AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​ನಲ್ಲಿ ಸಸ್ಯಾಹಾರ ಲಭ್ಯವೆ? ಟ್ವಿಟರ್​ನಲ್ಲಿ ತರಕಾರಿಯನ್ನೆಲ್ಲ ತಂದುಸುರಿದ​ ಸಚಿವ

Veg Food in Nagaland : ನೋಡಿ ಇಲ್ಲಿ ಬೆಳೆದ ಸಾವಯವ ತರಕಾರಿ. ಆದರೂ ನಾವು ಫ್ರೆಂಚ್ ಫ್ರೈ ಹಿಂದೆ ಹೋಗುತ್ತೇವೆ ಎಂದಿದ್ದಾರೆ ನಾಗಾಲ್ಯಾಂಡ್​ ಸಚಿವರು. ಅಣ್ಣಾ, ಅಲ್ಲಿಯೇ ಕಾಯಂ ಆಗಿ ನೆಲೆಗೊಳ್ಳುವ ಮಾರ್ಗ ಯಾವುದೆಂದು ತಿಳಿಸಿ ಎಂದಿದ್ದಾರೆ ನೆಟ್ಟಿಗರು.

ನಾಗಾಲ್ಯಾಂಡ್​ನಲ್ಲಿ ಸಸ್ಯಾಹಾರ ಲಭ್ಯವೆ? ಟ್ವಿಟರ್​ನಲ್ಲಿ ತರಕಾರಿಯನ್ನೆಲ್ಲ ತಂದುಸುರಿದ​ ಸಚಿವ
Do you get veg food in Nagaland? Minister answers in new post on Twitter
TV9 Web
| Edited By: ಶ್ರೀದೇವಿ ಕಳಸದ|

Updated on: Nov 14, 2022 | 6:15 PM

Share

Viral : ನಾಗಾಲ್ಯಾಂಡ್​ನ ಸಚಿವ ತೆಮ್ಜೆನ್​​ ಇಮ್ನಾ ಅಲಾಂಗ್​ ಆಗಾಗ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹಾಸ್ಯಪ್ರವೃತ್ತಿಯಿಂದ ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ. ನಾಗಾಲ್ಯಾಂಡ್​ನಲ್ಲಿ ಸಸ್ಯಾಹಾರ ಲಭ್ಯವೇ ಎಂದು ಯಾರೋ ಕೇಳಿದ್ದಕ್ಕೆ ಅವರು ಕೊಟ್ಟ ತಾಜಾ ತಾಜಾ ಸಾಕ್ಷಿ ಹೇಗಿದೆ ನೋಡಿ! ಸೊಪ್ಪುಗಳು, ಸೋರೆಕಾಯಿ, ಅಣಬೆ, ಬದನೆಕಾಯಿ, ಎಳೆಬಿದಿರು, ಹಣ್ಣುಗಳು ಹೀಗೆ ಅಲ್ಲಿ ತರಕಾರಿ ಮಂಡಿಯನ್ನೇ ಟ್ವೀಟ್ ಮಾಡಿದ್ದಾರೆ. ನೆಟ್ಟಿಗರು ಇದನ್ನು ನೋಡಿ ಸುಸ್ತೋಸುಸ್ತು.

ತೆಮ್ಜೆನ್​ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಫಾಲೋವರ್​ಗಳನ್ನ ಹೇಗೆ ಕಾಯ್ದುಕೊಳ್ಳಬೇಕು ಎನ್ನುವುದು ಚೆನ್ನಾಗಿ ತಿಳಿದಿದೆ. ನವೆಂಬರ್ 13ರಂದು ಇವರು ಈ ಪೋಸ್ಟ್​ ಹಂಚಿಕೊಂಡಿದ್ದಾರೆ. ನಿಮ್ಮ ನಾಗಾಲ್ಯಾಂಡ್​ನಲ್ಲಿ ತರಕಾರಿ ಸಿಗುತ್ತದೆಯೆ ಎಂದು ಯಾರೋ ಕೇಳಿದ್ದಕ್ಕೆ ಅವರು ಹೀಗೆ ಟ್ವೀಟ್ ಮಾಡಿದ್ದಾರೆ, ‘ಇಷ್ಟೆಲ್ಲ ಸಾವಯವ ತರಕಾರಿ, ಹಣ್ಣು, ಸೊಪ್ಪುಗಳಿದ್ದಾಗಲೂ ನಾವು ಫ್ರೆಂಚ್ ಫ್ರೈಗೆ ಮಾರುಹೋಗುತ್ತೇವೆ. ನೋಡಿ ನಾಗಾಲ್ಯಾಂಡ್​ನ ತರಕಾರಿ’ ಎಂದಿದ್ದಾರೆ. ​

ಅಬ್ಬಾ ಎಷ್ಟು ತಾಜಾತನದಿಂದ ಇದೆಲ್ಲವೂ ಕೂಡಿದೆ. ಅಷ್ಟೊಂದು ಚೆನ್ನಾಗಿ ಬಾಳೆ ಎಲೆ ಮೇಲೆ ಹರಡಿಕೊಂಡು ಸುತ್ತಿಕೊಂಡು ಇರುವ ಈ ಎಲ್ಲವನ್ನ ನೋಡುವುದೇ ಆನಂದ ಎಂದಿದ್ದಾರೆ ಒಬ್ಬರು. ಆಸೆಯಾಗುತ್ತಿದೆ ಇದೆಲ್ಲವನ್ನು ನೋಡುತ್ತಿದ್ದರೆ ಎಂದಿದ್ದಾರೆ ಇನ್ನೊಬ್ಬರು.

ಹೌದು! ಈ ತರಕಾರಿಗಳು ರೈತರಿಂದ ನೇರ ಮಾರಾಟ ಸ್ಥಳಕ್ಕೆ ಬಂದಂಥವು ಎಂದಿದ್ದಾರೆ ಮಗದೊಬ್ಬರು. ಅಣ್ಣಾ, ದಯವಿಟ್ಟು ಝೊಮ್ಯಾಟೋ ಮೂಲಕ ಆನ್​ಲೈನ್​ ಡೆಲಿವರಿ ಮಾಡಿ. ಇಂದು ಬೆಳೆದಿದ್ದನ್ನು ನಾಳೆ ಸಿಗುವಂತೆ ಮಾಡಿ ಎನ್ನುತ್ತಿದ್ದಾರೆ ಇನ್ನೊಬ್ಬರು. ಸರ್​, ನಿಮ್ಮ ಊರಿಗೆ ಶಿಫ್ಟ್​ ಆಗಲು ಏನು ಪ್ರೊಸೀಜರ್ ಇದೆ ಎಂದು ಕೇಳಿದ್ದಾರೆ ಇನ್ನೊಬ್ಬರು. ನಿಮ್ಮನ್ನು ನಾಗಾಲ್ಯಾಂಡ್​ನಲ್ಲಿ ಎಲ್ಲಿ ಭೇಟಿ ಮಾಡಬೇಕು ಎಂದಿದ್ದಾರೆ ಯಾರೋ ಒಬ್ಬರು. ಇದೆಲ್ಲ ನೋಡಿ ಫ್ರೆಂಚ್​ ಫ್ರೈಸ್​ ಓಡಿ ಹೋಗುತ್ತದೆ ಎಂದಿದ್ದಾರೆ ಮಗದೊಬ್ಬರು.

ಏನೀಗ ನೀವು ನಾಗಾಲ್ಯಾಂಡ್​ಗೆ ಹೋಗಬೇಕು ಎಂದುಕೊಳ್ಳುತ್ತಿದ್ದೀರೋ ಹೇಗೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು