AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ದೀಪಾವಳಿಯನ್ನು ಅಷ್ಟೊಂದು ಸಂಭ್ರಮದಿಂದ ಆಚರಿಸುವುದಿಲ್ಲ, ಕಾರಣ ಇಲ್ಲಿದೆ

Kerala : ಕೇರಳವು ವಿವಿಧ ಸಮುದಾಯಗಳಿಂದ ಕೂಡಿದ್ದು ಬಹುಮುಖಿ ಸಂಸ್ಕೃತಿಯನ್ನು ಹೊಂದಿದೆ. ಹಾಗಾಗಿ ಇಲ್ಲಿ ಹಬ್ಬಗಳ ಮಹತ್ವ, ಆಚರಣೆ ಕೂಡ ಉತ್ತರ ಭಾರತದ ವೈದಿಕ ಸಂಸ್ಕೃತಿಗಿಂತ ವಿಭಿನ್ನವಾಗಿರುತ್ತದೆ.

ಕೇರಳದಲ್ಲಿ ದೀಪಾವಳಿಯನ್ನು ಅಷ್ಟೊಂದು ಸಂಭ್ರಮದಿಂದ ಆಚರಿಸುವುದಿಲ್ಲ, ಕಾರಣ ಇಲ್ಲಿದೆ
Why the festival of lights is not celebrated widely in Kerala
TV9 Web
| Updated By: ಶ್ರೀದೇವಿ ಕಳಸದ|

Updated on:Oct 20, 2022 | 1:13 PM

Share

Trending : ನಮ್ಮ ಭಾರತ ಬಹುಮುಖಿ ಸಂಸ್ಕೃತಿಯನ್ನು ಹೊಂದಿರುವ ದೇಶ. ವಿವಿಧ ಭಾಷೆ, ಆಚರಣೆ, ಪ್ರತೀತಿಗಳಿಂದ ಕೂಡಿದ ವೈವಿಧ್ಯಮಯ ನೆಲ. ಒಂದೊಂದು ಕಡೆ ಒಂದೊಂದು ರೀತಿಯ ಆಚರಣೆ, ಸಂಭ್ರಮ.  ಇನ್ನೇನು ದೀಪಾವಳಿ ಹತ್ತಿರದಲ್ಲಿಯೇ ಇದೆ. ಎಲ್ಲೆಡೆ ಈಗಾಗಲೇ ಜೋರು ತಯಾರಿ ಶುರುವಾಗಿದೆ. ಆದರೆ ಕೇರಳದಲ್ಲಿ ಮಾತ್ರ ದೀಪಾವಳಿಯನ್ನು ಅಷ್ಟೊಂದು ವಿಜೃಂಭಣೆಯಿಂದ ಆಚರಿಸುವ ಕ್ರಮ ಇಲ್ಲ. ಕೇರಳ ದಕ್ಷಿಣ ಭಾರತದ ಭಾಗವೇ ಆಗಿದ್ದರೂ ಕೂಡ ಅಕ್ಕಪಕ್ಕದ ರಾಜ್ಯಗಳು ಆಚರಿಸಿದಷ್ಟು ಜೋರಾದ ಸಂಭ್ರಮ ಅಲ್ಲಿರುವುದಿಲ್ಲ. ಇದಕ್ಕೆ ಇದರದೇ ಆದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದೆ. ಕೇರಳ ದ್ರಾವಿಡ ಸಂಸ್ಕೃತಿಯನ್ನು ಹೊಂದಿರುವುದೇ ಇದಕ್ಕೆ ಕಾರಣ.

ದಕ್ಷಿಣ ಭಾರತವು ದ್ರಾವಿಡ ಸಂಸ್ಕೃತಿಯನ್ನು ಅನುಮೋದಿಸಿದರೆ, ಉತ್ತರ ಭಾರತವು ವೈದಿಕ ಸಂಸ್ಕೃತಿಯಿಂದ ಪೋಷಿತವಾಗಿದೆ. ಕೇರಳವನ್ನು ಅಸುರ ರಾಜನಾದ ಮಹಾಬಲಿಯು ಆಳಿದನೆಂಬ ಪ್ರತೀತಿ ಪುರಾಣಗಳಲ್ಲಿದೆ. ಹಾಗಾಗಿ ಮಹಾಬಲಿಯ ನೆನಪಿಗಾಗಿ ಕೇರಳದಲ್ಲಿ ಆಚರಿಸುವ ಸಂಭ್ರಮದ ಮತ್ತು ದೊಡ್ಡ ಹಬ್ಬ ಓಣಂ. ಇನ್ನು ಉತ್ತರಭಾರತದಲ್ಲಿ ದೀಪಾವಳಿಯು, ರಾಮನು ರಾವಣನ ವಿರುದ್ಧ ವಿಜಯ ಸಾಧಿಸಿದುದನ್ನು ಸಾಂಕೇತಿಸುತ್ತದೆ. ಆದ್ದರಿಂದ ರಾಕ್ಷಸನ ಹತ್ಯೆಯನ್ನು ಮಲಯಾಳಿಗಳು ಸಂಭ್ರಮಿಸಲಾರರು ಹಾಗೆಯೇ ರಾಮನ ಪುನರಾಗಮನವನ್ನೂ ಸ್ವಾಗತಿಸಲಾರರು. ಆದರೆ ಕೃಷ್ಣನ ಆರಾಧಕರಾದ ಮಲಯಾಳಿಗಳು ಕೃಷ್ಣನು ನರಕಾಸುರನನ್ನು ವಧೆ ಮಾಡಿದ ಎನ್ನುವುದನ್ನು ಮಾತ್ರ ಒಪ್ಪುತ್ತಾರೆ.

ಕೇರಳವು ಹಿಂದೂ, ಕ್ರಿಶ್ಚಿಯನ್​, ಮುಸ್ಲಿಮ್​ ಮತ್ತು ಇತರೇ ಸಮುದಾಯದವರಿಂದ ಮಿಳಿತಗೊಂಡು ಬಹುಮುಖಿ ಸಂಸ್ಕೃತಿಯಿಂದ ರೂಪುಗೊಂಡಿದೆ. ಆ ಕಾರಣದಿಂದಾಗಿ ಇಲ್ಲಿಯ ಆಚರಣೆಗಳಿಗೆ ಅದರದೇ ಆದ ಹಿನ್ನೆಲೆ, ಮಹತ್ವ ಮತ್ತು ವೈಶಿಷ್ಟ್ಯ ಇದೆ. ಆದ್ದರಿಂದಲೇ ಉತ್ತರ ಭಾರತದಲ್ಲಿ ಆಚರಿಸುವ ಹಬ್ಬಗಳೆಲ್ಲವನ್ನೂ ಇಲ್ಲಿ ಅಷ್ಟೇ ಸಂಭ್ರಮದಿಂದ ಆಚರಿಸುವ ಕ್ರಮ ಇಲ್ಲ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:55 pm, Thu, 20 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ