AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಪ್​ಸ್ಟಿಕ್​ ಓಕೆ ಬ್ಯಾಂಡ್​ಏಡ್​ಗೆಲ್ಲ ಏಕೆ? ನೆಟ್ಟಿಗರಲ್ಲಿ ಭಾರೀ ಚರ್ಚೆ

Band-Aid : ಒಂದು ಸಣ್ಣ ಗಾಯದ ಪಟ್ಟಿಗೆ ಇಷ್ಟೆಲ್ಲ ಯೋಚಿಸಬೇಕಾ ಎಂದು ಕೆಲವರು. ಮೈಬಣ್ಣದ ವಿಷಯವಾಗಿ ನೊಂದುಕೊಳ್ಳುವವರ ಸಂಕಟದ ಬಗ್ಗೆ ನಿಮಗೇನು ಗೊತ್ತು ಎಂದು ಕೆಲವರು. ನೀವೇನಂತೀರಿ?

ಲಿಪ್​ಸ್ಟಿಕ್​ ಓಕೆ ಬ್ಯಾಂಡ್​ಏಡ್​ಗೆಲ್ಲ ಏಕೆ? ನೆಟ್ಟಿಗರಲ್ಲಿ ಭಾರೀ ಚರ್ಚೆ
ಬಣ್ಣಬಣ್ಣದ ಬ್ಯಾಂಡ್​ಏಡ್
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:May 10, 2023 | 11:02 AM

Share

Viral News : ಒಂದು ಬ್ಯಾಂಡ್​ಕೊಡಿ ಎಂದರೆ ಅಂಗಡಿಯವ ನಿಮ್ಮೆದುರು ಈವತ್ತು ನಾಲ್ಕೈದು ಬ್ಯಾಂಡ್​ಏಡ್​ಗಳನ್ನು ನಿಮ್ಮೆದುರು ಹರವಿಟ್ಟರೆ ಅಚ್ಚರಿ ಪಡಬೇಕಿಲ್ಲ. ಏಕೆಂದರೆ ನಿಮ್ಮ ಮೈಬಣ್ಣಕ್ಕೆ ಒಪ್ಪುವಂಥ ವಿವಿಧ ಛಾಯೆಯ ಬ್ಯಾಂಡ್​ಏಡ್​ಗಳು ಮಾರುಕಟ್ಟಗೆ ಬಂದಿವೆ. ಇದೀಗ ವೈರಲ್ ಆಗಿರುವ ಈ ಟ್ವೀಟ್​ ನೋಡಿ. ಉದ್ಯಮಿ ಹರ್ಷ ಗೋಯೆಂಕಾ ಹಂಚಿಕೊಂಡಿದ್ದಾರೆ. ನೆಟ್ಟಿಗರೂ ಈ ಬಗ್ಗೆ ಭಾರೀ ಚರ್ಚೆ ನಡೆಸಿದ್ದಾರೆ.

ಮೈಬಣ್ಣಕ್ಕೆ ಒಪ್ಪುವಂಥ ಬ್ಯಾಂಡ್​ಏಡ್​ ಅವಶ್ಯಕತೆ ನಿಜಕ್ಕೂ ಇದೆಯಾ? ಕೆಲ ಆವಿಷ್ಕಾರಗಳು ನಿಜಕ್ಕೂ ಅರ್ಥಹೀನ! ಎಂದು ಹರ್ಷ ಗೋಯೆಂಕಾ ಕೇಳಿದ್ಧಾರೆ. ಅದಕ್ಕೆ ಪ್ರತಿಯಾಗಿ ನೆಟ್ಟಿಗರು ಪರವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ಮಧ್ಯರಾತ್ರಿ ಗೂಳಿಸವಾರಿ; ಪೊಲೀಸರೆದುರು ತಪ್ಪೊಪ್ಪಿಕೊಂಡ ಯುವಕ

ಒಂದು ಸಣ್ಣಗಾಯಕ್ಕೆ ಅಂಟಿಸುವ ಪಟ್ಟಿಯ ಬಗ್ಗೆ ಇಷ್ಟೊಂದು ಯೋಚಿಸಿ ತೊಗಿಕೊಳ್ಳಬೇಕಾದ ಅವಶ್ಯಕತೆ ಇದೆಯಾ? ಇದೆಲ್ಲ ಮಾರಾಟದ ಗಿಮಿಕ್​ ಎಂದು ಕೆಲವರು ಹೇಳಿದ್ಧಾರೆ. ಅದಕ್ಕೆ ಪ್ರತಿಯಾಗಿ ಇನ್ನೂ ಕೆಲವರು, ಚರ್ಮದ ಬಣ್ಣಕ್ಕಾಗಿ ಜೀವಮಾನವಿಡೀ ನೊಂದುಕೊಳ್ಳುವವರ ಸಂಕಟ ನಿಮಗೇನು ಅರ್ಥವಾಗುತ್ತೆ? ಎಂದು ಕೇಳಿದ್ಧಾರೆ.

ಇದನ್ನೂ ಓದಿ : ವೈರಲ್ ಚಿಲ್ಲಿ ಲಿಪ್​ ಗ್ಲಾಸ್​; ಇದನ್ನು ಟ್ರೆಂಡ್​ ಆಗಲು ಬಿಡಬೇಡಿ ಎನ್ನುತ್ತಿರುವ ನೆಟ್ಟಿಗರು

ಲಿಪ್​ಸ್ಟಿಕ್ ಅಲ್ಲವಲ್ಲ? ಇದು ಗಾಯಕ್ಕೆ ಹಚ್ಚಿಕೊಳ್ಳುವ ಪಟ್ಟಿ, ಯಾವ ಬಣ್ಣವಾದರೆ ಏನು? ಗಾಯ ಮಾಗಿದ ಮೇಲೆ ಕಿತ್ತೊಗೆಯುವುದೇ ಅಲ್ಲವೇ ಎಂದು ಕೇಳಿದ್ಧಾರೆ ಒಬ್ಬರು. ನಿಮಗಿದೆಲ್ಲ ಅರ್ಥವಾಗಲ್ಲ, ಅವರವರಿಗೆ ಅವರದೇ ಆದ ಆಯ್ಕೆಗಳಿರುತ್ತವೆ. ಆ ಪ್ರಕಾರ ಅವರು ಖರೀದಿಸುತ್ತಾರೆ ನಿಮಗೆ ಬೇಡವಾದರೆ ನೀವು ಸುಮ್ಮನಿರಿ ಎಂದಿದ್ದಾರೆ ಮತ್ತೊಬ್ಬರು. ಅಯ್ಯೋ ದೇವರೇ ನಿಮ್ಮ ವಾದಗಳೆಲ್ಲ ಸರಿಯೇ. ಈಗ ಮುಂದೇನು ಮಾಡುವುದು? ಎಂದು ಮತ್ತೊಬ್ಬರು ಕೇಳಿದ್ದಾರೆ.

ನೀವೇನಂತೀರಿ? ಬಣ್ಣಬಣ್ಣದ ಬ್ಯಾಂಡ್​ಏಡ್ ಮಾರುಕಟ್ಟೆಯಲ್ಲಿರುವುದು ಅನುಕೂಲವೇ ಅನಾನುಕೂಲವೇ? ಏನೇ ಆದರೂ ಆಗುವ ಗಾಯ ಮತ್ತು ಮಾಗುವ ಪ್ರಕ್ರಿಯೆ ಒಂದೇ ಅಲ್ಲವೇ?

 ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:49 am, Wed, 10 May 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ