AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟೊಮ್ಯಾಟೋ ಬೆಲೆ ದುಬಾರಿಯಾಗಲು ಕಾರಣರಾದವರ ವಿಡಿಯೋ ವೈರಲ್

Golden Retriever : ಒಂದು ತಿಂಗಳಿನಿಂದ ತಲೆನೋವಾಗಿರುವ ಈ ಸಮಸ್ಯೆಯ ಮೂಲವನ್ನು ಟ್ವಿಟರ್ ಸಾಕ್ಷಿ ಸಮೇತ​ ಪತ್ತೆ ಹಚ್ಚಿದೆ. ಘನಗಂಭೀರೆಯಂತೆ ಕಾಣುವ ಈ ಕಳ್ಳಿಯು ಹೇಗೆ ಈ ಕೃತ್ಯದಲ್ಲಿ ತೊಡಗಿಕೊಂಡಿದ್ದಳು ಎನ್ನುವುದನ್ನು ನೋಡಿ.

Viral Video: ಟೊಮ್ಯಾಟೋ ಬೆಲೆ ದುಬಾರಿಯಾಗಲು ಕಾರಣರಾದವರ ವಿಡಿಯೋ ವೈರಲ್
ಟೊಮ್ಯಾಟೋ ಕಳ್ಳಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 18, 2023 | 6:10 PM

Share

Tomato : ಟೊಮ್ಯಾಟೋ ಬೆಲೆ ಇಷ್ಟೊಂದೇಕೆ ಏರಿದೆ ಎಂದು ಕೃಷಿ ತಜ್ಞರು, ಆರ್ಥಿಕ ತಜ್ಞರು, ಹವಾಮಾನ ತಜ್ಞರು, ರಾಜಕಾರಣಿಗಳು ಮತ್ತು ನಮ್ಮ ಅನ್ನದಾತರು ಎಷ್ಟೆಲ್ಲ ಯೋಚಿಸಿದರು. ಆದರೆ ಸರಿಯಾದ ಉತ್ತರ ದೊರಕಿತೆ? ಕಳೆದುಕೊಂಡಿದ್ದು ಒಂದೆಡೆ, ಹುಡುಕುವುದು ಇನ್ನೊಂದೆಡೆ ಎಂಬಂತಾದಾಗ ಸೂಕ್ತ ಉತ್ತರ ಹೇಗೆ ಸಿಗಲು ಸಾಧ್ಯ? ಅಂತೂ ಒಂದು ಟ್ವೀಟ್ (Tweet) ಮೂಲಕ ಸಾಕ್ಷಿಸಮೇತ ಇದಕ್ಕೆ ಕಾರಣ ಪತ್ತೆಯಾಗಿದೆ. ಘನಗಂಭೀರ ಮುಖಮುದ್ರೆ ಹೊತ್ತ ಕಳ್ಳಿಯೊಬ್ಬಳ ಕರಾಮತ್ತು ಇಡೀ ಜಗತ್ತಿಗೇ ಬಹಿರಂಗವಾಗಿದೆ! ಈ ವಿಡಿಯೋ ನೋಡಿದ ನೆಟ್ಟಿಗರು ನಗಲೂ ಆಗದ ಅಳಲೂ ಆಗದ ಪರಿಸ್ಥಿತಿಗೆ ಸಿಲುಕಿದ್ದಾರೆ.

ಆದರೆ ನೆಟ್ಟಿಗರು ಈ ಕಳ್ಳಿಯನ್ನೇ ಸಮರ್ಥಿಸಿಕೊಳ್ಳುತ್ತಿರುವುದು ಅಚ್ಚರಿಯನ್ನು ಹುಟ್ಟುಹಾಕುತ್ತಿದೆ. ಆಕೆಗೆ ಟೊಮ್ಯಾಟೋದ ಮಹತ್ವ ಗೊತ್ತು, ಕಳ್ಳರಿಂದ ಆಕೆ ಈ ಟೊಮ್ಯಾಟೋಗಳನ್ನು ರಕ್ಷಿಸಿದ್ದಾಳೆ ಎನ್ನುತ್ತಿದ್ದಾರೆ. ಈಕೆ ರಕ್ಷಿಸಿದ ಟೊಮ್ಯಾಟೋಗಳನ್ನು ನೀವು ತಿನ್ನುವಿರೇ? ಎಂದೂ ಕೇಳುತ್ತಿದ್ದಾರೆ. ಅದಕ್ಕೆ ಈ ಕಳ್ಳಿಯ ಪೋಷಕಿ, ಖಂಡಿತ! ತೊಳೆದು ತಿನ್ನುತ್ತೇನೆ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ : Viral: ಲೈಕ್​​ ಮಸುಕಾಗುತ್ತದೆ, ಡಿಜಿಟಲ್​ ಗುರುತು ಉಳಿಯುತ್ತದೆ; ಅಸ್ಸಾಂ ಪೊಲೀಸರ ಟ್ವೀಟ್​

ನಮ್ಮನೆಯಲ್ಲಿರುವ ಲ್ಯಾಬ್ರಡರ್​ ಕೂಡ ಈ ಗೋಲ್ಡನ್​ ರಿಟ್ರೈವರ್​ ಕಳ್ಳಿಯಂತೆಯೇ ಟೊಮ್ಯಾಟೋ ಕದಿಯುತ್ತಾನೆ ಎಂದಿದ್ದಾರೆ ಒಬ್ಬರು. ಬಾಯಿಯಲ್ಲಿಯೇ ಇಷ್ಟಿವೆ, ಇನ್ನು ಹೊಟ್ಟೆಯಲ್ಲಿ? ಎಂದು ಕೇಳಿದ್ದಾರೆ ಮತ್ತೊಬ್ಬರು. ಈ ವಿಡಿಯೋ ಅನ್ನು ಈತನಕ ಸುಮಾರು 14,000 ಜನರು ನೋಡಿದ್ದಾರೆ. 102 ಜನರು ರೀಟ್ವೀಟ್ ಮಾಡಿದ್ದಾರೆ. ಅನೇಕರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನು ನೋಡಿದ ನೀವು ಏನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:09 pm, Tue, 18 July 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?