆಯುಕ್ತರಾಗಿರುವ ವಿಶ್ವನಾಥ್ ಸಿ ಸಜ್ಜನರ್​​ ಅವರು ಶಿಖರ್ ಧವನ್ ಹಾಗೂ ಸುರೇಶ್ ರೈನಾ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಜನರಲ್ಲಿ ತಪ್ಪು ಕಲ್ಪನೆಯನ್ನು ಸೃಷ್ಟಿಸಿ,ಅವರ ದಾರಿ ತಪ್ಪಿಸುವವರು ಸೆಲೆಬ್ರಿಟಿಗಳೇ? ಎಂದು ಪ್ರಶ್ನೆ ಮಾಡಿದ್ದಾರೆ. ವಿಶ್ವನಾಥ್ ಸಿ ಸಜ್ಜನರ್ ಅವರು ಎಕ್ಸ್​​ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. “ಇವರು ಭಾರತದ ಸೆಲೆಬ್ರಿಟಿಗಳಾ? ಜನರಿಂದ ಹಣ ಪಡೆದು ಆದರ್ಶ ವ್ಯಕ್ತಿಗಳು ಅಥವಾ ಆಟಗಾರರಾಗಲು ಹೇಗೆ ಸಾಧ್ಯ? ಬೆಟ್ಟಿಂಗ್​​ ಎನ್ನುವುದು ಯುವಕರಿಗೆ ಅಂಟಿರುವ ಸಾಂಕ್ರಾಮಿಕ ರೋಗ, ಇದರಿಂದ ಅವರ ಜೀವನ ಹಾಳಾಗಿದೆ. ಅದೆಷ್ಟೋ ಯುವಕರು ಈ ಬೆಟ್ಟಿಂಗ್​​ ಹುಚ್ಚಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಡೀ ಸಮಾಜಕ್ಕೆ ಮಾರಕವಾಗಿರುವ ಈ ಬೆಟ್ಟಿಂಗ್ ಬಗ್ಗೆ ಪ್ರಚಾರ ನೀಡುವವರು ಈ ಯುವಕರ ಸಾವಿಗೆ ಕಾರಣ ಅಲ್ಲವೇ? ಯುವಕರನ್ನು ಉದ್ದಾರ ಮಾಡುವ, ಅವರ ಜೀವನಕ್ಕೆ ಲಾಭ ಆಗುವ ಒಳ್ಳೆಯ ಮಾತುಗಳನ್ನು ಹೇಳಿ, ಅದು ಬಿಟ್ಟು ಅವರನ್ನು ನಾಶ ಮಾಡುವ ಅಥವಾ ಪ್ರಾಣ ಕಳೆದುಕೊಳ್ಳವ ವಿಷಯಗಳನ್ನು ಪ್ರಚಾರ ಮಾಡಬೇಡಿ” ಎಂದು ಹೇಳಿದ್ದಾರೆ.

ಇಲ್ಲಿದೆ ನೋಡಿ ಪೋಸ್ಟ್​​:

ಏನಿದು ಪ್ರಕರಣ:

ಶಿಖರ್ ಧವ್ನ ಹಾಗೂ ಸುರೇಶ್ ರೈನಾ ಇಬ್ಬರೂ ವಿದೇಶಿ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡು ಅಕ್ರಮ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ 1xBet ಅನ್ನು ಪ್ರಚಾರ ಮಾಡಿದ್ದಾರೆ ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಹಾಗೆಯೇ ಇವರಿಬ್ಬರು 1xBet ಮತ್ತು ಅದರ ಅಂಗಸಂಸ್ಥೆಗಳನ್ನು ಉತ್ತೇಜಿಸಲು ವಿದೇಶಿ ಸಂಸ್ಥೆಗಳೊಂದಿಗೆ ಗೊತ್ತಿದ್ದೂ ಜಾಹೀರಾತು ಒಪ್ಪಂದಗಳನ್ನು ಮಾಡಿಕೊಂಡಿರುವುದು ಖಚಿತವಾಗಿದೆ. ಹೀಗಾಗಿ ಇವರಿಬ್ಬರ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಇದನ್ನೂ ಓದಿ: ಶಿಖರ್ ಧವನ್‌, ಸುರೇಶ್ ರೈನಾಗೆ ಸೇರಿದ 11.14 ಕೋಟಿ ಮೌಲ್ಯದ ಆಸ್ತಿ ಜಪ್ತಿ

ವಿಶ್ವನಾಥ್ ಸಿ ಸಜ್ಜನರ್ ಯಾರು?

ವಿಶ್ವನಾಥ್ ಸಿ ಸಜ್ಜನರ್ ಪ್ರಸ್ತುತ ತೆಲಂಗಾಣ ಕೇಡರ್​​​ನ ಐಪಿಎಸ್​​​ ಅಧಿಕಾರ ಹಾಗೂ ಹೈದರಬಾದ್​​ ಪೊಲೀಸ್​ ಆಯುಕ್ತರಾಗಿದ್ದಾರೆ. ಈ ಹಿಂದೆ ಟಿಎಸ್​​​​​ ಆರ್​​ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೋವಿಡ್​​​-19 ಸಮಯದಲ್ಲಿ ಭಾರೀ ಜನಪ್ರಿಯ ಅಧಿಕಾರಿಯಾಗಿದ್ದರು. ಇನ್ನು ರೌಡಿಗಳಿಗೆ, ಸಿಂಹಸ್ವಪ್ನ ಆಗಿದ್ದಾರೆ. ವಿಶ್ವನಾಥ್ ಸಿ ಸಜ್ಜನರ್ ಅವರು ಮೂಲತ ಕರ್ನಾಟಕದ ಹುಬ್ಬಳ್ಳಿಯವರು.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ