AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಫಸ್ಟ್‌ ನೈಟ್‌ಗೆ ಸ್ನೇಹಿತರು ಇಷ್ಟೊಂದು ಕಾಟ ಕೊಡೋದಾ, ಗಿಚ್ಚಿ ಗಿಲಿಗಿಲಿ ಧನರಾಜ್‌ ಹಂಚಿಕೊಂಡ ವಿಡಿಯೋ

ಮದುವೆ ಮನೆಯಲ್ಲಿ ಅಥವಾ ಫಸ್ಟ್‌ ನೈಟ್‌ ದಿನ ಗೆಳೆಯರು ಮತ್ತು ಸಂಬಂಧಿಕರು  ಮದುಮಕ್ಕಳಿಗೆ ಕಾಟ ಕೊಡುತ್ತಾ ತರ್ಲೆ ತಮಾಷೆ ಮಾಡುತ್ತಿರುತ್ತಾರೆ. ಇದೀಗ ಅಂತಹದ್ದೇ ಫನ್ನಿ ವಿಡಿಯೋವನ್ನು ಯುಟ್ಯೂಬರ್‌ ಧನರಾಜ್‌ ಆಚಾರ್‌ ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು,   ಅಯ್ಯಯೋ ಫಸ್ಟ್‌ ನೈಟ್‌ ಅಲ್ಲಿ ಮದುಮಕ್ಕಳಿಗೆ ಇಷ್ಟೊಂದು ಕಾಟ ಕೊಡೋದಾ ಎಂದು ವಿಡಿಯೋ ನೋಡಿ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

Video: ಫಸ್ಟ್‌ ನೈಟ್‌ಗೆ ಸ್ನೇಹಿತರು ಇಷ್ಟೊಂದು ಕಾಟ ಕೊಡೋದಾ, ಗಿಚ್ಚಿ ಗಿಲಿಗಿಲಿ ಧನರಾಜ್‌ ಹಂಚಿಕೊಂಡ ವಿಡಿಯೋ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:May 24, 2024 | 3:03 PM

Share

ಸೋಷಿಯಲ್‌ ಮೀಡಿಯಾದ ಬಳಕೆದಾರರಿಗೆ ಧನರಾಜ್‌ ಆಚಾರ್‌ ಚಿರಪರಿಚಿತ. ಇವರು ತಮ್ಮ ಕ್ರಿಯೆಟಿವ್‌ ಕಂಟೆಂಟ್‌ ಹಾಗೂ ವಿಭಿನ್ನ ಮ್ಯಾನರಿಸಂ ಕಾಮಿಡಿ ಮೂಲಕ ಜನರಿಗೆ ತುಂಬಾನೇ ಹತ್ತಿರವಾದವರು. ಗಿಚ್ಚಿ ಗಿಲಿಗಿಲಿ ಶೋ ಮೂಲಕ ಕಿರುತೆರೆ ಪ್ರವೇಶಿಸಿದ ಇವರು  ಯುಟ್ಯೂಬ್‌ ಸೇರಿದಂತೆ  ಇತರೆ ಸೋಷಿಯಲ್‌ ಮೀಡಿಯಾ ಫ್ಲಾಟ್‌ಫಾರ್ಮ್‌ಗಳಲ್ಲಿ  ವ್ಲಾಗ್ಸ್‌, ಕಾಮಿಡಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ಜನರನ್ನು ಮನರಂಜಿಸುತ್ತಿರುತ್ತಾರೆ. ಸದ್ಯ ಇದೇ ರೀತಿಯ ಹಾಸ್ಯಮಯ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಮದುಮಕ್ಕಳಿಗೆ ಫಸ್ಟ್‌ ನೈಟ್‌ ದಿನ ಧನರಾಜ್‌ ಕುಟುಂಬಸ್ಥರು ಕೊಟ್ಟ ಕಾಟಕ್ಕೆ ನೆಟ್ಟಿಗರು ನಕ್ಕು ನಕ್ಕು ಸುಸ್ತಾಗಿದ್ದಾರೆ.

ಈ ವಿಡಿಯೋವನ್ನು ಧನರಾಜ್‌ ಆಚಾರ್‌ (@Dhanraj Achar) ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ತೊಂದ್ರೆ ಕೊಡ್ಬೇಕು! ಆದ್ರೆ ಇಷ್ಟೊಂದಾ?” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್‌ ವಿಡಿಯೋದಲ್ಲಿ ಮದುವೆ ಮನೆಯಲ್ಲಿ ನವ ವಧುವರರ ಫಸ್ಟ್‌ ನೈಟ್‌ ದಿನ ಧನರಾಜ್‌ ಆಚಾರ್‌ ಮತ್ತು ಅವರು ಕುಟುಂಬದವರು ಪ್ರಸ್ತದ ಕೋಣೆಯನ್ನು ರೆಡಿ ಮಾಡುತ್ತಾ, ಮದುಮಕ್ಕಳನ್ನು ಕಾಲೆಳೆಯುತ್ತಾ ತರ್ಲೆ ತಮಾಷೆ ಮಾಡುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಒಂಟಿ ಕಾಲಿನಲ್ಲಿ ನಿಂತು ಬೆಂಗಳೂರಿನ ಬೀದಿ ಬದಿ ದೋಸೆ ಮಾರುವ ಈ ಯುವತಿಯ ಛಲಕ್ಕೆ ಸೋತ ಕ್ರಿಕೆಟ್​​​ ದಿಗ್ಗಜ 

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹಾಸ್ಯಮಯ ದೃಶ್ಯವನ್ನು ಕಂಡು ಸೋಷಿಯಲ್‌ ಮೀಡಿಯಾದ ಬಳಕೆದಾರರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:55 pm, Fri, 24 May 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ